ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಭಯೋತ್ಪಾದಕರು/ದೇಶ ವಿರೋಧಿಗಳು ಡ್ರೋನ್ ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆಯಿರುವುದರಿಂದ ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ಥಾನ ದೇಶಗಳ ನಡುವಿನ ಬಿಗುವಿನ ವಾತಾವರಣ ಈಗ ಶಮನಗೊಂಡಿದೆ. ಅದಾಗ್ಯೂ ತುರ್ತು ಸಂದರ್ಭಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವಂತಹ ಸೂಕ್ಷ್ಮವಲಯಗಳನ್ನು ಗುರುತಿಸಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭದ್ರತಾ ಕಾಳಜಿಗಳ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ.

ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭದ್ರತೆಯನ್ನು ಒದಗಿಸುವ ಎಲ್ಲಾ ಖಾಸಗಿ ಭದ್ರತಾ ಏಜೆನ್ಸಿಗಳಿಗೆ ಮಾಹಿತಿ ನೀಡಲಾಗಿದ್ದು ಕಣ್ಗಾವಲು ಅಥವಾ ಇತರ ಉದ್ದೇಶಗಳಿಗಾಗಿ ಡ್ರೋನ್ ಗಳನ್ನು ನಿಯೋಜಿಸುವುದನ್ನು ತಪ್ಪಿಸಲು ಸಲಹೆಗಳನ್ನು ಸೂಚಿಸಲಾಗಿದೆ.

*ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವಂತಹ ಸೂಕ್ಷ್ಮವಲಯಗಳು*

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಇಂಡಿಯನ್ ಆಯಿಲ್ ಸ್ಕೈಟ್ಯಾಂಕಿಂಗ್ಲಿ

ದೊಡ್ಡಬಳ್ಳಾಪುರ: ಮುಶಾಶಿ ಆಟೋ ಪಾರ್ಟ್ಸ್ ಪ್ರೈ. ಲಿಮಿಟೆಡ್

ಹೊಸಕೋಟೆ: IOCL – ಇಂಡೇನ್ ಬಾಟ್ಲಿಂಗ್ ಪ್ಲಾಂಟ್, BPCL, IOCL, HPCL, MRPL

ನೆಲಮಂಗಲ:ಜ್ಯೋತಿಗ್ಯಾಸ್ ಪ್ರೈ ಲಿಮಿಟೆಡ್, ಇಂಡೋಗ್ಯಾಸ್, ಟೋಟಲ್ ಆಯಿಲ್ ಇಂಡಿಯಾ ಪ್ರೈ. ಲಿಮಿಟೆಡ್, ಏಜಿಸ್ ಗ್ಯಾಸ್ LPG ಪ್ರೈವೇಟ್ ಲಿಮಿಟೆಡ್, ಸ್ನೇಹಾ ಪೆಟ್ರೋಲಿಯಂ ಪ್ರೈ. ಲಿಮಿಟೆಡ್, ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ (ರೋಲಿಂಗ್ ಮಿಲ್ ವಿಭಾಗ), ಜ್ಯೋತಿಗ್ಯಾಸ್ ಪ್ರೈ. ಲಿಮಿಟೆಡ್

ಸಂಭವನೀಯ ವಿಧ್ವಂಸಕ ಕೃತ್ಯಗಳನ್ನು ತಡೆಗಟ್ಟಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಇಲಾಖೆಗೆ ಭದ್ರತೆಯನ್ನು ಒದಗಿಸಲು ತಿಳಿಸಿದೆ. ಜೊತೆಗೆ ಅಂತಹ ಚಟುವಟಿಕೆಗಳ ಮೇಲೆ ಕೆಲವು ನಿರ್ಬಂಧಗಳನ್ನು ಹಾಕುವುದು ಅಗತ್ಯವಾಗಿದೆ. ಜಿಲ್ಲಾ ಅಗ್ನಿಶಾಮಕದಳ ತುರ್ತು ಸಂದರ್ಭಗಳಲ್ಲಿ ಸಿದ್ಧರಿರಬೇಕು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ವಿಶೇಷವಾಗಿ ನಾಗರಿಕರಿಗೆ ಯಾವುದೇ ತೊಂದರೆ ಮತ್ತು ಅಪಘಾತಗಳನ್ನು ನಿರ್ವಹಿಸಲು ಸನ್ನದ್ಧವಾಗಿರಲು ಜಾಗೃತಿ ಮೂಡಿಸಲಾಗುವುದು.

*ನಕಲಿ ಸುದ್ದಿಗೆ ಕಡಿವಾಣ*

ಯಾವುದೇ ನಕಲಿ ಅಥವಾ ಸುಳ್ಳು ಸುದ್ದಿ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸರಣ, ಬಿತ್ತರವಾಗುವ ಸಂಗತಿಗಳನ್ನು ತಕ್ಷಣವೇ ನೈಜ ಸಂಗತಿಯೊಂದಿಗೆ ಪರಿಶೀಲಿಸಿ ಕ್ರಮಕೈಗೊಂಡು, ಇವುಗಳ ಮೂಲವನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

ಸಮುದಾಯಗಳ ಮುಖಂಡರು ಮತ್ತು ಇತರ ಪ್ರಮುಖ ನಾಗರಿಕರೊಂದಿಗೆ ವಾಟ್ಸಾಪ್ ಗುಂಪುಗಳು ಸಕ್ರಿಯವಾಗಿರಬೇಕು, ಯಾವುದೇ ಸುಳ್ಳು ವದಂತಿಗಳು ಕಂಡು ಬಂದಾಗ ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಂಟ್ರೋಲ್ ರೂಂ. ಸಂಖ್ಯೆ: 080-28388005 ಗೆ ಸಂಪರ್ಕಿಸಿ ಮಾಹಿತಿಯನ್ನು ತಿಳಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

14 minutes ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

1 hour ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

13 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

17 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

17 hours ago