ಅಣಬೆಗಳು ಸಹಜವಾಗಿ ಮಣ್ಣಿನಲ್ಲಿ ಮಾತ್ರ ಬೆಳೆಯುವುದನ್ನ ನಾವು ನೋಡಿದ್ದೇವೆ. ಆದರೆ, ಇಲ್ಲೊಂದು ಜೀವಂತ ಕಪ್ಪೆಯ ಪಕ್ಕೆಯಿಂದ ಅಣಬೆ ಮೊಳಕೆ ಒಡೆದು ಬೆಳೆಯುತ್ತಿರುವುದನ್ನು ಕಂಡುಹಿಡಿಯಲಾಗಿದೆ. ಹಾಗದರೆ ಆ ಕಪ್ಪೆ ಹೆಸರೇನು?, ಅದು ಹೇಗೆ ಬೆಳೆಯುತ್ತದೆ?, ಆ ಕಪ್ಪೆಯನ್ನ ಎಲ್ಲಿ ಕಾಣಬಹುದು? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ….
ಜೀವಂತ ಕಪ್ಪೆಯ ಪಕ್ಕೆಯಿಂದ ಅಣಬೆ ಮೊಳಕೆ ಒಡೆದು ಬೆಳೆಯುತ್ತಿರುವುದನ್ನು ಪೋಟೋ ತೆಗೆಯುವ ಮೂಲಕ ಹೊರ ಜಗತ್ತಿಗೆ ಪ್ರಥಮ ಬಾರಿಗೆ ಡಬ್ಲ್ಯೂ ಡಬ್ಲ್ಯೂ ಎಫ್ ಸಂಸ್ಥೆಯ ಹಿರಿಯ ಯೋಜನ ಅಧಿಕಾರಿ ಹಾಗೂ ಕೀಟ, ಜೇಡಗಳ ಸಂಶೋಶಧಕ ವೈ.ಟಿ.ಲೋಹಿತ್ ಪರಿಚಿಸಿದ್ದಾರೆ.
ಈ ವೇಳೆ ಗೋಲ್ಡನ್ ಬ್ಯಾಕ್ಡ್ ಕಪ್ಪೆಯ ಈ ಅಪರೂಪದ ಬೆಳವಣಿಗೆ ಕುರಿತು ಕಂಡುಹಿಡಿದಿದ್ದಾರೆ. ನಂತರ ಕುರಿತ ಸಂಶೋಧನ ಬರಹವನ್ನು ಅಂತಾರಾಷ್ಟ್ರೀಯ ಜರ್ನಲ್ ರೇಪ್ಟೈಲ್ಸ್ ಅಂಡ್ ಅಂಫಿಬಿಯನ್ಸ್ (Reptiles & Amphibians) ನಲ್ಲಿ ಪ್ರಕಟಿಸಿದೆ.
ಪ್ರಾಣಿ ವರ್ಗ ಮತ್ತು ಸಸ್ಯ ವರ್ಗ ಎರಡಕ್ಕೂ ಸೇರದ ಅಣಬೆ ಫಂಗೈ ವರ್ಗಕ್ಕೆ ಸೇರಿದೆ. ಗೋಲ್ಡನ್ ಬ್ಯಾಕ್ಡ್ ಕಪ್ಪೆ ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಣಬಹುದಾಗಿವೆ. ಮತ್ತು ಅದರ ಮೈ ಮೇಲೆ ಬೆಳೆದಿರುವ ಮೈಸಿನ ಅಥವಾ ಬಾನೆಟ್ ಮಶ್ರೂಮ್ ಎಂದು ಕರೆಯುವ ಈ ಅಣಬೆ ಕೊಳೆತ ಮರದ ಮೇಲಷ್ಟೇ ಬೆಳೆಯುತ್ತದೆ. ಒಂದು ಜೀವಂತ ಪ್ರಾಣಿಯ ಮೇಲೆ ಅಣಬೆ ಬೆಳೆದಿರುವುದು ವಿಜ್ಞಾನ ಲೋಕದಲ್ಲಿ ಮೊದಲ ದಾಖಲೆಗೆ ಪಶ್ಚಿಮ ಘಟ್ಟಗಳ ಸಾಲು ಸಾಕ್ಷಿಯಾಗಿದೆ.
ಉಭಯಚರ ಜೀವಿಗಳಿಗೆ ಕೆಲವೊಂದು ಫಂಗೈಗಳಿಂದ ಕಾಯಿಲೆಗಳು ಸಂಭವಿಸಿ ಸಾಯುತ್ತವೆ. ಇಂತಹ ಸಮಸ್ಯೆ ಕೀಟ ಮತ್ತು ಜೇಡಗಳಲ್ಲೂ ಕಾಣಬಹುದು. ಆದರೆ, ಜೀವಂತ ಕಪ್ಪೆಯ ಮೇಲಿನ ಅಣಬೆ ಇನ್ನಷ್ಟು ವೈಜ್ಞಾನಿಕ ಸಂಶೋಧನೆಗಳಿಗೆ ದಾರಿಮಾಡಿಕೊಟ್ಟಿದೆ ಎನ್ನುವ ವೈ.ಜಿ.ಲೋಹಿತ್, ಇದರ ನಿಖರ ಕಾರಣವನ್ನು ತಕ್ಷಣಕ್ಕೆ ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಮೊದಲ ಬಾರಿಗೆ ಈ ಫೋಟೋಗಳನ್ನು ಗಮನಿಸಿದ ವಿಜ್ಞಾನಿಗಳು ಮತ್ತು ಪರಿಸರಾಸಕ್ತರು ಇದನ್ನು ಆರ್ಟಿಫಿಷಿಯಲ್ ಇಂಟಲಿಜೆಂನ್ಸ್ (ಎಐ) ಚಿತ್ರ ಅಥವಾ ಫೋಟೋಶಾಪ್ ಎಂದು ಅನುಮಾನಿಸಿದ್ದರು. ನಂತರ ಐ ನ್ಯಾಚುರಲಿಸ್ಟ್ ಮತ್ತು ಇಂಡಿಯಾ ಬಯೋಡೈವರ್ಸಿಟಿ ಪೋರ್ಟಲ್ನಲ್ಲಿ ಒಪ್ಪಿಕೊಂಡ ನಂತರ ಈ ಅನುಮಾನಗಳು ನಿವಾರಣೆಯಾದ ನಂತರ ಅಂತಾರಾಷ್ಟ್ರೀಯ ಜರ್ನಲ್ ರೇಪ್ಟೈಲ್ಸ್ ಅಂಡ್ ಅಂಫಿಬಿಯನ್ಸ್ನಲ್ಲಿ ಪ್ರಕಟಿಸಲಾಗಿದೆ ಎಂದರು.
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…
ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…
ಉದ್ಯೋಗ ಸೃಷ್ಟಿಯಲ್ಲಿ, ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿ ನಗರವಾಗಿರುವ ಬೆಂಗಳೂರು ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ ಎಂದು ಗೃಹ…