Categories: ಕೋಲಾರ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಪಿಐಎಂ ಪಕ್ಷದಿಂದ 31 ನಿರ್ಣಯಗಳು- ಪಿ.ಆರ್ ಸೂರ್ಯನಾರಾಯಣ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದ ಸಿಪಿಐಎಂ ಪಕ್ಷದ 18 ನೇ ಜಿಲ್ಲಾ ಸಮ್ಮೇಳನದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಿ 31 ನಿರ್ಣಯ ಅಂಗೀಕಾರ ಮಾಡಲಾಗಿದೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು, ಸರ್ಕಾರಗಳ ಕಣ್ಣು ತೆರೆಸಲು ಹಾಗೂ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ಹೋರಾಟ ನಡೆಸುತ್ತೇವೆ ಎಂದು ಸಿಪಿಐಎಂ ಪಕ್ಷದ ನೂತನ ಜಿಲ್ಲಾ ಕಾರ್ಯದರ್ಶಿ ಪಿ.ಆರ್‌.ಸೂರ್ಯನಾರಾಯಣ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು ಕೈಗಾರಿಕೆಗಳ ಪ್ರದೇಶವಾಗಿದೆ ಮತ್ತಷ್ಟು ಕೈಗಾರಿಕೆ ಸ್ಥಾಪಿಸಲು ಭೂಸ್ವಾಧೀನಕ್ಕೆ ಮುಂದಾಗಿದ್ದಾರೆ. ಭೂಕಾಯ್ದೆ ಮಾರಕವಾಗಿದ್ದು ರೈತರು ಭೂಮಿ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ನಾವು ಕೈಗಾರಿಕೆ ವಿರೋಧಿ ಅಲ್ಲ ಆದರೆ, ಶ್ರೀನಿವಾಸಪುರದಲ್ಲಿ ಮಾವು ಬೆಳೆಯುತ್ತಿರುವ ಫಲವತ್ತಾದ ಕೃಷಿ ಭೂಮಿಯನ್ನೇ ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ ಬೇಕಾದರೆ ಸರ್ಕಾರಿ ಜಾಗದಲ್ಲೂ ದೂರದ ಪ್ರದೇಶದಲ್ಲೂ ಕೈಗಾರಿಕೆ ಮಾಡಿಕೊಳ್ಳಲಿ ಎಂದರು.

ರೈತರು ಸಾಗುವಳಿ ಮಾಡುತ್ತಿದ್ದರೂ ಆ ಜಮೀನನನ್ನು ಅರಣ್ಯ ಇಲಾಖೆ ತನ್ನದು ಎಂದು ವಶಕ್ಕೆ ಪಡೆಯುತ್ತಿದೆ‌. ರೈತರಿಗೆ ಬೆದರಿಕೆ ಹಾಕಿ ಬಲವಂತದಿಂದ ಹೊರಹಾಕಲಾಗುತ್ತಿದೆ ಈ ಬಗ್ಗೆ ದೊಡ್ಡ ಹೋರಾಟ ನಡೆಸುತ್ತೇವೆ ಜಿಲ್ಲೆಯಲ್ಲಿ ಕುಡಿಯಲು ಹಾಗೂ ಕೃಷಿಗೆ ಶಾಶ್ವತವಾದ ನೀರಾವರಿ ವ್ಯವಸ್ಥೆ ಇಲ್ಲ. ಆ ವ್ಯವಸ್ಥೆ ಮಾಡಬೇಕು. ಮೂರನೇ ಹಂತದ ಶುದ್ಧೀಕರಣ ಮಾಡಿ ಕೆ.ಸಿ.ವ್ಯಾಲಿ ನೀರು ಹರಿಸಬೇಕು ಎಂದು ಹೇಳಿದರು.

ಹೈನುಗಾರಿಕೆ, ರೇಷ್ಮೆ, ಕೃಷಿ ಹಾಗೂ ತೋಟಗಾರಿಕೆ ವಿಚಾರದಲ್ಲಿ ಜಿಲ್ಲೆ ಮುಂಚೂಣಿಯಲ್ಲಿದೆ. ಹೀಗಾಗಿ, ಕೃಷಿಯಾಧಾರಿತ ಕೈಗಾರಿಕೆಗಳು ಬರಬೇಕು ಬೆಳೆಗಳಿಗೆ ಸ್ವಾಮಿನಾಥನ್‌ ಆಯೋಗದ ವರದಿಯಂತೆ ಬೆಲೆ ನಿಗದಿಪಡಿಸಬೇಕು ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸಾಮಾಜಿಕ ಭದ್ರತೆ ಇಲ್ಲವಾಗಿದೆ ಜೊತೆಗೆ ಸ್ಥಳೀಯರಿಗೆ ಕಾಯಂ ಉದ್ಯೋಗ ನೀಡಲು ಗಮನ ಹರಿಸಬೇಕು. ಕಾರ್ಮಿಕ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಮುಂದಿನ ಮೂರು ವರ್ಷಗಳಲ್ಲಿ ವಿವಿಧ ಹಂತಗಳಲ್ಲಿ ಸಮಸ್ಯೆಗಳಿಗೆ ಅನುಸಾರ ಹೋರಾಟ ರೂಪಿಸುತ್ತೇವೆ‌. ರಾಜ್ಯ ಸರ್ಕಾರವು ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುತ್ತಿದೆ. ಈ ಕೆಲಸವನ್ನು ಕೂಡಲೇ ಕೈಬಿಡಬೇಕು. ಹಾಗೆಯೇ ಜಿಲ್ಲೆಯಲ್ಲಿ ಕೈಗಾರಿಕೆಗಳಲ್ಲಿ ಶೋಷಣೆ ನಡೆಯುತ್ತಿದ್ದು ಸರ್ಕಾರ ಮಧ್ಯ ‌ಪ್ರವೇಶಿಸಬೇಕು ಕೇಂದ್ರ ಮಟ್ಟದಲ್ಲಿ ಇಂಡಿಯಾ ಒಕ್ಕೂಟಕ್ಕೆ ಸಿಪಿಎಂ ರಾಜಕೀಯವಾಗಿ ಬೆಂಬಲ ನೀಡುತ್ತಿದೆ. ಕೋಮುವಾದಿ ಬಿಜೆಪಿ ದೂರ ಇಡಲು ಚುನಾವಣೆಗಳಲ್ಲಿ ಕಾಂಗ್ರೆಸ್‌ ಬೆಂಬಲಿಸಲಾಗುತ್ತಿದೆ. ಇದು ಚುನಾವಣೆಗೆ ಸೀಮಿತವಾಗಿದ್ದು, ರೈತರಿಗೆ, ಬಡವರಿಗೆ, ಕಾರ್ಮಿಕರಿಗೆ ತೊಂದರೆಯಾದರೆ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ವಿ.ಗೀತಾ ಮಾತನಾಡಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ಮೂಲಸೌಕರ್ಯ ಕಲ್ಪಿಸಬೇಕು. ಸ್ಥಳೀಯರಿಗೆ ಉದ್ಯೋಗ ನೀಡಲು ಆದ್ಯತೆ ನೀಡಬೇಕು. ಮಹಿಳೆಯರಿಗೆ ಮೀಸಲಾತಿ ಕೊಡಬೇಕು. ಡಿಸಿಸಿ ಬ್ಯಾಂಕ್ ಗೆ ಚುನಾವಣೆ ನಡೆಸಿ ಬ್ಯಾಂಕ್ ಉಳಿಸಬೇಕು. ಬ್ಯಾಂಕ್‌ ಸಾಲ ನೀಡುವಂತಾಗಬೇಕು. ಆದರೆ, ‌ಡಿಸಿಸಿ ಬ್ಯಾಂಕ್ ನಿಷ್ಕ್ರಿಯಗೊಂಡಿದ್ದು, ಈ ಬಗ್ಗೆಯೂ ನಾವು ಹೋರಾಟ ನಡೆಸುತ್ತೇವೆ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಸೇರಿ ಮೂರೂ ಪಕ್ಷಗಳು ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡುತ್ತಿಲ್ಲ.‌ ಕಾಂಗ್ರೆಸ್‌ನ ನಾಲ್ವರು ಶಾಸಕರಿದ್ದು, ಚುನಾವಣೆ ಪ್ರಚಾರದ ವೇಳೆಯಲ್ಲಿ ನೀಡಿದ ಭರವಸೆಯಂತೆ ಕೆ.ಸಿ.ವ್ಯಾಲಿ ಮೂರನೇ ಹಂತದ ಶುದ್ಧೀಕರಣಕ್ಕೆ ಈವರೆಗೆ ಮುಂದಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯ ಎ.ಆರ್ ಬಾಬು ಮಾತನಾಡಿ ಜಿಲ್ಲೆಗೆ ಯಾವುದೇ ರೈಲ್ವೆ ಯೋಜನೆಗಳು ಬರುತ್ತಿಲ್ಲ. ಕೋಲಾರದಿಂದ ವೈಟ್ ಫೀಲ್ಡ್‌, ಕೋಲಾರ– ಮುಳಬಾಗಿಲು–ಕಡಪ ಸಂಪರ್ಕ, ಬಂಗಾರಪೇಟೆ-ಯಲಹಂಕ ಸಂಪರ್ಕ, ಮಾರಿಕುಪ್ಪಂ –ಕೋಲಾರ ರೈಲು ಹಾಕಬೇಕು‌. ಡಬಲ್ ಲೈನ್ ಮಾಡಬೇಕು. ಸಬ್ ಅರ್ಬನ್ ಯೋಜನೆಯನ್ನು ಕೋಲಾರಕ್ಕೂ ವಿಸ್ತರಿಸಬೇಕು. ಅಗತ್ಯವಿರುವ ಕಡೆ ರೈಲ್ವೆ ಬ್ರಿಡ್ಜ್ ಮಾಡಬೇಕು ಎಂದು ಒತ್ತಾಯಿಸಿದರು. ‌

