ಅಣಬೆಗಳು ಸಹಜವಾಗಿ ಮಣ್ಣಿನಲ್ಲಿ ಮಾತ್ರ ಬೆಳೆಯುವುದನ್ನ ನಾವು ನೋಡಿದ್ದೇವೆ. ಆದರೆ, ಇಲ್ಲೊಂದು ಜೀವಂತ ಕಪ್ಪೆಯ ಪಕ್ಕೆಯಿಂದ ಅಣಬೆ ಮೊಳಕೆ ಒಡೆದು ಬೆಳೆಯುತ್ತಿರುವುದನ್ನು ಕಂಡುಹಿಡಿಯಲಾಗಿದೆ. ಹಾಗದರೆ ಆ ಕಪ್ಪೆ ಹೆಸರೇನು?, ಅದು ಹೇಗೆ ಬೆಳೆಯುತ್ತದೆ?, ಆ ಕಪ್ಪೆಯನ್ನ ಎಲ್ಲಿ ಕಾಣಬಹುದು? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ….
ಜೀವಂತ ಕಪ್ಪೆಯ ಪಕ್ಕೆಯಿಂದ ಅಣಬೆ ಮೊಳಕೆ ಒಡೆದು ಬೆಳೆಯುತ್ತಿರುವುದನ್ನು ಪೋಟೋ ತೆಗೆಯುವ ಮೂಲಕ ಹೊರ ಜಗತ್ತಿಗೆ ಪ್ರಥಮ ಬಾರಿಗೆ ಡಬ್ಲ್ಯೂ ಡಬ್ಲ್ಯೂ ಎಫ್ ಸಂಸ್ಥೆಯ ಹಿರಿಯ ಯೋಜನ ಅಧಿಕಾರಿ ಹಾಗೂ ಕೀಟ, ಜೇಡಗಳ ಸಂಶೋಶಧಕ ವೈ.ಟಿ.ಲೋಹಿತ್ ಪರಿಚಿಸಿದ್ದಾರೆ.
ಈ ವೇಳೆ ಗೋಲ್ಡನ್ ಬ್ಯಾಕ್ಡ್ ಕಪ್ಪೆಯ ಈ ಅಪರೂಪದ ಬೆಳವಣಿಗೆ ಕುರಿತು ಕಂಡುಹಿಡಿದಿದ್ದಾರೆ. ನಂತರ ಕುರಿತ ಸಂಶೋಧನ ಬರಹವನ್ನು ಅಂತಾರಾಷ್ಟ್ರೀಯ ಜರ್ನಲ್ ರೇಪ್ಟೈಲ್ಸ್ ಅಂಡ್ ಅಂಫಿಬಿಯನ್ಸ್ (Reptiles & Amphibians) ನಲ್ಲಿ ಪ್ರಕಟಿಸಿದೆ.
ಪ್ರಾಣಿ ವರ್ಗ ಮತ್ತು ಸಸ್ಯ ವರ್ಗ ಎರಡಕ್ಕೂ ಸೇರದ ಅಣಬೆ ಫಂಗೈ ವರ್ಗಕ್ಕೆ ಸೇರಿದೆ. ಗೋಲ್ಡನ್ ಬ್ಯಾಕ್ಡ್ ಕಪ್ಪೆ ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಣಬಹುದಾಗಿವೆ. ಮತ್ತು ಅದರ ಮೈ ಮೇಲೆ ಬೆಳೆದಿರುವ ಮೈಸಿನ ಅಥವಾ ಬಾನೆಟ್ ಮಶ್ರೂಮ್ ಎಂದು ಕರೆಯುವ ಈ ಅಣಬೆ ಕೊಳೆತ ಮರದ ಮೇಲಷ್ಟೇ ಬೆಳೆಯುತ್ತದೆ. ಒಂದು ಜೀವಂತ ಪ್ರಾಣಿಯ ಮೇಲೆ ಅಣಬೆ ಬೆಳೆದಿರುವುದು ವಿಜ್ಞಾನ ಲೋಕದಲ್ಲಿ ಮೊದಲ ದಾಖಲೆಗೆ ಪಶ್ಚಿಮ ಘಟ್ಟಗಳ ಸಾಲು ಸಾಕ್ಷಿಯಾಗಿದೆ.
ಉಭಯಚರ ಜೀವಿಗಳಿಗೆ ಕೆಲವೊಂದು ಫಂಗೈಗಳಿಂದ ಕಾಯಿಲೆಗಳು ಸಂಭವಿಸಿ ಸಾಯುತ್ತವೆ. ಇಂತಹ ಸಮಸ್ಯೆ ಕೀಟ ಮತ್ತು ಜೇಡಗಳಲ್ಲೂ ಕಾಣಬಹುದು. ಆದರೆ, ಜೀವಂತ ಕಪ್ಪೆಯ ಮೇಲಿನ ಅಣಬೆ ಇನ್ನಷ್ಟು ವೈಜ್ಞಾನಿಕ ಸಂಶೋಧನೆಗಳಿಗೆ ದಾರಿಮಾಡಿಕೊಟ್ಟಿದೆ ಎನ್ನುವ ವೈ.ಜಿ.ಲೋಹಿತ್, ಇದರ ನಿಖರ ಕಾರಣವನ್ನು ತಕ್ಷಣಕ್ಕೆ ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಮೊದಲ ಬಾರಿಗೆ ಈ ಫೋಟೋಗಳನ್ನು ಗಮನಿಸಿದ ವಿಜ್ಞಾನಿಗಳು ಮತ್ತು ಪರಿಸರಾಸಕ್ತರು ಇದನ್ನು ಆರ್ಟಿಫಿಷಿಯಲ್ ಇಂಟಲಿಜೆಂನ್ಸ್ (ಎಐ) ಚಿತ್ರ ಅಥವಾ ಫೋಟೋಶಾಪ್ ಎಂದು ಅನುಮಾನಿಸಿದ್ದರು. ನಂತರ ಐ ನ್ಯಾಚುರಲಿಸ್ಟ್ ಮತ್ತು ಇಂಡಿಯಾ ಬಯೋಡೈವರ್ಸಿಟಿ ಪೋರ್ಟಲ್ನಲ್ಲಿ ಒಪ್ಪಿಕೊಂಡ ನಂತರ ಈ ಅನುಮಾನಗಳು ನಿವಾರಣೆಯಾದ ನಂತರ ಅಂತಾರಾಷ್ಟ್ರೀಯ ಜರ್ನಲ್ ರೇಪ್ಟೈಲ್ಸ್ ಅಂಡ್ ಅಂಫಿಬಿಯನ್ಸ್ನಲ್ಲಿ ಪ್ರಕಟಿಸಲಾಗಿದೆ ಎಂದರು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…