ಅಣಬೆಗಳು ಸಹಜವಾಗಿ ಮಣ್ಣಿನಲ್ಲಿ ಮಾತ್ರ ಬೆಳೆಯುವುದನ್ನ ನಾವು ನೋಡಿದ್ದೇವೆ. ಆದರೆ, ಇಲ್ಲೊಂದು ಜೀವಂತ ಕಪ್ಪೆಯ ಪಕ್ಕೆಯಿಂದ ಅಣಬೆ ಮೊಳಕೆ ಒಡೆದು ಬೆಳೆಯುತ್ತಿರುವುದನ್ನು ಕಂಡುಹಿಡಿಯಲಾಗಿದೆ. ಹಾಗದರೆ ಆ ಕಪ್ಪೆ ಹೆಸರೇನು?, ಅದು ಹೇಗೆ ಬೆಳೆಯುತ್ತದೆ?, ಆ ಕಪ್ಪೆಯನ್ನ ಎಲ್ಲಿ ಕಾಣಬಹುದು? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ….
ಜೀವಂತ ಕಪ್ಪೆಯ ಪಕ್ಕೆಯಿಂದ ಅಣಬೆ ಮೊಳಕೆ ಒಡೆದು ಬೆಳೆಯುತ್ತಿರುವುದನ್ನು ಪೋಟೋ ತೆಗೆಯುವ ಮೂಲಕ ಹೊರ ಜಗತ್ತಿಗೆ ಪ್ರಥಮ ಬಾರಿಗೆ ಡಬ್ಲ್ಯೂ ಡಬ್ಲ್ಯೂ ಎಫ್ ಸಂಸ್ಥೆಯ ಹಿರಿಯ ಯೋಜನ ಅಧಿಕಾರಿ ಹಾಗೂ ಕೀಟ, ಜೇಡಗಳ ಸಂಶೋಶಧಕ ವೈ.ಟಿ.ಲೋಹಿತ್ ಪರಿಚಿಸಿದ್ದಾರೆ.
ಈ ವೇಳೆ ಗೋಲ್ಡನ್ ಬ್ಯಾಕ್ಡ್ ಕಪ್ಪೆಯ ಈ ಅಪರೂಪದ ಬೆಳವಣಿಗೆ ಕುರಿತು ಕಂಡುಹಿಡಿದಿದ್ದಾರೆ. ನಂತರ ಕುರಿತ ಸಂಶೋಧನ ಬರಹವನ್ನು ಅಂತಾರಾಷ್ಟ್ರೀಯ ಜರ್ನಲ್ ರೇಪ್ಟೈಲ್ಸ್ ಅಂಡ್ ಅಂಫಿಬಿಯನ್ಸ್ (Reptiles & Amphibians) ನಲ್ಲಿ ಪ್ರಕಟಿಸಿದೆ.
ಪ್ರಾಣಿ ವರ್ಗ ಮತ್ತು ಸಸ್ಯ ವರ್ಗ ಎರಡಕ್ಕೂ ಸೇರದ ಅಣಬೆ ಫಂಗೈ ವರ್ಗಕ್ಕೆ ಸೇರಿದೆ. ಗೋಲ್ಡನ್ ಬ್ಯಾಕ್ಡ್ ಕಪ್ಪೆ ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಣಬಹುದಾಗಿವೆ. ಮತ್ತು ಅದರ ಮೈ ಮೇಲೆ ಬೆಳೆದಿರುವ ಮೈಸಿನ ಅಥವಾ ಬಾನೆಟ್ ಮಶ್ರೂಮ್ ಎಂದು ಕರೆಯುವ ಈ ಅಣಬೆ ಕೊಳೆತ ಮರದ ಮೇಲಷ್ಟೇ ಬೆಳೆಯುತ್ತದೆ. ಒಂದು ಜೀವಂತ ಪ್ರಾಣಿಯ ಮೇಲೆ ಅಣಬೆ ಬೆಳೆದಿರುವುದು ವಿಜ್ಞಾನ ಲೋಕದಲ್ಲಿ ಮೊದಲ ದಾಖಲೆಗೆ ಪಶ್ಚಿಮ ಘಟ್ಟಗಳ ಸಾಲು ಸಾಕ್ಷಿಯಾಗಿದೆ.
ಉಭಯಚರ ಜೀವಿಗಳಿಗೆ ಕೆಲವೊಂದು ಫಂಗೈಗಳಿಂದ ಕಾಯಿಲೆಗಳು ಸಂಭವಿಸಿ ಸಾಯುತ್ತವೆ. ಇಂತಹ ಸಮಸ್ಯೆ ಕೀಟ ಮತ್ತು ಜೇಡಗಳಲ್ಲೂ ಕಾಣಬಹುದು. ಆದರೆ, ಜೀವಂತ ಕಪ್ಪೆಯ ಮೇಲಿನ ಅಣಬೆ ಇನ್ನಷ್ಟು ವೈಜ್ಞಾನಿಕ ಸಂಶೋಧನೆಗಳಿಗೆ ದಾರಿಮಾಡಿಕೊಟ್ಟಿದೆ ಎನ್ನುವ ವೈ.ಜಿ.ಲೋಹಿತ್, ಇದರ ನಿಖರ ಕಾರಣವನ್ನು ತಕ್ಷಣಕ್ಕೆ ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಮೊದಲ ಬಾರಿಗೆ ಈ ಫೋಟೋಗಳನ್ನು ಗಮನಿಸಿದ ವಿಜ್ಞಾನಿಗಳು ಮತ್ತು ಪರಿಸರಾಸಕ್ತರು ಇದನ್ನು ಆರ್ಟಿಫಿಷಿಯಲ್ ಇಂಟಲಿಜೆಂನ್ಸ್ (ಎಐ) ಚಿತ್ರ ಅಥವಾ ಫೋಟೋಶಾಪ್ ಎಂದು ಅನುಮಾನಿಸಿದ್ದರು. ನಂತರ ಐ ನ್ಯಾಚುರಲಿಸ್ಟ್ ಮತ್ತು ಇಂಡಿಯಾ ಬಯೋಡೈವರ್ಸಿಟಿ ಪೋರ್ಟಲ್ನಲ್ಲಿ ಒಪ್ಪಿಕೊಂಡ ನಂತರ ಈ ಅನುಮಾನಗಳು ನಿವಾರಣೆಯಾದ ನಂತರ ಅಂತಾರಾಷ್ಟ್ರೀಯ ಜರ್ನಲ್ ರೇಪ್ಟೈಲ್ಸ್ ಅಂಡ್ ಅಂಫಿಬಿಯನ್ಸ್ನಲ್ಲಿ ಪ್ರಕಟಿಸಲಾಗಿದೆ ಎಂದರು.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…