ಇಂದು ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಸುಮಾರು 3.63 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರು ಚಾಲನೆ ನೀಡಿದರು.
ನಂತರ ಮಾತನಾಡಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಾಗೂ ತಾಲ್ಲೂಕು ಅಭಿವೃದ್ಧಿಗೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ, ಬಡವರ, ಹಿಂದುಳಿದವರ, ಮಹಿಳೆಯರ ಮಕ್ಕಳ ಅಭಿವೃದ್ಧಿ ಗೆ, ಉದ್ಯೋಗ, ಕೆರೆಗಳಿಗೆನೀರು ತುಂಬಿಸುವ ಕಾರ್ಯ ಮುಂತಾದ ಇನ್ನಷ್ಟು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುವುದು ನನ್ನ ಗುರಿ ಎಂದರು.
ವಿಜಯಪುರ ಹೋಬಳಿಯ ವೆಂಕಟಗಿರಿ ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿ 111 ಲಕ್ಷಗಳ ಕಾಮಗಾರಿ, ಜಿಜ್ಜವಾರ ಗ್ರಾಪಂ ವ್ಯಾಪ್ತಿಯಲ್ಲಿ 54 ಲಕ್ಷ ರೂಗಳ ಕಾಮಗಾರಿ, ಹಾರೋಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 64 ಲಕ್ಷಗಳ ಕಾಮಗಾರಿ, ಕೋರಮಂಗಲ ಗ್ರಾಪಂ ವ್ಯಾಪ್ತಿಯಲ್ಲಿ. 54 ಲಕ್ಷಗಳ ಕಾಮಗಾರಿ, ಮಂಡಿಬೆಲೆ ಗ್ರಾಪಂ ವ್ಯಾಪ್ತಿಯಲ್ಲಿ 77 ಲಕ್ಷಗಳ ಕಾಮಗಾರಿ ಸೇರಿ ಒಟ್ಟು 3.63 ಕೋಟಿ ಮೊತ್ತದಲ್ಲಿ ವಿವಿಧ ರಸ್ತೆ-ಚರಂಡಿ ಅಭಿವೃದ್ಧಿ, ಹೈ ಮಾಸ್ಕ್ ಅಳವಡಿಸುವ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಬಯಪಾ ಅಧ್ಯಕ್ಷರಾದ ಶಾಂತಕುಮಾರ್, ತಾಲ್ಲೂಕು ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಜಗನ್ನಾಥ, ದೇವನಹಳ್ಳಿ ತಹಸೀಲ್ದಾರ್ ಬಾಲಕೃಷ್ಣ, ಇಒ ಶ್ರೀನಾಥ್ ಗೌಡ ಸೇರಿದಂತೆ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾದ್ಯಾಕ್ಷರು, ಸದಸ್ಯರು, ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…