ಜೀವಂತ ಕಪ್ಪೆಯ ಪಕ್ಕೆಯಿಂದ ಅಣಬೆ ಮೊಳಕೆ: ಆ ಕಪ್ಪೆ ಹೆಸರೇನು?, ಅದು ಹೇಗೆ ಬೆಳೆಯುತ್ತದೆ?, ಆ ಕಪ್ಪೆಯನ್ನ ಎಲ್ಲಿ ಕಾಣಬಹುದು? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ ಓದಿ…..

ಅಣಬೆಗಳು ಸಹಜವಾಗಿ ಮಣ್ಣಿನಲ್ಲಿ ಮಾತ್ರ ಬೆಳೆಯುವುದನ್ನ ನಾವು ನೋಡಿದ್ದೇವೆ. ಆದರೆ, ಇಲ್ಲೊಂದು ಜೀವಂತ ಕಪ್ಪೆಯ ಪಕ್ಕೆಯಿಂದ ಅಣಬೆ ಮೊಳಕೆ ಒಡೆದು ಬೆಳೆಯುತ್ತಿರುವುದನ್ನು ಕಂಡುಹಿಡಿಯಲಾಗಿದೆ. ಹಾಗದರೆ ಆ ಕಪ್ಪೆ ಹೆಸರೇನು?, ಅದು ಹೇಗೆ ಬೆಳೆಯುತ್ತದೆ?, ಆ ಕಪ್ಪೆಯನ್ನ ಎಲ್ಲಿ ಕಾಣಬಹುದು? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ….

ಜೀವಂತ ಕಪ್ಪೆಯ ಪಕ್ಕೆಯಿಂದ ಅಣಬೆ ಮೊಳಕೆ ಒಡೆದು ಬೆಳೆಯುತ್ತಿರುವುದನ್ನು ಪೋಟೋ ತೆಗೆಯುವ ಮೂಲಕ ಹೊರ ಜಗತ್ತಿಗೆ ಪ್ರಥಮ ಬಾರಿಗೆ ಡಬ್ಲ್ಯೂ ಡಬ್ಲ್ಯೂ ಎಫ್ ಸಂಸ್ಥೆಯ ಹಿರಿಯ ಯೋಜನ ಅಧಿಕಾರಿ ಹಾಗೂ ಕೀಟ, ಜೇಡಗಳ ಸಂಶೋಶಧಕ ವೈ.ಟಿ.ಲೋಹಿತ್ ಪರಿಚಿಸಿದ್ದಾರೆ.

ಈ ಬಗ್ಗೆ ವೈ.ಟಿ.ಲೋಹಿತ್ ಅವರು ಮಾಹಿತಿ ನೀಡಿದ್ದಾರೆ, ಚಿನ್ಮಯ್ ಸಿ.ಮಳಿಯೆ, ನವೀನ್ ಐಯ್ಯರ್, ಬಿ.ಜಿ.ನಿಶಾ ಹಾಗೂ ಎಸ್.ಆಶಾ ತಂಡವು ಪಶ್ಚಿಮಘಟ್ಟ ಸಾಲಿನ ಕುದುರೆಮುಖ ಪರ್ವತ ಶ್ರೇಣಿಯ ತಪ್ಪಲಿನ ಕಾರ್ಕಳ ತಾಲ್ಲೂಕಿನ ಮಾಳ ಗ್ರಾಮದಲ್ಲಿ ಕಪ್ಪೆ ಮತ್ತು ಹಾವುಗಳ ಚಲನವಲನಗಳನ್ನು ಗಮನಿಸಿ ದಾಖಲಿಸಲು ಹೋಗಿದ್ದರು.

ಈ ವೇಳೆ ಗೋಲ್ಡನ್ ಬ್ಯಾಕ್ಡ್ ಕಪ್ಪೆಯ ಈ ಅಪರೂಪದ ಬೆಳವಣಿಗೆ ಕುರಿತು ಕಂಡುಹಿಡಿದಿದ್ದಾರೆ. ನಂತರ ಕುರಿತ ಸಂಶೋಧನ ಬರಹವನ್ನು ಅಂತಾರಾಷ್ಟ್ರೀಯ ಜರ್ನಲ್  ರೇಪ್ಟೈಲ್ಸ್ ಅಂಡ್ ಅಂಫಿಬಿಯನ್ಸ್ (Reptiles & Amphibians) ನಲ್ಲಿ ಪ್ರಕಟಿಸಿದೆ.

ಪ್ರಾಣಿ ವರ್ಗ ಮತ್ತು ಸಸ್ಯ ವರ್ಗ ಎರಡಕ್ಕೂ ಸೇರದ ಅಣಬೆ ಫಂಗೈ ವರ್ಗಕ್ಕೆ ಸೇರಿದೆ. ಗೋಲ್ಡನ್ ಬ್ಯಾಕ್ಡ್ ಕಪ್ಪೆ ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಣಬಹುದಾಗಿವೆ. ಮತ್ತು ಅದರ ಮೈ ಮೇಲೆ ಬೆಳೆದಿರುವ ಮೈಸಿನ ಅಥವಾ ಬಾನೆಟ್ ಮಶ್ರೂಮ್ ಎಂದು ಕರೆಯುವ ಈ ಅಣಬೆ ಕೊಳೆತ ಮರದ ಮೇಲಷ್ಟೇ ಬೆಳೆಯುತ್ತದೆ. ಒಂದು ಜೀವಂತ ಪ್ರಾಣಿಯ ಮೇಲೆ ಅಣಬೆ ಬೆಳೆದಿರುವುದು ವಿಜ್ಞಾನ ಲೋಕದಲ್ಲಿ ಮೊದಲ ದಾಖಲೆಗೆ ಪಶ್ಚಿಮ ಘಟ್ಟಗಳ ಸಾಲು ಸಾಕ್ಷಿಯಾಗಿದೆ.

ಉಭಯಚರ ಜೀವಿಗಳಿಗೆ ಕೆಲವೊಂದು ಫಂಗೈಗಳಿಂದ ಕಾಯಿಲೆಗಳು ಸಂಭವಿಸಿ ಸಾಯುತ್ತವೆ. ಇಂತಹ ಸಮಸ್ಯೆ ಕೀಟ ಮತ್ತು ಜೇಡಗಳಲ್ಲೂ ಕಾಣಬಹುದು. ಆದರೆ, ಜೀವಂತ ಕಪ್ಪೆಯ ಮೇಲಿನ ಅಣಬೆ ಇನ್ನಷ್ಟು ವೈಜ್ಞಾನಿಕ ಸಂಶೋಧನೆಗಳಿಗೆ ದಾರಿಮಾಡಿಕೊಟ್ಟಿದೆ ಎನ್ನುವ ವೈ.ಜಿ.ಲೋಹಿತ್, ಇದರ ನಿಖರ ಕಾರಣವನ್ನು  ತಕ್ಷಣಕ್ಕೆ ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಕಪ್ಪೆಗಳು ವಾಸವಾಗಿದ್ದ ಕೊಳದಲ್ಲಿ ನಲವತ್ತಕ್ಕೂ ಹೆಚ್ಚು ಗೋಲ್ಡನ್ ಬ್ಯಾಕ್ಡ್ ಕಪ್ಪೆಗಳಿದ್ದವು. ಇವುಗಳನ್ನು ಗಮನಿಸುವಾಗ ಒಂದು ಕಪ್ಪೆಯ ಮೇಲೆ ಮಾತ್ರ ಅಣಬೆ ಬೆಳವಣಿಗೆ ಗಮನಿಸಿ ಫೋಟೋ ತೆಗೆಯಲಾಗಿದೆ. ಅಲ್ಲದೆ ಈ ಕಪ್ಪೆಯು ಚಟುವಟಿಕೆಯಿಂದ ಕೂಡಿದ್ದು, ಇತರೆ ಕಪ್ಪೆಗಳಿಗೂ ಇದಕ್ಕೂ ಅಂತಹ ಯಾವುದೇ ರೀತಿಯ ವ್ಯತ್ಯಾಸಗಳು ಕಂಡುಬಂದಿಲ್ಲ ಎನ್ನುತ್ತಾರೆ.

ಮೊದಲ ಬಾರಿಗೆ ಈ ಫೋಟೋಗಳನ್ನು ಗಮನಿಸಿದ ವಿಜ್ಞಾನಿಗಳು ಮತ್ತು ಪರಿಸರಾಸಕ್ತರು ಇದನ್ನು ಆರ್ಟಿಫಿಷಿಯಲ್ ಇಂಟಲಿಜೆಂನ್ಸ್ (ಎಐ) ಚಿತ್ರ ಅಥವಾ ಫೋಟೋಶಾಪ್ ಎಂದು ಅನುಮಾನಿಸಿದ್ದರು. ನಂತರ ಐ ನ್ಯಾಚುರಲಿಸ್ಟ್ ಮತ್ತು ಇಂಡಿಯಾ ಬಯೋಡೈವರ್ಸಿಟಿ ಪೋರ್ಟಲ್ನಲ್ಲಿ ಒಪ್ಪಿಕೊಂಡ ನಂತರ ಈ ಅನುಮಾನಗಳು ನಿವಾರಣೆಯಾದ ನಂತರ ಅಂತಾರಾಷ್ಟ್ರೀಯ ಜರ್ನಲ್  ರೇಪ್ಟೈಲ್ಸ್ ಅಂಡ್ ಅಂಫಿಬಿಯನ್ಸ್ನಲ್ಲಿ ಪ್ರಕಟಿಸಲಾಗಿದೆ ಎಂದರು.

ಇದೊಂದು ಆಕರ್ಷಣಿಯ ದಾಖಲಾತಿ. ಕೆಲವೊಂದು ಫಂಗೈಗಳು ಇತರೆ ಜೀವಿಗಳೊಂದಿಗೆ ಪರಸ್ಪರ ಅನುಕೂಲಕರವಾಗಿರುತ್ತವೆ ಮತ್ತು ಕೆಲವೊಂದು ಫಂಗೈಗಳು ಇತರ ಜೀವಿಗಳಿಗೆ ಮಾರಕವಾಗಿವೆ. ಕಪ್ಪೆ ಮತ್ತು ಅಣಬೆಯ ಈ ಸಂಭಂದದ ಬಗ್ಗೆ ಹೆಚ್ಚು ಮಾಹಿತಿಗಲಿಲ್ಲ. ಈ ಒಂದು ಸಂಭವ, ಕಪ್ಪೆಗಳಿಗೆ ಫಂಗೈನೊಂದಿಗಿರುವ ಸಂಕೀರ್ಣವಾದ ಸಂಭಂದವನ್ನು ಆಳವಾಗಿ ಅಧ್ಯಯನ ಮಾಡಲು ಸಂಶೋಧಕರಿಗೆ ಪ್ರೇರೇಪಿಸಿದೆ ಎಂದು ಬೆಂಗಳೂರಿನ ಸೆಂಟರ್ ಫಾರ್ ಇಕಾಲಜಿಕಲ್ ಸೈನ್ಸಸ್(ಐಐಎಸ್ಸಿ) -ಡಾ.ವಿವೇಕ್ ಫಿಲಿಪ್ಸಿ ರಿಯಾಕ್ ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 hour ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago