ಇಂದು ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಸುಮಾರು 3.63 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರು ಚಾಲನೆ ನೀಡಿದರು.
ನಂತರ ಮಾತನಾಡಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಾಗೂ ತಾಲ್ಲೂಕು ಅಭಿವೃದ್ಧಿಗೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ, ಬಡವರ, ಹಿಂದುಳಿದವರ, ಮಹಿಳೆಯರ ಮಕ್ಕಳ ಅಭಿವೃದ್ಧಿ ಗೆ, ಉದ್ಯೋಗ, ಕೆರೆಗಳಿಗೆನೀರು ತುಂಬಿಸುವ ಕಾರ್ಯ ಮುಂತಾದ ಇನ್ನಷ್ಟು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುವುದು ನನ್ನ ಗುರಿ ಎಂದರು.
ವಿಜಯಪುರ ಹೋಬಳಿಯ ವೆಂಕಟಗಿರಿ ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿ 111 ಲಕ್ಷಗಳ ಕಾಮಗಾರಿ, ಜಿಜ್ಜವಾರ ಗ್ರಾಪಂ ವ್ಯಾಪ್ತಿಯಲ್ಲಿ 54 ಲಕ್ಷ ರೂಗಳ ಕಾಮಗಾರಿ, ಹಾರೋಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 64 ಲಕ್ಷಗಳ ಕಾಮಗಾರಿ, ಕೋರಮಂಗಲ ಗ್ರಾಪಂ ವ್ಯಾಪ್ತಿಯಲ್ಲಿ. 54 ಲಕ್ಷಗಳ ಕಾಮಗಾರಿ, ಮಂಡಿಬೆಲೆ ಗ್ರಾಪಂ ವ್ಯಾಪ್ತಿಯಲ್ಲಿ 77 ಲಕ್ಷಗಳ ಕಾಮಗಾರಿ ಸೇರಿ ಒಟ್ಟು 3.63 ಕೋಟಿ ಮೊತ್ತದಲ್ಲಿ ವಿವಿಧ ರಸ್ತೆ-ಚರಂಡಿ ಅಭಿವೃದ್ಧಿ, ಹೈ ಮಾಸ್ಕ್ ಅಳವಡಿಸುವ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಬಯಪಾ ಅಧ್ಯಕ್ಷರಾದ ಶಾಂತಕುಮಾರ್, ತಾಲ್ಲೂಕು ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಜಗನ್ನಾಥ, ದೇವನಹಳ್ಳಿ ತಹಸೀಲ್ದಾರ್ ಬಾಲಕೃಷ್ಣ, ಇಒ ಶ್ರೀನಾಥ್ ಗೌಡ ಸೇರಿದಂತೆ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾದ್ಯಾಕ್ಷರು, ಸದಸ್ಯರು, ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…
ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…
ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…
ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…