Categories: ಕೋಲಾರ

ಜಿಲ್ಲೆಯ ಸಹಕಾರಿ ವ್ಯವಸ್ಥೆಗೆ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತ್ಯವಶ್ಯಕ- ನಂಜುಂಡಗೌಡ ಅಭಿಪ್ರಾಯ

ಕೋಲಾರ: ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸತತವಾಗಿ 7ನೇ ಬಾರಿಗೆ ಇಪ್ಕೊ ಟೋಕಿಯೋ ನಿರ್ದೇಶಕರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತ್ಯವಶ್ಯಕವಾಗಿದೆ ಎಂದು ಅರಾಭಿಕೊತ್ತನೂರು ಗ್ರಾಪಂ ಸದಸ್ಯ ಎ.ಎಸ್ ನಂಜುಂಡಗೌಡ ತಿಳಿಸಿದರು.

ನಗರದಲ್ಲಿನ ಮಾಜಿ ಸಚಿವ ಶ್ರೀನಿವಾಸಗೌಡರ ನಿವಾಸದಲ್ಲಿ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಹಿಂದಿನಿಂದಲೂ ಸಹಕಾರಿ ವ್ಯವಸ್ಥೆಯು ಒಂದು ಕುಟುಂಬದ ರೀತಿಯಲ್ಲಿ ಪರಸ್ಪರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಇದಕ್ಕೆ ಜಿಲ್ಲೆಯ ಹಿರಿಯ ಸಹಕಾರಿಗಳ ಮಾರ್ಗದರ್ಶನ ಬಹುಮುಖ್ಯವಾಗಿದೆ. ಮುಂದೆಯೂ ಇದೇ ರೀತಿ ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಿರಿಯ ಸಹಕಾರಿ ಧುರೀಣ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತಿ ಮುಖ್ಯವಾಗಿದೆ ಎಂದರು.

ಇವತ್ತಿನ ಸಮಾಜಕ್ಕೆ ಸಹಕಾರ ಕ್ಷೇತ್ರವು ಅನಿವಾರ್ಯವಾಗಿದೆ. ಕೊರೊನಾ ಸಂದರ್ಭದಲ್ಲಿ ಮೊದಲು ಗುರಿಯಾಗಿದ್ದು, ಆರ್ಥಿಕ ಕ್ಷೇತ್ರಕ್ಕೆ ಅದರಿಂದ ಸಾಕಷ್ಟು ನಷ್ಟ ಅನುಭವಿಸಲಾಗಿದೆ ಕೋವಿಡ್ ನಂತರದಲ್ಲಿ ಸಹಕಾರ ಕ್ಷೇತ್ರಗಳ ಸುಧಾರಣೆ ಮತ್ತು ಸಹಕಾರಿಗಳಿಗೆ ಸಂಸ್ಥೆಯ ಭದ್ರ ಬುನಾದಿ ಹಾಕುವ ಬಗ್ಗೆ ಮನವರಿಕೆ ಮಾಡಿಕೊಡುವ ಅವಶ್ಯಕತೆ ಹಿರಿಯ ಸರಕಾರಿಗಳ ಜವಾಬ್ದಾರಿಯಾಗಿದೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೂಡ ಹೆಚ್ಚಿನ ಗಮನವನ್ನು ಸಹಕಾರಿ ವ್ಯವಸ್ಥೆಯ ಮೇಲೆ ಹರಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಗುಟ್ಟಹಳ್ಳಿ ನಂದೀಶ್, ಹಾಪ್ ಕಾಮ್ಸ್ ನಿವೃತ್ತ ನೌಕರ ಸೊಣ್ಣೇಗೌಡ, ಅರಾಭಿಕೊತ್ತನೂರು ಶಾಲಾಭಿವೃದ್ದಿ ಸಮಿತಿ ಮಾಜಿ ಅಧ್ಯಕ್ಷ ಎಂ.ನಂಜುಂಡಗೌಡ ಇದ್ದರು,

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

6 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

12 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

16 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

19 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago