ಅಣಬೆಗಳು ಸಹಜವಾಗಿ ಮಣ್ಣಿನಲ್ಲಿ ಮಾತ್ರ ಬೆಳೆಯುವುದನ್ನ ನಾವು ನೋಡಿದ್ದೇವೆ. ಆದರೆ, ಇಲ್ಲೊಂದು ಜೀವಂತ ಕಪ್ಪೆಯ ಪಕ್ಕೆಯಿಂದ ಅಣಬೆ ಮೊಳಕೆ ಒಡೆದು ಬೆಳೆಯುತ್ತಿರುವುದನ್ನು ಕಂಡುಹಿಡಿಯಲಾಗಿದೆ. ಹಾಗದರೆ ಆ ಕಪ್ಪೆ ಹೆಸರೇನು?, ಅದು ಹೇಗೆ ಬೆಳೆಯುತ್ತದೆ?, ಆ ಕಪ್ಪೆಯನ್ನ ಎಲ್ಲಿ ಕಾಣಬಹುದು? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ….
ಜೀವಂತ ಕಪ್ಪೆಯ ಪಕ್ಕೆಯಿಂದ ಅಣಬೆ ಮೊಳಕೆ ಒಡೆದು ಬೆಳೆಯುತ್ತಿರುವುದನ್ನು ಪೋಟೋ ತೆಗೆಯುವ ಮೂಲಕ ಹೊರ ಜಗತ್ತಿಗೆ ಪ್ರಥಮ ಬಾರಿಗೆ ಡಬ್ಲ್ಯೂ ಡಬ್ಲ್ಯೂ ಎಫ್ ಸಂಸ್ಥೆಯ ಹಿರಿಯ ಯೋಜನ ಅಧಿಕಾರಿ ಹಾಗೂ ಕೀಟ, ಜೇಡಗಳ ಸಂಶೋಶಧಕ ವೈ.ಟಿ.ಲೋಹಿತ್ ಪರಿಚಿಸಿದ್ದಾರೆ.
ಈ ವೇಳೆ ಗೋಲ್ಡನ್ ಬ್ಯಾಕ್ಡ್ ಕಪ್ಪೆಯ ಈ ಅಪರೂಪದ ಬೆಳವಣಿಗೆ ಕುರಿತು ಕಂಡುಹಿಡಿದಿದ್ದಾರೆ. ನಂತರ ಕುರಿತ ಸಂಶೋಧನ ಬರಹವನ್ನು ಅಂತಾರಾಷ್ಟ್ರೀಯ ಜರ್ನಲ್ ರೇಪ್ಟೈಲ್ಸ್ ಅಂಡ್ ಅಂಫಿಬಿಯನ್ಸ್ (Reptiles & Amphibians) ನಲ್ಲಿ ಪ್ರಕಟಿಸಿದೆ.
ಪ್ರಾಣಿ ವರ್ಗ ಮತ್ತು ಸಸ್ಯ ವರ್ಗ ಎರಡಕ್ಕೂ ಸೇರದ ಅಣಬೆ ಫಂಗೈ ವರ್ಗಕ್ಕೆ ಸೇರಿದೆ. ಗೋಲ್ಡನ್ ಬ್ಯಾಕ್ಡ್ ಕಪ್ಪೆ ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಣಬಹುದಾಗಿವೆ. ಮತ್ತು ಅದರ ಮೈ ಮೇಲೆ ಬೆಳೆದಿರುವ ಮೈಸಿನ ಅಥವಾ ಬಾನೆಟ್ ಮಶ್ರೂಮ್ ಎಂದು ಕರೆಯುವ ಈ ಅಣಬೆ ಕೊಳೆತ ಮರದ ಮೇಲಷ್ಟೇ ಬೆಳೆಯುತ್ತದೆ. ಒಂದು ಜೀವಂತ ಪ್ರಾಣಿಯ ಮೇಲೆ ಅಣಬೆ ಬೆಳೆದಿರುವುದು ವಿಜ್ಞಾನ ಲೋಕದಲ್ಲಿ ಮೊದಲ ದಾಖಲೆಗೆ ಪಶ್ಚಿಮ ಘಟ್ಟಗಳ ಸಾಲು ಸಾಕ್ಷಿಯಾಗಿದೆ.
ಉಭಯಚರ ಜೀವಿಗಳಿಗೆ ಕೆಲವೊಂದು ಫಂಗೈಗಳಿಂದ ಕಾಯಿಲೆಗಳು ಸಂಭವಿಸಿ ಸಾಯುತ್ತವೆ. ಇಂತಹ ಸಮಸ್ಯೆ ಕೀಟ ಮತ್ತು ಜೇಡಗಳಲ್ಲೂ ಕಾಣಬಹುದು. ಆದರೆ, ಜೀವಂತ ಕಪ್ಪೆಯ ಮೇಲಿನ ಅಣಬೆ ಇನ್ನಷ್ಟು ವೈಜ್ಞಾನಿಕ ಸಂಶೋಧನೆಗಳಿಗೆ ದಾರಿಮಾಡಿಕೊಟ್ಟಿದೆ ಎನ್ನುವ ವೈ.ಜಿ.ಲೋಹಿತ್, ಇದರ ನಿಖರ ಕಾರಣವನ್ನು ತಕ್ಷಣಕ್ಕೆ ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಮೊದಲ ಬಾರಿಗೆ ಈ ಫೋಟೋಗಳನ್ನು ಗಮನಿಸಿದ ವಿಜ್ಞಾನಿಗಳು ಮತ್ತು ಪರಿಸರಾಸಕ್ತರು ಇದನ್ನು ಆರ್ಟಿಫಿಷಿಯಲ್ ಇಂಟಲಿಜೆಂನ್ಸ್ (ಎಐ) ಚಿತ್ರ ಅಥವಾ ಫೋಟೋಶಾಪ್ ಎಂದು ಅನುಮಾನಿಸಿದ್ದರು. ನಂತರ ಐ ನ್ಯಾಚುರಲಿಸ್ಟ್ ಮತ್ತು ಇಂಡಿಯಾ ಬಯೋಡೈವರ್ಸಿಟಿ ಪೋರ್ಟಲ್ನಲ್ಲಿ ಒಪ್ಪಿಕೊಂಡ ನಂತರ ಈ ಅನುಮಾನಗಳು ನಿವಾರಣೆಯಾದ ನಂತರ ಅಂತಾರಾಷ್ಟ್ರೀಯ ಜರ್ನಲ್ ರೇಪ್ಟೈಲ್ಸ್ ಅಂಡ್ ಅಂಫಿಬಿಯನ್ಸ್ನಲ್ಲಿ ಪ್ರಕಟಿಸಲಾಗಿದೆ ಎಂದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…