Categories: ಕೋಲಾರ

ಜಿಲ್ಲೆಯ ಸಹಕಾರಿ ವ್ಯವಸ್ಥೆಗೆ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತ್ಯವಶ್ಯಕ- ನಂಜುಂಡಗೌಡ ಅಭಿಪ್ರಾಯ

ಕೋಲಾರ: ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸತತವಾಗಿ 7ನೇ ಬಾರಿಗೆ ಇಪ್ಕೊ ಟೋಕಿಯೋ ನಿರ್ದೇಶಕರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತ್ಯವಶ್ಯಕವಾಗಿದೆ ಎಂದು ಅರಾಭಿಕೊತ್ತನೂರು ಗ್ರಾಪಂ ಸದಸ್ಯ ಎ.ಎಸ್ ನಂಜುಂಡಗೌಡ ತಿಳಿಸಿದರು.

ನಗರದಲ್ಲಿನ ಮಾಜಿ ಸಚಿವ ಶ್ರೀನಿವಾಸಗೌಡರ ನಿವಾಸದಲ್ಲಿ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಹಿಂದಿನಿಂದಲೂ ಸಹಕಾರಿ ವ್ಯವಸ್ಥೆಯು ಒಂದು ಕುಟುಂಬದ ರೀತಿಯಲ್ಲಿ ಪರಸ್ಪರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಇದಕ್ಕೆ ಜಿಲ್ಲೆಯ ಹಿರಿಯ ಸಹಕಾರಿಗಳ ಮಾರ್ಗದರ್ಶನ ಬಹುಮುಖ್ಯವಾಗಿದೆ. ಮುಂದೆಯೂ ಇದೇ ರೀತಿ ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಿರಿಯ ಸಹಕಾರಿ ಧುರೀಣ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತಿ ಮುಖ್ಯವಾಗಿದೆ ಎಂದರು.

ಇವತ್ತಿನ ಸಮಾಜಕ್ಕೆ ಸಹಕಾರ ಕ್ಷೇತ್ರವು ಅನಿವಾರ್ಯವಾಗಿದೆ. ಕೊರೊನಾ ಸಂದರ್ಭದಲ್ಲಿ ಮೊದಲು ಗುರಿಯಾಗಿದ್ದು, ಆರ್ಥಿಕ ಕ್ಷೇತ್ರಕ್ಕೆ ಅದರಿಂದ ಸಾಕಷ್ಟು ನಷ್ಟ ಅನುಭವಿಸಲಾಗಿದೆ ಕೋವಿಡ್ ನಂತರದಲ್ಲಿ ಸಹಕಾರ ಕ್ಷೇತ್ರಗಳ ಸುಧಾರಣೆ ಮತ್ತು ಸಹಕಾರಿಗಳಿಗೆ ಸಂಸ್ಥೆಯ ಭದ್ರ ಬುನಾದಿ ಹಾಕುವ ಬಗ್ಗೆ ಮನವರಿಕೆ ಮಾಡಿಕೊಡುವ ಅವಶ್ಯಕತೆ ಹಿರಿಯ ಸರಕಾರಿಗಳ ಜವಾಬ್ದಾರಿಯಾಗಿದೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೂಡ ಹೆಚ್ಚಿನ ಗಮನವನ್ನು ಸಹಕಾರಿ ವ್ಯವಸ್ಥೆಯ ಮೇಲೆ ಹರಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಗುಟ್ಟಹಳ್ಳಿ ನಂದೀಶ್, ಹಾಪ್ ಕಾಮ್ಸ್ ನಿವೃತ್ತ ನೌಕರ ಸೊಣ್ಣೇಗೌಡ, ಅರಾಭಿಕೊತ್ತನೂರು ಶಾಲಾಭಿವೃದ್ದಿ ಸಮಿತಿ ಮಾಜಿ ಅಧ್ಯಕ್ಷ ಎಂ.ನಂಜುಂಡಗೌಡ ಇದ್ದರು,

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

11 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

15 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

22 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

23 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago