ಕೋಲಾರ: ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸತತವಾಗಿ 7ನೇ ಬಾರಿಗೆ ಇಪ್ಕೊ ಟೋಕಿಯೋ ನಿರ್ದೇಶಕರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತ್ಯವಶ್ಯಕವಾಗಿದೆ ಎಂದು ಅರಾಭಿಕೊತ್ತನೂರು ಗ್ರಾಪಂ ಸದಸ್ಯ ಎ.ಎಸ್ ನಂಜುಂಡಗೌಡ ತಿಳಿಸಿದರು.
ನಗರದಲ್ಲಿನ ಮಾಜಿ ಸಚಿವ ಶ್ರೀನಿವಾಸಗೌಡರ ನಿವಾಸದಲ್ಲಿ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಹಿಂದಿನಿಂದಲೂ ಸಹಕಾರಿ ವ್ಯವಸ್ಥೆಯು ಒಂದು ಕುಟುಂಬದ ರೀತಿಯಲ್ಲಿ ಪರಸ್ಪರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಇದಕ್ಕೆ ಜಿಲ್ಲೆಯ ಹಿರಿಯ ಸಹಕಾರಿಗಳ ಮಾರ್ಗದರ್ಶನ ಬಹುಮುಖ್ಯವಾಗಿದೆ. ಮುಂದೆಯೂ ಇದೇ ರೀತಿ ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಿರಿಯ ಸಹಕಾರಿ ಧುರೀಣ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತಿ ಮುಖ್ಯವಾಗಿದೆ ಎಂದರು.
ಇವತ್ತಿನ ಸಮಾಜಕ್ಕೆ ಸಹಕಾರ ಕ್ಷೇತ್ರವು ಅನಿವಾರ್ಯವಾಗಿದೆ. ಕೊರೊನಾ ಸಂದರ್ಭದಲ್ಲಿ ಮೊದಲು ಗುರಿಯಾಗಿದ್ದು, ಆರ್ಥಿಕ ಕ್ಷೇತ್ರಕ್ಕೆ ಅದರಿಂದ ಸಾಕಷ್ಟು ನಷ್ಟ ಅನುಭವಿಸಲಾಗಿದೆ ಕೋವಿಡ್ ನಂತರದಲ್ಲಿ ಸಹಕಾರ ಕ್ಷೇತ್ರಗಳ ಸುಧಾರಣೆ ಮತ್ತು ಸಹಕಾರಿಗಳಿಗೆ ಸಂಸ್ಥೆಯ ಭದ್ರ ಬುನಾದಿ ಹಾಕುವ ಬಗ್ಗೆ ಮನವರಿಕೆ ಮಾಡಿಕೊಡುವ ಅವಶ್ಯಕತೆ ಹಿರಿಯ ಸರಕಾರಿಗಳ ಜವಾಬ್ದಾರಿಯಾಗಿದೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೂಡ ಹೆಚ್ಚಿನ ಗಮನವನ್ನು ಸಹಕಾರಿ ವ್ಯವಸ್ಥೆಯ ಮೇಲೆ ಹರಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಗುಟ್ಟಹಳ್ಳಿ ನಂದೀಶ್, ಹಾಪ್ ಕಾಮ್ಸ್ ನಿವೃತ್ತ ನೌಕರ ಸೊಣ್ಣೇಗೌಡ, ಅರಾಭಿಕೊತ್ತನೂರು ಶಾಲಾಭಿವೃದ್ದಿ ಸಮಿತಿ ಮಾಜಿ ಅಧ್ಯಕ್ಷ ಎಂ.ನಂಜುಂಡಗೌಡ ಇದ್ದರು,
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…