ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಷ್ಠರೋಗ ಪ್ರಕರಣಗಳ ಸಮೀಕ್ಷೆ ಹಾಗೂ ಸರ್ಕಾರದ ಸೌಲಭ್ಯಗಳ ಬಗೆಗಿನ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ರೋಗದ ಆರಂಭಿಕ ಲಕ್ಷಣಗಳ ಪತ್ತೆಯಿಂದ ಕುಷ್ಠರೋಗವನ್ನು ನಿಯಂತ್ರಿಸಬಹುದು. ರೋಗದ ಲಕ್ಷಣಗಳು ಕಂಡುಬಂದ ತಕ್ಷಣವೇ ಅದನ್ನು ಪತ್ತೆ ಹಚ್ಚಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ, ಪ್ರಾಥಮಿಕ ಹಂತದಲ್ಲಿಯೇ ವೈದ್ಯಕೀಯ ಸೇವೆಗಳನ್ನು ನೀಡುವುದರಿಂದ ಹರಡುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ.
ಆರೋಗ್ಯ ಇಲಾಖೆ ಜೊತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಿ. ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಇಂದ ಕುಷ್ಠರೋಗ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.
*ಜಿಲ್ಲೆಯಲ್ಲಿ 202 ಸಕ್ರಿಯ ಪ್ರಕರಣಗಳು*
ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದ ಐವರು ಮಕ್ಕಳು ಸೇರಿದಂತೆ ಒಟ್ಟು 202 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಈ ರೋಗದಿಂದ ಬಳಲುವವರಿಗೆ ಇಲಾಖೆಯಿಂದ ದೃಢೀಕರಣ ಪತ್ರಗಳನ್ನು ನೀಡಿ ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಅವರಿಗೆ ಪೂರೈಸುವಂತೆ ಮಾಡಬೇಕು.
ಸಂಬಂಧಪಟ್ಟ ಇಲಾಖೆಗಳು ಸರ್ಕಾರದಿಂದ ಸಿಗುವ ಆರೋಗ್ಯ ಸೇವೆ, ಪಿಂಚಣಿ ಸೌಲಭ್ಯ, ಮನೆ ಸೌಲಭ್ಯ, ರೇಷನ್, ಶಿಕ್ಷಣ ಹಾಗೂ ಇತರೆ ಸವಲತ್ತುಗಳು ಎಲ್ಲಾ ಸಂತ್ರಸ್ತರಿಗೆ ಸಿಗಬೇಕು. ಸಮಾಜದ ಮುನ್ನೆಲೆಗೆ ಅವರನ್ನು ತಂದು ಸಾಮಾನತೆಯಿಂದ ಕಾಣುವುದು ಮಾನವವೀಯತೆ ಗುಣ. ಆ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಿ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ. ಉಮಾ ಎಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…