ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಭಯೋತ್ಪಾದಕರು/ದೇಶ ವಿರೋಧಿಗಳು ಡ್ರೋನ್ ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆಯಿರುವುದರಿಂದ ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ಥಾನ ದೇಶಗಳ ನಡುವಿನ ಬಿಗುವಿನ ವಾತಾವರಣ ಈಗ ಶಮನಗೊಂಡಿದೆ. ಅದಾಗ್ಯೂ ತುರ್ತು ಸಂದರ್ಭಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವಂತಹ ಸೂಕ್ಷ್ಮವಲಯಗಳನ್ನು ಗುರುತಿಸಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭದ್ರತಾ ಕಾಳಜಿಗಳ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ.

ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭದ್ರತೆಯನ್ನು ಒದಗಿಸುವ ಎಲ್ಲಾ ಖಾಸಗಿ ಭದ್ರತಾ ಏಜೆನ್ಸಿಗಳಿಗೆ ಮಾಹಿತಿ ನೀಡಲಾಗಿದ್ದು ಕಣ್ಗಾವಲು ಅಥವಾ ಇತರ ಉದ್ದೇಶಗಳಿಗಾಗಿ ಡ್ರೋನ್ ಗಳನ್ನು ನಿಯೋಜಿಸುವುದನ್ನು ತಪ್ಪಿಸಲು ಸಲಹೆಗಳನ್ನು ಸೂಚಿಸಲಾಗಿದೆ.

*ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವಂತಹ ಸೂಕ್ಷ್ಮವಲಯಗಳು*

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಇಂಡಿಯನ್ ಆಯಿಲ್ ಸ್ಕೈಟ್ಯಾಂಕಿಂಗ್ಲಿ

ದೊಡ್ಡಬಳ್ಳಾಪುರ: ಮುಶಾಶಿ ಆಟೋ ಪಾರ್ಟ್ಸ್ ಪ್ರೈ. ಲಿಮಿಟೆಡ್

ಹೊಸಕೋಟೆ: IOCL – ಇಂಡೇನ್ ಬಾಟ್ಲಿಂಗ್ ಪ್ಲಾಂಟ್, BPCL, IOCL, HPCL, MRPL

ನೆಲಮಂಗಲ:ಜ್ಯೋತಿಗ್ಯಾಸ್ ಪ್ರೈ ಲಿಮಿಟೆಡ್, ಇಂಡೋಗ್ಯಾಸ್, ಟೋಟಲ್ ಆಯಿಲ್ ಇಂಡಿಯಾ ಪ್ರೈ. ಲಿಮಿಟೆಡ್, ಏಜಿಸ್ ಗ್ಯಾಸ್ LPG ಪ್ರೈವೇಟ್ ಲಿಮಿಟೆಡ್, ಸ್ನೇಹಾ ಪೆಟ್ರೋಲಿಯಂ ಪ್ರೈ. ಲಿಮಿಟೆಡ್, ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ (ರೋಲಿಂಗ್ ಮಿಲ್ ವಿಭಾಗ), ಜ್ಯೋತಿಗ್ಯಾಸ್ ಪ್ರೈ. ಲಿಮಿಟೆಡ್

ಸಂಭವನೀಯ ವಿಧ್ವಂಸಕ ಕೃತ್ಯಗಳನ್ನು ತಡೆಗಟ್ಟಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಇಲಾಖೆಗೆ ಭದ್ರತೆಯನ್ನು ಒದಗಿಸಲು ತಿಳಿಸಿದೆ. ಜೊತೆಗೆ ಅಂತಹ ಚಟುವಟಿಕೆಗಳ ಮೇಲೆ ಕೆಲವು ನಿರ್ಬಂಧಗಳನ್ನು ಹಾಕುವುದು ಅಗತ್ಯವಾಗಿದೆ. ಜಿಲ್ಲಾ ಅಗ್ನಿಶಾಮಕದಳ ತುರ್ತು ಸಂದರ್ಭಗಳಲ್ಲಿ ಸಿದ್ಧರಿರಬೇಕು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ವಿಶೇಷವಾಗಿ ನಾಗರಿಕರಿಗೆ ಯಾವುದೇ ತೊಂದರೆ ಮತ್ತು ಅಪಘಾತಗಳನ್ನು ನಿರ್ವಹಿಸಲು ಸನ್ನದ್ಧವಾಗಿರಲು ಜಾಗೃತಿ ಮೂಡಿಸಲಾಗುವುದು.

*ನಕಲಿ ಸುದ್ದಿಗೆ ಕಡಿವಾಣ*

ಯಾವುದೇ ನಕಲಿ ಅಥವಾ ಸುಳ್ಳು ಸುದ್ದಿ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸರಣ, ಬಿತ್ತರವಾಗುವ ಸಂಗತಿಗಳನ್ನು ತಕ್ಷಣವೇ ನೈಜ ಸಂಗತಿಯೊಂದಿಗೆ ಪರಿಶೀಲಿಸಿ ಕ್ರಮಕೈಗೊಂಡು, ಇವುಗಳ ಮೂಲವನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

ಸಮುದಾಯಗಳ ಮುಖಂಡರು ಮತ್ತು ಇತರ ಪ್ರಮುಖ ನಾಗರಿಕರೊಂದಿಗೆ ವಾಟ್ಸಾಪ್ ಗುಂಪುಗಳು ಸಕ್ರಿಯವಾಗಿರಬೇಕು, ಯಾವುದೇ ಸುಳ್ಳು ವದಂತಿಗಳು ಕಂಡು ಬಂದಾಗ ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಂಟ್ರೋಲ್ ರೂಂ. ಸಂಖ್ಯೆ: 080-28388005 ಗೆ ಸಂಪರ್ಕಿಸಿ ಮಾಹಿತಿಯನ್ನು ತಿಳಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 hour ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

3 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

10 hours ago