ಜಿಲ್ಲೆಯಲ್ಲಿ 202 ಕುಷ್ಠರೋಗ ಪ್ರಕರಣ ಸಕ್ರಿಯ:ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ- ಡಾ.ಪ್ರದೀಪ್ತಾ ಕುಮಾರ್ ನಾಯಕ್ ಸಲಹೆ

ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಷ್ಠರೋಗ ಪ್ರಕರಣಗಳ ಸಮೀಕ್ಷೆ ಹಾಗೂ ಸರ್ಕಾರದ ಸೌಲಭ್ಯಗಳ ಬಗೆಗಿನ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರೋಗದ ಆರಂಭಿಕ ಲಕ್ಷಣಗಳ ಪತ್ತೆಯಿಂದ ಕುಷ್ಠರೋಗವನ್ನು ನಿಯಂತ್ರಿಸಬಹುದು. ರೋಗದ ಲಕ್ಷಣಗಳು ಕಂಡುಬಂದ ತಕ್ಷಣವೇ ಅದನ್ನು ಪತ್ತೆ ಹಚ್ಚಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ, ಪ್ರಾಥಮಿಕ ಹಂತದಲ್ಲಿಯೇ ವೈದ್ಯಕೀಯ ಸೇವೆಗಳನ್ನು ನೀಡುವುದರಿಂದ ಹರಡುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ.

ಆರೋಗ್ಯ ಇಲಾಖೆ ಜೊತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಿ. ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಇಂದ ಕುಷ್ಠರೋಗ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.

*ಜಿಲ್ಲೆಯಲ್ಲಿ 202 ಸಕ್ರಿಯ ಪ್ರಕರಣಗಳು*

ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದ ಐವರು ಮಕ್ಕಳು ಸೇರಿದಂತೆ ಒಟ್ಟು 202 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಈ ರೋಗದಿಂದ ಬಳಲುವವರಿಗೆ ಇಲಾಖೆಯಿಂದ ದೃಢೀಕರಣ ಪತ್ರಗಳನ್ನು ನೀಡಿ ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಅವರಿಗೆ ಪೂರೈಸುವಂತೆ ಮಾಡಬೇಕು.

ಸಂಬಂಧಪಟ್ಟ ಇಲಾಖೆಗಳು ಸರ್ಕಾರದಿಂದ ಸಿಗುವ ಆರೋಗ್ಯ ಸೇವೆ, ಪಿಂಚಣಿ ಸೌಲಭ್ಯ, ಮನೆ ಸೌಲಭ್ಯ, ರೇಷನ್, ಶಿಕ್ಷಣ ಹಾಗೂ ಇತರೆ ಸವಲತ್ತುಗಳು ಎಲ್ಲಾ ಸಂತ್ರಸ್ತರಿಗೆ ಸಿಗಬೇಕು. ಸಮಾಜದ ಮುನ್ನೆಲೆಗೆ ಅವರನ್ನು ತಂದು ಸಾಮಾನತೆಯಿಂದ ಕಾಣುವುದು ಮಾನವವೀಯತೆ ಗುಣ. ಆ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಿ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ. ಉಮಾ ಎಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

11 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

17 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

23 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

24 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago