ಇಂದು ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಸುಮಾರು 3.63 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರು ಚಾಲನೆ ನೀಡಿದರು.
ನಂತರ ಮಾತನಾಡಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಾಗೂ ತಾಲ್ಲೂಕು ಅಭಿವೃದ್ಧಿಗೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ, ಬಡವರ, ಹಿಂದುಳಿದವರ, ಮಹಿಳೆಯರ ಮಕ್ಕಳ ಅಭಿವೃದ್ಧಿ ಗೆ, ಉದ್ಯೋಗ, ಕೆರೆಗಳಿಗೆನೀರು ತುಂಬಿಸುವ ಕಾರ್ಯ ಮುಂತಾದ ಇನ್ನಷ್ಟು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುವುದು ನನ್ನ ಗುರಿ ಎಂದರು.
ವಿಜಯಪುರ ಹೋಬಳಿಯ ವೆಂಕಟಗಿರಿ ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿ 111 ಲಕ್ಷಗಳ ಕಾಮಗಾರಿ, ಜಿಜ್ಜವಾರ ಗ್ರಾಪಂ ವ್ಯಾಪ್ತಿಯಲ್ಲಿ 54 ಲಕ್ಷ ರೂಗಳ ಕಾಮಗಾರಿ, ಹಾರೋಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 64 ಲಕ್ಷಗಳ ಕಾಮಗಾರಿ, ಕೋರಮಂಗಲ ಗ್ರಾಪಂ ವ್ಯಾಪ್ತಿಯಲ್ಲಿ. 54 ಲಕ್ಷಗಳ ಕಾಮಗಾರಿ, ಮಂಡಿಬೆಲೆ ಗ್ರಾಪಂ ವ್ಯಾಪ್ತಿಯಲ್ಲಿ 77 ಲಕ್ಷಗಳ ಕಾಮಗಾರಿ ಸೇರಿ ಒಟ್ಟು 3.63 ಕೋಟಿ ಮೊತ್ತದಲ್ಲಿ ವಿವಿಧ ರಸ್ತೆ-ಚರಂಡಿ ಅಭಿವೃದ್ಧಿ, ಹೈ ಮಾಸ್ಕ್ ಅಳವಡಿಸುವ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಬಯಪಾ ಅಧ್ಯಕ್ಷರಾದ ಶಾಂತಕುಮಾರ್, ತಾಲ್ಲೂಕು ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಜಗನ್ನಾಥ, ದೇವನಹಳ್ಳಿ ತಹಸೀಲ್ದಾರ್ ಬಾಲಕೃಷ್ಣ, ಇಒ ಶ್ರೀನಾಥ್ ಗೌಡ ಸೇರಿದಂತೆ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾದ್ಯಾಕ್ಷರು, ಸದಸ್ಯರು, ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…