ಇಂದು ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಸುಮಾರು 3.63 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರು ಚಾಲನೆ ನೀಡಿದರು.
ನಂತರ ಮಾತನಾಡಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಾಗೂ ತಾಲ್ಲೂಕು ಅಭಿವೃದ್ಧಿಗೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ, ಬಡವರ, ಹಿಂದುಳಿದವರ, ಮಹಿಳೆಯರ ಮಕ್ಕಳ ಅಭಿವೃದ್ಧಿ ಗೆ, ಉದ್ಯೋಗ, ಕೆರೆಗಳಿಗೆನೀರು ತುಂಬಿಸುವ ಕಾರ್ಯ ಮುಂತಾದ ಇನ್ನಷ್ಟು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುವುದು ನನ್ನ ಗುರಿ ಎಂದರು.
ವಿಜಯಪುರ ಹೋಬಳಿಯ ವೆಂಕಟಗಿರಿ ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿ 111 ಲಕ್ಷಗಳ ಕಾಮಗಾರಿ, ಜಿಜ್ಜವಾರ ಗ್ರಾಪಂ ವ್ಯಾಪ್ತಿಯಲ್ಲಿ 54 ಲಕ್ಷ ರೂಗಳ ಕಾಮಗಾರಿ, ಹಾರೋಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 64 ಲಕ್ಷಗಳ ಕಾಮಗಾರಿ, ಕೋರಮಂಗಲ ಗ್ರಾಪಂ ವ್ಯಾಪ್ತಿಯಲ್ಲಿ. 54 ಲಕ್ಷಗಳ ಕಾಮಗಾರಿ, ಮಂಡಿಬೆಲೆ ಗ್ರಾಪಂ ವ್ಯಾಪ್ತಿಯಲ್ಲಿ 77 ಲಕ್ಷಗಳ ಕಾಮಗಾರಿ ಸೇರಿ ಒಟ್ಟು 3.63 ಕೋಟಿ ಮೊತ್ತದಲ್ಲಿ ವಿವಿಧ ರಸ್ತೆ-ಚರಂಡಿ ಅಭಿವೃದ್ಧಿ, ಹೈ ಮಾಸ್ಕ್ ಅಳವಡಿಸುವ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಬಯಪಾ ಅಧ್ಯಕ್ಷರಾದ ಶಾಂತಕುಮಾರ್, ತಾಲ್ಲೂಕು ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಜಗನ್ನಾಥ, ದೇವನಹಳ್ಳಿ ತಹಸೀಲ್ದಾರ್ ಬಾಲಕೃಷ್ಣ, ಇಒ ಶ್ರೀನಾಥ್ ಗೌಡ ಸೇರಿದಂತೆ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾದ್ಯಾಕ್ಷರು, ಸದಸ್ಯರು, ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…