ಅಣಬೆಗಳು ಸಹಜವಾಗಿ ಮಣ್ಣಿನಲ್ಲಿ ಮಾತ್ರ ಬೆಳೆಯುವುದನ್ನ ನಾವು ನೋಡಿದ್ದೇವೆ. ಆದರೆ, ಇಲ್ಲೊಂದು ಜೀವಂತ ಕಪ್ಪೆಯ ಪಕ್ಕೆಯಿಂದ ಅಣಬೆ ಮೊಳಕೆ ಒಡೆದು ಬೆಳೆಯುತ್ತಿರುವುದನ್ನು ಕಂಡುಹಿಡಿಯಲಾಗಿದೆ. ಹಾಗದರೆ ಆ ಕಪ್ಪೆ ಹೆಸರೇನು?, ಅದು ಹೇಗೆ ಬೆಳೆಯುತ್ತದೆ?, ಆ ಕಪ್ಪೆಯನ್ನ ಎಲ್ಲಿ ಕಾಣಬಹುದು? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ….
ಜೀವಂತ ಕಪ್ಪೆಯ ಪಕ್ಕೆಯಿಂದ ಅಣಬೆ ಮೊಳಕೆ ಒಡೆದು ಬೆಳೆಯುತ್ತಿರುವುದನ್ನು ಪೋಟೋ ತೆಗೆಯುವ ಮೂಲಕ ಹೊರ ಜಗತ್ತಿಗೆ ಪ್ರಥಮ ಬಾರಿಗೆ ಡಬ್ಲ್ಯೂ ಡಬ್ಲ್ಯೂ ಎಫ್ ಸಂಸ್ಥೆಯ ಹಿರಿಯ ಯೋಜನ ಅಧಿಕಾರಿ ಹಾಗೂ ಕೀಟ, ಜೇಡಗಳ ಸಂಶೋಶಧಕ ವೈ.ಟಿ.ಲೋಹಿತ್ ಪರಿಚಿಸಿದ್ದಾರೆ.
ಈ ವೇಳೆ ಗೋಲ್ಡನ್ ಬ್ಯಾಕ್ಡ್ ಕಪ್ಪೆಯ ಈ ಅಪರೂಪದ ಬೆಳವಣಿಗೆ ಕುರಿತು ಕಂಡುಹಿಡಿದಿದ್ದಾರೆ. ನಂತರ ಕುರಿತ ಸಂಶೋಧನ ಬರಹವನ್ನು ಅಂತಾರಾಷ್ಟ್ರೀಯ ಜರ್ನಲ್ ರೇಪ್ಟೈಲ್ಸ್ ಅಂಡ್ ಅಂಫಿಬಿಯನ್ಸ್ (Reptiles & Amphibians) ನಲ್ಲಿ ಪ್ರಕಟಿಸಿದೆ.
ಪ್ರಾಣಿ ವರ್ಗ ಮತ್ತು ಸಸ್ಯ ವರ್ಗ ಎರಡಕ್ಕೂ ಸೇರದ ಅಣಬೆ ಫಂಗೈ ವರ್ಗಕ್ಕೆ ಸೇರಿದೆ. ಗೋಲ್ಡನ್ ಬ್ಯಾಕ್ಡ್ ಕಪ್ಪೆ ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಣಬಹುದಾಗಿವೆ. ಮತ್ತು ಅದರ ಮೈ ಮೇಲೆ ಬೆಳೆದಿರುವ ಮೈಸಿನ ಅಥವಾ ಬಾನೆಟ್ ಮಶ್ರೂಮ್ ಎಂದು ಕರೆಯುವ ಈ ಅಣಬೆ ಕೊಳೆತ ಮರದ ಮೇಲಷ್ಟೇ ಬೆಳೆಯುತ್ತದೆ. ಒಂದು ಜೀವಂತ ಪ್ರಾಣಿಯ ಮೇಲೆ ಅಣಬೆ ಬೆಳೆದಿರುವುದು ವಿಜ್ಞಾನ ಲೋಕದಲ್ಲಿ ಮೊದಲ ದಾಖಲೆಗೆ ಪಶ್ಚಿಮ ಘಟ್ಟಗಳ ಸಾಲು ಸಾಕ್ಷಿಯಾಗಿದೆ.
ಉಭಯಚರ ಜೀವಿಗಳಿಗೆ ಕೆಲವೊಂದು ಫಂಗೈಗಳಿಂದ ಕಾಯಿಲೆಗಳು ಸಂಭವಿಸಿ ಸಾಯುತ್ತವೆ. ಇಂತಹ ಸಮಸ್ಯೆ ಕೀಟ ಮತ್ತು ಜೇಡಗಳಲ್ಲೂ ಕಾಣಬಹುದು. ಆದರೆ, ಜೀವಂತ ಕಪ್ಪೆಯ ಮೇಲಿನ ಅಣಬೆ ಇನ್ನಷ್ಟು ವೈಜ್ಞಾನಿಕ ಸಂಶೋಧನೆಗಳಿಗೆ ದಾರಿಮಾಡಿಕೊಟ್ಟಿದೆ ಎನ್ನುವ ವೈ.ಜಿ.ಲೋಹಿತ್, ಇದರ ನಿಖರ ಕಾರಣವನ್ನು ತಕ್ಷಣಕ್ಕೆ ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಮೊದಲ ಬಾರಿಗೆ ಈ ಫೋಟೋಗಳನ್ನು ಗಮನಿಸಿದ ವಿಜ್ಞಾನಿಗಳು ಮತ್ತು ಪರಿಸರಾಸಕ್ತರು ಇದನ್ನು ಆರ್ಟಿಫಿಷಿಯಲ್ ಇಂಟಲಿಜೆಂನ್ಸ್ (ಎಐ) ಚಿತ್ರ ಅಥವಾ ಫೋಟೋಶಾಪ್ ಎಂದು ಅನುಮಾನಿಸಿದ್ದರು. ನಂತರ ಐ ನ್ಯಾಚುರಲಿಸ್ಟ್ ಮತ್ತು ಇಂಡಿಯಾ ಬಯೋಡೈವರ್ಸಿಟಿ ಪೋರ್ಟಲ್ನಲ್ಲಿ ಒಪ್ಪಿಕೊಂಡ ನಂತರ ಈ ಅನುಮಾನಗಳು ನಿವಾರಣೆಯಾದ ನಂತರ ಅಂತಾರಾಷ್ಟ್ರೀಯ ಜರ್ನಲ್ ರೇಪ್ಟೈಲ್ಸ್ ಅಂಡ್ ಅಂಫಿಬಿಯನ್ಸ್ನಲ್ಲಿ ಪ್ರಕಟಿಸಲಾಗಿದೆ ಎಂದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…