ಜಿಲ್ಲೆಯಲ್ಲಿ 202 ಕುಷ್ಠರೋಗ ಪ್ರಕರಣ ಸಕ್ರಿಯ:ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ- ಡಾ.ಪ್ರದೀಪ್ತಾ ಕುಮಾರ್ ನಾಯಕ್ ಸಲಹೆ

ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಷ್ಠರೋಗ ಪ್ರಕರಣಗಳ ಸಮೀಕ್ಷೆ ಹಾಗೂ ಸರ್ಕಾರದ ಸೌಲಭ್ಯಗಳ ಬಗೆಗಿನ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರೋಗದ ಆರಂಭಿಕ ಲಕ್ಷಣಗಳ ಪತ್ತೆಯಿಂದ ಕುಷ್ಠರೋಗವನ್ನು ನಿಯಂತ್ರಿಸಬಹುದು. ರೋಗದ ಲಕ್ಷಣಗಳು ಕಂಡುಬಂದ ತಕ್ಷಣವೇ ಅದನ್ನು ಪತ್ತೆ ಹಚ್ಚಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ, ಪ್ರಾಥಮಿಕ ಹಂತದಲ್ಲಿಯೇ ವೈದ್ಯಕೀಯ ಸೇವೆಗಳನ್ನು ನೀಡುವುದರಿಂದ ಹರಡುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ.

ಆರೋಗ್ಯ ಇಲಾಖೆ ಜೊತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಿ. ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಇಂದ ಕುಷ್ಠರೋಗ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.

*ಜಿಲ್ಲೆಯಲ್ಲಿ 202 ಸಕ್ರಿಯ ಪ್ರಕರಣಗಳು*

ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದ ಐವರು ಮಕ್ಕಳು ಸೇರಿದಂತೆ ಒಟ್ಟು 202 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಈ ರೋಗದಿಂದ ಬಳಲುವವರಿಗೆ ಇಲಾಖೆಯಿಂದ ದೃಢೀಕರಣ ಪತ್ರಗಳನ್ನು ನೀಡಿ ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಅವರಿಗೆ ಪೂರೈಸುವಂತೆ ಮಾಡಬೇಕು.

ಸಂಬಂಧಪಟ್ಟ ಇಲಾಖೆಗಳು ಸರ್ಕಾರದಿಂದ ಸಿಗುವ ಆರೋಗ್ಯ ಸೇವೆ, ಪಿಂಚಣಿ ಸೌಲಭ್ಯ, ಮನೆ ಸೌಲಭ್ಯ, ರೇಷನ್, ಶಿಕ್ಷಣ ಹಾಗೂ ಇತರೆ ಸವಲತ್ತುಗಳು ಎಲ್ಲಾ ಸಂತ್ರಸ್ತರಿಗೆ ಸಿಗಬೇಕು. ಸಮಾಜದ ಮುನ್ನೆಲೆಗೆ ಅವರನ್ನು ತಂದು ಸಾಮಾನತೆಯಿಂದ ಕಾಣುವುದು ಮಾನವವೀಯತೆ ಗುಣ. ಆ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಿ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ. ಉಮಾ ಎಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಶಂಕುಸ್ಥಾಪನೆಯೇ ಅಭಿವೃದ್ಧಿಯೇ?- ಶಾಸಕ ಧೀರಜ್ ಮುನಿರಾಜ್ ಪ್ರೋಗ್ರೆಸ್ ಕಾರ್ಡ್ ನೀಡಿ- ಕಾಂಗ್ರೆಸ್ ಯುವ ಘಟಕ ಆಗ್ರಹ

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…

13 hours ago

ದೊಡ್ಡಬಳ್ಳಾಪುರದಲ್ಲಿ ಹೈಟೆಕ್ ಮೀನುಗಾರರ ಮಾರುಕಟ್ಟೆ ಶೀಘ್ರ ಆರಂಭ- ಮಂಜುನಾಥ್ ಸುಣಗಾರ್

ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು…

13 hours ago

ಸರ್ಕಾರದಿಂದ ಮಾವು ಖರೀದಿಗೆ ನೋಂದಣಿ ಆರಂಭ:‌ ಮಾವು ಬೆಳೆಗಾರರು ಕೂಡಲೇ ನೋಂದಾಯಿಸಿ

ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಅಡಿ ಮಾವು ಖರೀದಿಗೆ ನೋಂದಣಿ…

15 hours ago

ನೇಕಾರಿಕೆ ಪರಂಪರೆಗೆ ಆಧುನಿಕ ಸವಾಲುಗಳು: ಅಸ್ತಿತ್ವಕ್ಕಾಗಿ ದೊಡ್ಡಬಳ್ಳಾಪುರ ನೇಕಾರರ ಹೋರಾಟ: ಅವನತಿಯತ್ತ ಸಾಗುತ್ತಿದೆ ಸುವರ್ಣಯುಗದ ವೈಭವ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…

2 days ago

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026: ಇಂದಿನಿಂದ ಬಿಎಲ್ಒ ಗಳು ಮನೆ ಮನೆ ಭೇಟಿ- ಡಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳ‍ವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…

2 days ago

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

2 days ago