ಕೋಲಾರ: ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸತತವಾಗಿ 7ನೇ ಬಾರಿಗೆ ಇಪ್ಕೊ ಟೋಕಿಯೋ ನಿರ್ದೇಶಕರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತ್ಯವಶ್ಯಕವಾಗಿದೆ ಎಂದು ಅರಾಭಿಕೊತ್ತನೂರು ಗ್ರಾಪಂ ಸದಸ್ಯ ಎ.ಎಸ್ ನಂಜುಂಡಗೌಡ ತಿಳಿಸಿದರು.
ನಗರದಲ್ಲಿನ ಮಾಜಿ ಸಚಿವ ಶ್ರೀನಿವಾಸಗೌಡರ ನಿವಾಸದಲ್ಲಿ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಹಿಂದಿನಿಂದಲೂ ಸಹಕಾರಿ ವ್ಯವಸ್ಥೆಯು ಒಂದು ಕುಟುಂಬದ ರೀತಿಯಲ್ಲಿ ಪರಸ್ಪರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಇದಕ್ಕೆ ಜಿಲ್ಲೆಯ ಹಿರಿಯ ಸಹಕಾರಿಗಳ ಮಾರ್ಗದರ್ಶನ ಬಹುಮುಖ್ಯವಾಗಿದೆ. ಮುಂದೆಯೂ ಇದೇ ರೀತಿ ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಿರಿಯ ಸಹಕಾರಿ ಧುರೀಣ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತಿ ಮುಖ್ಯವಾಗಿದೆ ಎಂದರು.
ಇವತ್ತಿನ ಸಮಾಜಕ್ಕೆ ಸಹಕಾರ ಕ್ಷೇತ್ರವು ಅನಿವಾರ್ಯವಾಗಿದೆ. ಕೊರೊನಾ ಸಂದರ್ಭದಲ್ಲಿ ಮೊದಲು ಗುರಿಯಾಗಿದ್ದು, ಆರ್ಥಿಕ ಕ್ಷೇತ್ರಕ್ಕೆ ಅದರಿಂದ ಸಾಕಷ್ಟು ನಷ್ಟ ಅನುಭವಿಸಲಾಗಿದೆ ಕೋವಿಡ್ ನಂತರದಲ್ಲಿ ಸಹಕಾರ ಕ್ಷೇತ್ರಗಳ ಸುಧಾರಣೆ ಮತ್ತು ಸಹಕಾರಿಗಳಿಗೆ ಸಂಸ್ಥೆಯ ಭದ್ರ ಬುನಾದಿ ಹಾಕುವ ಬಗ್ಗೆ ಮನವರಿಕೆ ಮಾಡಿಕೊಡುವ ಅವಶ್ಯಕತೆ ಹಿರಿಯ ಸರಕಾರಿಗಳ ಜವಾಬ್ದಾರಿಯಾಗಿದೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೂಡ ಹೆಚ್ಚಿನ ಗಮನವನ್ನು ಸಹಕಾರಿ ವ್ಯವಸ್ಥೆಯ ಮೇಲೆ ಹರಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಗುಟ್ಟಹಳ್ಳಿ ನಂದೀಶ್, ಹಾಪ್ ಕಾಮ್ಸ್ ನಿವೃತ್ತ ನೌಕರ ಸೊಣ್ಣೇಗೌಡ, ಅರಾಭಿಕೊತ್ತನೂರು ಶಾಲಾಭಿವೃದ್ದಿ ಸಮಿತಿ ಮಾಜಿ ಅಧ್ಯಕ್ಷ ಎಂ.ನಂಜುಂಡಗೌಡ ಇದ್ದರು,
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…