Categories: ಕೋಲಾರ

ಜಿಲ್ಲೆಯ ಸಹಕಾರಿ ವ್ಯವಸ್ಥೆಗೆ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತ್ಯವಶ್ಯಕ- ನಂಜುಂಡಗೌಡ ಅಭಿಪ್ರಾಯ

ಕೋಲಾರ: ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸತತವಾಗಿ 7ನೇ ಬಾರಿಗೆ ಇಪ್ಕೊ ಟೋಕಿಯೋ ನಿರ್ದೇಶಕರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತ್ಯವಶ್ಯಕವಾಗಿದೆ ಎಂದು ಅರಾಭಿಕೊತ್ತನೂರು ಗ್ರಾಪಂ ಸದಸ್ಯ ಎ.ಎಸ್ ನಂಜುಂಡಗೌಡ ತಿಳಿಸಿದರು.

ನಗರದಲ್ಲಿನ ಮಾಜಿ ಸಚಿವ ಶ್ರೀನಿವಾಸಗೌಡರ ನಿವಾಸದಲ್ಲಿ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಹಿಂದಿನಿಂದಲೂ ಸಹಕಾರಿ ವ್ಯವಸ್ಥೆಯು ಒಂದು ಕುಟುಂಬದ ರೀತಿಯಲ್ಲಿ ಪರಸ್ಪರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಇದಕ್ಕೆ ಜಿಲ್ಲೆಯ ಹಿರಿಯ ಸಹಕಾರಿಗಳ ಮಾರ್ಗದರ್ಶನ ಬಹುಮುಖ್ಯವಾಗಿದೆ. ಮುಂದೆಯೂ ಇದೇ ರೀತಿ ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಿರಿಯ ಸಹಕಾರಿ ಧುರೀಣ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತಿ ಮುಖ್ಯವಾಗಿದೆ ಎಂದರು.

ಇವತ್ತಿನ ಸಮಾಜಕ್ಕೆ ಸಹಕಾರ ಕ್ಷೇತ್ರವು ಅನಿವಾರ್ಯವಾಗಿದೆ. ಕೊರೊನಾ ಸಂದರ್ಭದಲ್ಲಿ ಮೊದಲು ಗುರಿಯಾಗಿದ್ದು, ಆರ್ಥಿಕ ಕ್ಷೇತ್ರಕ್ಕೆ ಅದರಿಂದ ಸಾಕಷ್ಟು ನಷ್ಟ ಅನುಭವಿಸಲಾಗಿದೆ ಕೋವಿಡ್ ನಂತರದಲ್ಲಿ ಸಹಕಾರ ಕ್ಷೇತ್ರಗಳ ಸುಧಾರಣೆ ಮತ್ತು ಸಹಕಾರಿಗಳಿಗೆ ಸಂಸ್ಥೆಯ ಭದ್ರ ಬುನಾದಿ ಹಾಕುವ ಬಗ್ಗೆ ಮನವರಿಕೆ ಮಾಡಿಕೊಡುವ ಅವಶ್ಯಕತೆ ಹಿರಿಯ ಸರಕಾರಿಗಳ ಜವಾಬ್ದಾರಿಯಾಗಿದೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೂಡ ಹೆಚ್ಚಿನ ಗಮನವನ್ನು ಸಹಕಾರಿ ವ್ಯವಸ್ಥೆಯ ಮೇಲೆ ಹರಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಗುಟ್ಟಹಳ್ಳಿ ನಂದೀಶ್, ಹಾಪ್ ಕಾಮ್ಸ್ ನಿವೃತ್ತ ನೌಕರ ಸೊಣ್ಣೇಗೌಡ, ಅರಾಭಿಕೊತ್ತನೂರು ಶಾಲಾಭಿವೃದ್ದಿ ಸಮಿತಿ ಮಾಜಿ ಅಧ್ಯಕ್ಷ ಎಂ.ನಂಜುಂಡಗೌಡ ಇದ್ದರು,

Ramesh Babu

Journalist

Recent Posts

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

7 minutes ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

31 minutes ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

43 minutes ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

3 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

4 hours ago

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

9 hours ago