ಜಿ.ಟಿ.ಟಿ.ಸಿ ದೇವನಹಳ್ಳಿಯ ಕೇಂದ್ರದಲ್ಲಿ- ತಾಂತ್ರಿಕ ತರಬೇತಿಗೆ ಅಜಿ೯ ಆಹ್ವಾನ

ಸಕಾ೯ರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿ.ಟಿ.ಟಿ.ಸಿ) ದೇವನಹಳ್ಳಿಯಲ್ಲಿ, 2023-24 ನೇ ಸಾಲಿನ ಜಿ.ಟಿ.ಟಿ.ಸಿ.- ಟೊಯೊಟಾ ಸಹಯೋಗದಲ್ಲಿ ವೆಹಿಕಲ್‌ ಅಸೆಂಬ್ಲಿ ಫಿಟ್ಟರ್‌ ಕೌಶಲ್ಯಾಧರಿತ ತಾಂತ್ರಿಕ ತರಬೇತಿ ಕೋಸ್‌೯ ಆರಂಭವಾಗಿದ್ದು, 17 ರಿಂದ 21 ವಷ೯ ವಯೋಮಿತಿಯ 10 ನೇ ತರಗತಿ ಉತ್ತೀಣ೯ ಹಾಗೂ ಪಿ.ಯು.ಸಿ  ಉತ್ತೀಣ೯/ ಅನುತ್ತೀಣಾ೯ರಾದ ವಿದ್ಯಾಥಿ೯ಗಳು ಪ್ರವೇಶ ಪಡೆಯಬಹುದಾಗಿದೆ.

ಮೊದಲ 1ನೇ ವಷ೯ ಜಿ.ಟಿ.ಟಿ.ಸಿ ಕೇಂದ್ರದಲ್ಲಿ ತರಬೇತಿ ಪಡೆದು ನಂತರ 2 ವಷ೯ ಬೆಂಗಳೂರಿನ ಟೊಯೊಟಾ ಕಿಲೋ೯ಸ್ಕರ್‌ ಮೋಟಾರ್‌ ಲಿಮಿಟೆಡ್ ಕಂಪನಿಯಲ್ಲಿ ಮಾಸಿಕ ರೂ.13000 ದಿಂದ 15000 ಸ್ಟೈಫಂಡ್‌ ಸಹಿತ ಟ್ರಾನ್ಸ್ಪೋರ್ಟ್ ಹಾಗೂ ಕ್ಯಾಂಟೀನ್ ಸೌಲಭ್ಯದ ಜೊತೆ ತರಬೇತಿ ದೊರೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಜಿ.ಟಿ.ಟಿ.ಸಿ ಸಂಸ್ಥೆ ಚನ್ನರಾಯಪಟ್ಟಣ ಗ್ರಾಮ ಹಾಗೂ ಹೋಬಳಿ, ದೇವನಹಳ್ಳಿ ತಾಲ್ಲೂಕು ಈ ವಿಳಾಸಕ್ಕೆ ಭೇಟಿ ನೀಡಬಹುದು ಅಥವಾ ಮೊಬೈಲ್ ಸಂಖ್ಯೆ- 9036144417, 8147784392, 080-26607666 ನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ರವಿಚಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

12 minutes ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

11 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

12 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

14 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

22 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago