Categories: ಕೋಲಾರ

ಜಿಲ್ಲೆಯ ಸಹಕಾರಿ ವ್ಯವಸ್ಥೆಗೆ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತ್ಯವಶ್ಯಕ- ನಂಜುಂಡಗೌಡ ಅಭಿಪ್ರಾಯ

ಕೋಲಾರ: ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸತತವಾಗಿ 7ನೇ ಬಾರಿಗೆ ಇಪ್ಕೊ ಟೋಕಿಯೋ ನಿರ್ದೇಶಕರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತ್ಯವಶ್ಯಕವಾಗಿದೆ ಎಂದು ಅರಾಭಿಕೊತ್ತನೂರು ಗ್ರಾಪಂ ಸದಸ್ಯ ಎ.ಎಸ್ ನಂಜುಂಡಗೌಡ ತಿಳಿಸಿದರು.

ನಗರದಲ್ಲಿನ ಮಾಜಿ ಸಚಿವ ಶ್ರೀನಿವಾಸಗೌಡರ ನಿವಾಸದಲ್ಲಿ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಹಿಂದಿನಿಂದಲೂ ಸಹಕಾರಿ ವ್ಯವಸ್ಥೆಯು ಒಂದು ಕುಟುಂಬದ ರೀತಿಯಲ್ಲಿ ಪರಸ್ಪರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಇದಕ್ಕೆ ಜಿಲ್ಲೆಯ ಹಿರಿಯ ಸಹಕಾರಿಗಳ ಮಾರ್ಗದರ್ಶನ ಬಹುಮುಖ್ಯವಾಗಿದೆ. ಮುಂದೆಯೂ ಇದೇ ರೀತಿ ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಿರಿಯ ಸಹಕಾರಿ ಧುರೀಣ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತಿ ಮುಖ್ಯವಾಗಿದೆ ಎಂದರು.

ಇವತ್ತಿನ ಸಮಾಜಕ್ಕೆ ಸಹಕಾರ ಕ್ಷೇತ್ರವು ಅನಿವಾರ್ಯವಾಗಿದೆ. ಕೊರೊನಾ ಸಂದರ್ಭದಲ್ಲಿ ಮೊದಲು ಗುರಿಯಾಗಿದ್ದು, ಆರ್ಥಿಕ ಕ್ಷೇತ್ರಕ್ಕೆ ಅದರಿಂದ ಸಾಕಷ್ಟು ನಷ್ಟ ಅನುಭವಿಸಲಾಗಿದೆ ಕೋವಿಡ್ ನಂತರದಲ್ಲಿ ಸಹಕಾರ ಕ್ಷೇತ್ರಗಳ ಸುಧಾರಣೆ ಮತ್ತು ಸಹಕಾರಿಗಳಿಗೆ ಸಂಸ್ಥೆಯ ಭದ್ರ ಬುನಾದಿ ಹಾಕುವ ಬಗ್ಗೆ ಮನವರಿಕೆ ಮಾಡಿಕೊಡುವ ಅವಶ್ಯಕತೆ ಹಿರಿಯ ಸರಕಾರಿಗಳ ಜವಾಬ್ದಾರಿಯಾಗಿದೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೂಡ ಹೆಚ್ಚಿನ ಗಮನವನ್ನು ಸಹಕಾರಿ ವ್ಯವಸ್ಥೆಯ ಮೇಲೆ ಹರಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಗುಟ್ಟಹಳ್ಳಿ ನಂದೀಶ್, ಹಾಪ್ ಕಾಮ್ಸ್ ನಿವೃತ್ತ ನೌಕರ ಸೊಣ್ಣೇಗೌಡ, ಅರಾಭಿಕೊತ್ತನೂರು ಶಾಲಾಭಿವೃದ್ದಿ ಸಮಿತಿ ಮಾಜಿ ಅಧ್ಯಕ್ಷ ಎಂ.ನಂಜುಂಡಗೌಡ ಇದ್ದರು,

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

2 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

6 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

10 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago