ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಭಯೋತ್ಪಾದಕರು/ದೇಶ ವಿರೋಧಿಗಳು ಡ್ರೋನ್ ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆಯಿರುವುದರಿಂದ ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ಥಾನ ದೇಶಗಳ ನಡುವಿನ ಬಿಗುವಿನ ವಾತಾವರಣ ಈಗ ಶಮನಗೊಂಡಿದೆ. ಅದಾಗ್ಯೂ ತುರ್ತು ಸಂದರ್ಭಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವಂತಹ ಸೂಕ್ಷ್ಮವಲಯಗಳನ್ನು ಗುರುತಿಸಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭದ್ರತಾ ಕಾಳಜಿಗಳ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ.

ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭದ್ರತೆಯನ್ನು ಒದಗಿಸುವ ಎಲ್ಲಾ ಖಾಸಗಿ ಭದ್ರತಾ ಏಜೆನ್ಸಿಗಳಿಗೆ ಮಾಹಿತಿ ನೀಡಲಾಗಿದ್ದು ಕಣ್ಗಾವಲು ಅಥವಾ ಇತರ ಉದ್ದೇಶಗಳಿಗಾಗಿ ಡ್ರೋನ್ ಗಳನ್ನು ನಿಯೋಜಿಸುವುದನ್ನು ತಪ್ಪಿಸಲು ಸಲಹೆಗಳನ್ನು ಸೂಚಿಸಲಾಗಿದೆ.

*ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವಂತಹ ಸೂಕ್ಷ್ಮವಲಯಗಳು*

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಇಂಡಿಯನ್ ಆಯಿಲ್ ಸ್ಕೈಟ್ಯಾಂಕಿಂಗ್ಲಿ

ದೊಡ್ಡಬಳ್ಳಾಪುರ: ಮುಶಾಶಿ ಆಟೋ ಪಾರ್ಟ್ಸ್ ಪ್ರೈ. ಲಿಮಿಟೆಡ್

ಹೊಸಕೋಟೆ: IOCL – ಇಂಡೇನ್ ಬಾಟ್ಲಿಂಗ್ ಪ್ಲಾಂಟ್, BPCL, IOCL, HPCL, MRPL

ನೆಲಮಂಗಲ:ಜ್ಯೋತಿಗ್ಯಾಸ್ ಪ್ರೈ ಲಿಮಿಟೆಡ್, ಇಂಡೋಗ್ಯಾಸ್, ಟೋಟಲ್ ಆಯಿಲ್ ಇಂಡಿಯಾ ಪ್ರೈ. ಲಿಮಿಟೆಡ್, ಏಜಿಸ್ ಗ್ಯಾಸ್ LPG ಪ್ರೈವೇಟ್ ಲಿಮಿಟೆಡ್, ಸ್ನೇಹಾ ಪೆಟ್ರೋಲಿಯಂ ಪ್ರೈ. ಲಿಮಿಟೆಡ್, ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ (ರೋಲಿಂಗ್ ಮಿಲ್ ವಿಭಾಗ), ಜ್ಯೋತಿಗ್ಯಾಸ್ ಪ್ರೈ. ಲಿಮಿಟೆಡ್

ಸಂಭವನೀಯ ವಿಧ್ವಂಸಕ ಕೃತ್ಯಗಳನ್ನು ತಡೆಗಟ್ಟಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಇಲಾಖೆಗೆ ಭದ್ರತೆಯನ್ನು ಒದಗಿಸಲು ತಿಳಿಸಿದೆ. ಜೊತೆಗೆ ಅಂತಹ ಚಟುವಟಿಕೆಗಳ ಮೇಲೆ ಕೆಲವು ನಿರ್ಬಂಧಗಳನ್ನು ಹಾಕುವುದು ಅಗತ್ಯವಾಗಿದೆ. ಜಿಲ್ಲಾ ಅಗ್ನಿಶಾಮಕದಳ ತುರ್ತು ಸಂದರ್ಭಗಳಲ್ಲಿ ಸಿದ್ಧರಿರಬೇಕು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ವಿಶೇಷವಾಗಿ ನಾಗರಿಕರಿಗೆ ಯಾವುದೇ ತೊಂದರೆ ಮತ್ತು ಅಪಘಾತಗಳನ್ನು ನಿರ್ವಹಿಸಲು ಸನ್ನದ್ಧವಾಗಿರಲು ಜಾಗೃತಿ ಮೂಡಿಸಲಾಗುವುದು.

*ನಕಲಿ ಸುದ್ದಿಗೆ ಕಡಿವಾಣ*

ಯಾವುದೇ ನಕಲಿ ಅಥವಾ ಸುಳ್ಳು ಸುದ್ದಿ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸರಣ, ಬಿತ್ತರವಾಗುವ ಸಂಗತಿಗಳನ್ನು ತಕ್ಷಣವೇ ನೈಜ ಸಂಗತಿಯೊಂದಿಗೆ ಪರಿಶೀಲಿಸಿ ಕ್ರಮಕೈಗೊಂಡು, ಇವುಗಳ ಮೂಲವನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

ಸಮುದಾಯಗಳ ಮುಖಂಡರು ಮತ್ತು ಇತರ ಪ್ರಮುಖ ನಾಗರಿಕರೊಂದಿಗೆ ವಾಟ್ಸಾಪ್ ಗುಂಪುಗಳು ಸಕ್ರಿಯವಾಗಿರಬೇಕು, ಯಾವುದೇ ಸುಳ್ಳು ವದಂತಿಗಳು ಕಂಡು ಬಂದಾಗ ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಂಟ್ರೋಲ್ ರೂಂ. ಸಂಖ್ಯೆ: 080-28388005 ಗೆ ಸಂಪರ್ಕಿಸಿ ಮಾಹಿತಿಯನ್ನು ತಿಳಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

5 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

13 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago