ಸುಮಾರು 8 ಗಂಟೆಯ ಹಿಂದೆ ಜನಿಸಿದ ಗಂಡು ಮಗುವನ್ನು ಅಪರಿಚಿತರು ಮಣ್ಣಿನಲ್ಲಿ ಜೀವಂತವಾಗಿ ಹೂತಿಟ್ಟಿರುವ ಘಟನೆ ಆನೇಕಲ್ ತಾಲ್ಲೂಕಿನ ನೆರಿಗೆ ಪಂಚಾಯಿತಿ ಕತ್ರಿಗುಪ್ಪೆ ದಿನ್ನೆ ಎಂಬ ಗ್ರಾಮದ ನೀಲಿಗಿರಿ ತೋಪಿನಲ್ಲಿ ಬೆಳಕಿಗೆ ಬಂದಿದೆ.
ಒಂದು ದಿನದ ನವಜಾತ ಗಂಡು ಶಿಶುವನ್ನು ಮಣ್ಣಿನಲ್ಲಿ ಹೂತು ಹಾಕಿರುವುದನ್ನ ಲಾರಿ ಚಾಲಕರು ಗಮನಿಸಿ, ಕೂಡಲೇ ಸರ್ಜಾಪುರ ಠಾಣಾ ವ್ಯಾಪ್ತಿಯ 112 ಸಿಬ್ಬಂದಿ, ಮಕ್ಕಳ ಸಹಾಯ ವಾಣಿ 1098 ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ದೌಡಾಯಿಸಿ ಸ್ಥಳ ಪರಿಶೀಲನೆ ನಡೆಸಿ, ಹೂತಿಟ್ಟ ಮಗುವನ್ನು ಹೊರ ತೆಗೆದು, ದೊಮ್ಮಸಂದ್ರ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯ ಮಗುವಿನ ತಂದೆ-ತಾಯಿ ಹಾಗೂ ಮಗುವನ್ನು ಹೂತಿಟ್ಟವರ ಪತ್ತೆಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…