Categories: ಕೋಲಾರ

ಜಿಲ್ಲೆಯ ಸಹಕಾರಿ ವ್ಯವಸ್ಥೆಗೆ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತ್ಯವಶ್ಯಕ- ನಂಜುಂಡಗೌಡ ಅಭಿಪ್ರಾಯ

ಕೋಲಾರ: ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸತತವಾಗಿ 7ನೇ ಬಾರಿಗೆ ಇಪ್ಕೊ ಟೋಕಿಯೋ ನಿರ್ದೇಶಕರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತ್ಯವಶ್ಯಕವಾಗಿದೆ ಎಂದು ಅರಾಭಿಕೊತ್ತನೂರು ಗ್ರಾಪಂ ಸದಸ್ಯ ಎ.ಎಸ್ ನಂಜುಂಡಗೌಡ ತಿಳಿಸಿದರು.

ನಗರದಲ್ಲಿನ ಮಾಜಿ ಸಚಿವ ಶ್ರೀನಿವಾಸಗೌಡರ ನಿವಾಸದಲ್ಲಿ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಹಿಂದಿನಿಂದಲೂ ಸಹಕಾರಿ ವ್ಯವಸ್ಥೆಯು ಒಂದು ಕುಟುಂಬದ ರೀತಿಯಲ್ಲಿ ಪರಸ್ಪರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಇದಕ್ಕೆ ಜಿಲ್ಲೆಯ ಹಿರಿಯ ಸಹಕಾರಿಗಳ ಮಾರ್ಗದರ್ಶನ ಬಹುಮುಖ್ಯವಾಗಿದೆ. ಮುಂದೆಯೂ ಇದೇ ರೀತಿ ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಿರಿಯ ಸಹಕಾರಿ ಧುರೀಣ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತಿ ಮುಖ್ಯವಾಗಿದೆ ಎಂದರು.

ಇವತ್ತಿನ ಸಮಾಜಕ್ಕೆ ಸಹಕಾರ ಕ್ಷೇತ್ರವು ಅನಿವಾರ್ಯವಾಗಿದೆ. ಕೊರೊನಾ ಸಂದರ್ಭದಲ್ಲಿ ಮೊದಲು ಗುರಿಯಾಗಿದ್ದು, ಆರ್ಥಿಕ ಕ್ಷೇತ್ರಕ್ಕೆ ಅದರಿಂದ ಸಾಕಷ್ಟು ನಷ್ಟ ಅನುಭವಿಸಲಾಗಿದೆ ಕೋವಿಡ್ ನಂತರದಲ್ಲಿ ಸಹಕಾರ ಕ್ಷೇತ್ರಗಳ ಸುಧಾರಣೆ ಮತ್ತು ಸಹಕಾರಿಗಳಿಗೆ ಸಂಸ್ಥೆಯ ಭದ್ರ ಬುನಾದಿ ಹಾಕುವ ಬಗ್ಗೆ ಮನವರಿಕೆ ಮಾಡಿಕೊಡುವ ಅವಶ್ಯಕತೆ ಹಿರಿಯ ಸರಕಾರಿಗಳ ಜವಾಬ್ದಾರಿಯಾಗಿದೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೂಡ ಹೆಚ್ಚಿನ ಗಮನವನ್ನು ಸಹಕಾರಿ ವ್ಯವಸ್ಥೆಯ ಮೇಲೆ ಹರಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಗುಟ್ಟಹಳ್ಳಿ ನಂದೀಶ್, ಹಾಪ್ ಕಾಮ್ಸ್ ನಿವೃತ್ತ ನೌಕರ ಸೊಣ್ಣೇಗೌಡ, ಅರಾಭಿಕೊತ್ತನೂರು ಶಾಲಾಭಿವೃದ್ದಿ ಸಮಿತಿ ಮಾಜಿ ಅಧ್ಯಕ್ಷ ಎಂ.ನಂಜುಂಡಗೌಡ ಇದ್ದರು,

Ramesh Babu

Journalist

Recent Posts

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

15 minutes ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

43 minutes ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

4 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

7 hours ago

ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಕಟ್ಟುನಿಟ್ಟಿನ ಕ್ರಮ

ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…

19 hours ago

ಬೈಕ್ ಗೆ ಕಾರು ಡಿಕ್ಕಿ: ಹಲವರಿಗೆ ಗಂಭೀರ ಗಾಯ

ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ‌‌ ನಡೆದಿದೆ..…

21 hours ago