ನೂತನ ಸಮಿತಿ ಆಯ್ಕೆ:

ಶ್ರೀನಿವಾಸಪುರದಲ್ಲಿ ನಡೆದ ಸಮ್ಮೇಳನದಲ್ಲಿ ಸಿಪಿಎಂನ ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಪಿ.ಆರ್ ಸೂರ್ಯನಾರಾಯಣ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾಗಿ ಗಾಂಧಿನಗರ ನಾರಾಯಣಸ್ವಾಮಿ, ಟಿ.ಎಂ.ವೆಂಕಟೇಶ್‌, ವಿ.ಗೀತಾ, ಎ.ಆರ್‌.ಬಾಬು, ಪಿ.ತಂಗರಾಜ್‌, ಪಾತಕೋಟೆ ನವೀನ್‌ ಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ಸಮಿತಿ ಸದಸ್ಯರನ್ನಾಗಿ ಎಂ.ವಿಜಯಕೃಷ್ಣ, ಪಿ.ಆರ್‌.ಶಂಕರ್‌, ಎನ್‌.ಅಶೋಕ, ಆನಂದ್‌, ಜಯಲಕ್ಷ್ಮಿ, ಗಂಗಮ್ಮ, ಅಪ್ಪಯಣ್ಣ, ವೀರಪ್ಪರೆಡ್ಡಿ, ವೀರಭದ್ರ, ಪಿ.ಶ್ರೀನಿವಾಸ್‌, ಹನುಮಂತರಾಯ, ಜಯರಾಮ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಟಿ.ಎಂ ವೆಂಕಟೇಶ್, ಪಾತಕೋಟೆ ನವೀನ್‌ ಕುಮಾರ್‌, ಎಂ.ವಿಜಯಕುಮಾರ್ ಇದ್ದರು.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

8 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

12 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

13 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

16 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago