ಜಿಲ್ಲೆಯಾದ್ಯಂತ 40 ಬಾಲ-ಕಿಶೋರ ಕಾರ್ಮಿಕರ ರಕ್ಷಣೆ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಾದ್ಯಂತ ಹೋಟೆಲ್, ಗ್ಯಾರೇಜ್, ವಾಣಿಜ್ಯ ಸಂಸ್ಥೆ, ಕಾರ್ಖಾನೆಗಳ ಮೇಲೆ ಅಧಿಕಾರಿಗಳು ಅನಿರೀಕ್ಷಿತ ತಪಾಸಣೆ ಮತ್ತು ದಾಳಿಯನ್ನು ನಡೆಸಿ ಮೂವರು ಬಾಲ ಕಾರ್ಮಿಕರು ಹಾಗೂ 37 ಕಿಶೋರ ಕಾರ್ಮಿಕರು ಸೇರಿ 40 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ ನಿರಂತರವಾಗಿ ಹೋಟೆಲ್, ಗ್ಯಾರೇಜ್,ಬೇಕರಿ, ವಾಣಿಜ್ಯ ಸಂಸ್ಥೆ, ಕೈಗಾರಿಕೆ ಮುಂತಾದ ಸ್ಥಳಗಳಿಗೆ ಅನಿರೀಕ್ಷಿತ ತಪಾಸಣೆ, ದಾಳಿ ನಡೆಸಿ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲಾಗುತ್ತಿದೆ. ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವುದು, ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಸಂಬಂಧಪಟ್ಟ ಮಾಲಿಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

*40 ಬಾಲ-ಕಿಶೋರ ಕಾರ್ಮಿಕರ ರಕ್ಷಣೆ*

2024-25 ನೇ ಸಾಲಿನಲ್ಲಿ 03 ಬಾಲ ಹಾಗೂ 37 ಕಿಶೋರ ಕಾರ್ಮಿಕರು ಸೇರಿ ಒಟ್ಟು 40 ಮಕ್ಕಳ ರಕ್ಷಣೆ ಮಾಡಲಾಗಿದ್ದು 11 ಪ್ರಕರಣಗಳಲ್ಲಿ 2,20,000 ರೂ.ಗಳ ದಂಡ ವಸೂಲಾತಿ ಮಾಡಲಾಗಿದೆ.

*ಕಾನೂನು ಕ್ರಮ*

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು ಅಂತಹವರಿಗೆ ಕನಿಷ್ಠ 06 ತಿಂಗಳಿಂದ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಅಥವಾ 20,000 ರೂ. ಗಳಿಂದ 50,000 ರೂಗಳ ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.

ಅಧಿಕಾರಿಗಳು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ. ಸಾರ್ವಜನಿಕರು ಕೂಡ ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಕಾರ್ಖಾನೆ ಅಥವಾ ಅಂಗಡಿ ಮುಂಗಟ್ಟುಗಳಲ್ಲಿ ಮಕ್ಕಳನ್ನು ದುಡಿಮೆಗೆ ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಕರೆ ಮಾಡಿ ದೂರು ನೀಡಿ ಎಂದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ನ್ಯಾಯಮೂರ್ತಿ ಬೋಲಾ ಪಂಡಿತ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕಿನ ಕಾರ್ಮಿಕ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

6 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

7 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

15 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago