ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಭಯೋತ್ಪಾದಕರು/ದೇಶ ವಿರೋಧಿಗಳು ಡ್ರೋನ್ ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆಯಿರುವುದರಿಂದ ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ಥಾನ ದೇಶಗಳ ನಡುವಿನ ಬಿಗುವಿನ ವಾತಾವರಣ ಈಗ ಶಮನಗೊಂಡಿದೆ. ಅದಾಗ್ಯೂ ತುರ್ತು ಸಂದರ್ಭಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವಂತಹ ಸೂಕ್ಷ್ಮವಲಯಗಳನ್ನು ಗುರುತಿಸಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭದ್ರತಾ ಕಾಳಜಿಗಳ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ.

ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭದ್ರತೆಯನ್ನು ಒದಗಿಸುವ ಎಲ್ಲಾ ಖಾಸಗಿ ಭದ್ರತಾ ಏಜೆನ್ಸಿಗಳಿಗೆ ಮಾಹಿತಿ ನೀಡಲಾಗಿದ್ದು ಕಣ್ಗಾವಲು ಅಥವಾ ಇತರ ಉದ್ದೇಶಗಳಿಗಾಗಿ ಡ್ರೋನ್ ಗಳನ್ನು ನಿಯೋಜಿಸುವುದನ್ನು ತಪ್ಪಿಸಲು ಸಲಹೆಗಳನ್ನು ಸೂಚಿಸಲಾಗಿದೆ.

*ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವಂತಹ ಸೂಕ್ಷ್ಮವಲಯಗಳು*

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಇಂಡಿಯನ್ ಆಯಿಲ್ ಸ್ಕೈಟ್ಯಾಂಕಿಂಗ್ಲಿ

ದೊಡ್ಡಬಳ್ಳಾಪುರ: ಮುಶಾಶಿ ಆಟೋ ಪಾರ್ಟ್ಸ್ ಪ್ರೈ. ಲಿಮಿಟೆಡ್

ಹೊಸಕೋಟೆ: IOCL – ಇಂಡೇನ್ ಬಾಟ್ಲಿಂಗ್ ಪ್ಲಾಂಟ್, BPCL, IOCL, HPCL, MRPL

ನೆಲಮಂಗಲ:ಜ್ಯೋತಿಗ್ಯಾಸ್ ಪ್ರೈ ಲಿಮಿಟೆಡ್, ಇಂಡೋಗ್ಯಾಸ್, ಟೋಟಲ್ ಆಯಿಲ್ ಇಂಡಿಯಾ ಪ್ರೈ. ಲಿಮಿಟೆಡ್, ಏಜಿಸ್ ಗ್ಯಾಸ್ LPG ಪ್ರೈವೇಟ್ ಲಿಮಿಟೆಡ್, ಸ್ನೇಹಾ ಪೆಟ್ರೋಲಿಯಂ ಪ್ರೈ. ಲಿಮಿಟೆಡ್, ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ (ರೋಲಿಂಗ್ ಮಿಲ್ ವಿಭಾಗ), ಜ್ಯೋತಿಗ್ಯಾಸ್ ಪ್ರೈ. ಲಿಮಿಟೆಡ್

ಸಂಭವನೀಯ ವಿಧ್ವಂಸಕ ಕೃತ್ಯಗಳನ್ನು ತಡೆಗಟ್ಟಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಇಲಾಖೆಗೆ ಭದ್ರತೆಯನ್ನು ಒದಗಿಸಲು ತಿಳಿಸಿದೆ. ಜೊತೆಗೆ ಅಂತಹ ಚಟುವಟಿಕೆಗಳ ಮೇಲೆ ಕೆಲವು ನಿರ್ಬಂಧಗಳನ್ನು ಹಾಕುವುದು ಅಗತ್ಯವಾಗಿದೆ. ಜಿಲ್ಲಾ ಅಗ್ನಿಶಾಮಕದಳ ತುರ್ತು ಸಂದರ್ಭಗಳಲ್ಲಿ ಸಿದ್ಧರಿರಬೇಕು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ವಿಶೇಷವಾಗಿ ನಾಗರಿಕರಿಗೆ ಯಾವುದೇ ತೊಂದರೆ ಮತ್ತು ಅಪಘಾತಗಳನ್ನು ನಿರ್ವಹಿಸಲು ಸನ್ನದ್ಧವಾಗಿರಲು ಜಾಗೃತಿ ಮೂಡಿಸಲಾಗುವುದು.

*ನಕಲಿ ಸುದ್ದಿಗೆ ಕಡಿವಾಣ*

ಯಾವುದೇ ನಕಲಿ ಅಥವಾ ಸುಳ್ಳು ಸುದ್ದಿ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸರಣ, ಬಿತ್ತರವಾಗುವ ಸಂಗತಿಗಳನ್ನು ತಕ್ಷಣವೇ ನೈಜ ಸಂಗತಿಯೊಂದಿಗೆ ಪರಿಶೀಲಿಸಿ ಕ್ರಮಕೈಗೊಂಡು, ಇವುಗಳ ಮೂಲವನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

ಸಮುದಾಯಗಳ ಮುಖಂಡರು ಮತ್ತು ಇತರ ಪ್ರಮುಖ ನಾಗರಿಕರೊಂದಿಗೆ ವಾಟ್ಸಾಪ್ ಗುಂಪುಗಳು ಸಕ್ರಿಯವಾಗಿರಬೇಕು, ಯಾವುದೇ ಸುಳ್ಳು ವದಂತಿಗಳು ಕಂಡು ಬಂದಾಗ ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಂಟ್ರೋಲ್ ರೂಂ. ಸಂಖ್ಯೆ: 080-28388005 ಗೆ ಸಂಪರ್ಕಿಸಿ ಮಾಹಿತಿಯನ್ನು ತಿಳಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

4 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

8 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

15 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

16 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago