ಅಣಬೆಗಳು ಸಹಜವಾಗಿ ಮಣ್ಣಿನಲ್ಲಿ ಮಾತ್ರ ಬೆಳೆಯುವುದನ್ನ ನಾವು ನೋಡಿದ್ದೇವೆ. ಆದರೆ, ಇಲ್ಲೊಂದು ಜೀವಂತ ಕಪ್ಪೆಯ ಪಕ್ಕೆಯಿಂದ ಅಣಬೆ ಮೊಳಕೆ ಒಡೆದು ಬೆಳೆಯುತ್ತಿರುವುದನ್ನು ಕಂಡುಹಿಡಿಯಲಾಗಿದೆ. ಹಾಗದರೆ ಆ ಕಪ್ಪೆ ಹೆಸರೇನು?, ಅದು ಹೇಗೆ ಬೆಳೆಯುತ್ತದೆ?, ಆ ಕಪ್ಪೆಯನ್ನ ಎಲ್ಲಿ ಕಾಣಬಹುದು? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ….
ಜೀವಂತ ಕಪ್ಪೆಯ ಪಕ್ಕೆಯಿಂದ ಅಣಬೆ ಮೊಳಕೆ ಒಡೆದು ಬೆಳೆಯುತ್ತಿರುವುದನ್ನು ಪೋಟೋ ತೆಗೆಯುವ ಮೂಲಕ ಹೊರ ಜಗತ್ತಿಗೆ ಪ್ರಥಮ ಬಾರಿಗೆ ಡಬ್ಲ್ಯೂ ಡಬ್ಲ್ಯೂ ಎಫ್ ಸಂಸ್ಥೆಯ ಹಿರಿಯ ಯೋಜನ ಅಧಿಕಾರಿ ಹಾಗೂ ಕೀಟ, ಜೇಡಗಳ ಸಂಶೋಶಧಕ ವೈ.ಟಿ.ಲೋಹಿತ್ ಪರಿಚಿಸಿದ್ದಾರೆ.
ಈ ವೇಳೆ ಗೋಲ್ಡನ್ ಬ್ಯಾಕ್ಡ್ ಕಪ್ಪೆಯ ಈ ಅಪರೂಪದ ಬೆಳವಣಿಗೆ ಕುರಿತು ಕಂಡುಹಿಡಿದಿದ್ದಾರೆ. ನಂತರ ಕುರಿತ ಸಂಶೋಧನ ಬರಹವನ್ನು ಅಂತಾರಾಷ್ಟ್ರೀಯ ಜರ್ನಲ್ ರೇಪ್ಟೈಲ್ಸ್ ಅಂಡ್ ಅಂಫಿಬಿಯನ್ಸ್ (Reptiles & Amphibians) ನಲ್ಲಿ ಪ್ರಕಟಿಸಿದೆ.
ಪ್ರಾಣಿ ವರ್ಗ ಮತ್ತು ಸಸ್ಯ ವರ್ಗ ಎರಡಕ್ಕೂ ಸೇರದ ಅಣಬೆ ಫಂಗೈ ವರ್ಗಕ್ಕೆ ಸೇರಿದೆ. ಗೋಲ್ಡನ್ ಬ್ಯಾಕ್ಡ್ ಕಪ್ಪೆ ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಣಬಹುದಾಗಿವೆ. ಮತ್ತು ಅದರ ಮೈ ಮೇಲೆ ಬೆಳೆದಿರುವ ಮೈಸಿನ ಅಥವಾ ಬಾನೆಟ್ ಮಶ್ರೂಮ್ ಎಂದು ಕರೆಯುವ ಈ ಅಣಬೆ ಕೊಳೆತ ಮರದ ಮೇಲಷ್ಟೇ ಬೆಳೆಯುತ್ತದೆ. ಒಂದು ಜೀವಂತ ಪ್ರಾಣಿಯ ಮೇಲೆ ಅಣಬೆ ಬೆಳೆದಿರುವುದು ವಿಜ್ಞಾನ ಲೋಕದಲ್ಲಿ ಮೊದಲ ದಾಖಲೆಗೆ ಪಶ್ಚಿಮ ಘಟ್ಟಗಳ ಸಾಲು ಸಾಕ್ಷಿಯಾಗಿದೆ.
ಉಭಯಚರ ಜೀವಿಗಳಿಗೆ ಕೆಲವೊಂದು ಫಂಗೈಗಳಿಂದ ಕಾಯಿಲೆಗಳು ಸಂಭವಿಸಿ ಸಾಯುತ್ತವೆ. ಇಂತಹ ಸಮಸ್ಯೆ ಕೀಟ ಮತ್ತು ಜೇಡಗಳಲ್ಲೂ ಕಾಣಬಹುದು. ಆದರೆ, ಜೀವಂತ ಕಪ್ಪೆಯ ಮೇಲಿನ ಅಣಬೆ ಇನ್ನಷ್ಟು ವೈಜ್ಞಾನಿಕ ಸಂಶೋಧನೆಗಳಿಗೆ ದಾರಿಮಾಡಿಕೊಟ್ಟಿದೆ ಎನ್ನುವ ವೈ.ಜಿ.ಲೋಹಿತ್, ಇದರ ನಿಖರ ಕಾರಣವನ್ನು ತಕ್ಷಣಕ್ಕೆ ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಮೊದಲ ಬಾರಿಗೆ ಈ ಫೋಟೋಗಳನ್ನು ಗಮನಿಸಿದ ವಿಜ್ಞಾನಿಗಳು ಮತ್ತು ಪರಿಸರಾಸಕ್ತರು ಇದನ್ನು ಆರ್ಟಿಫಿಷಿಯಲ್ ಇಂಟಲಿಜೆಂನ್ಸ್ (ಎಐ) ಚಿತ್ರ ಅಥವಾ ಫೋಟೋಶಾಪ್ ಎಂದು ಅನುಮಾನಿಸಿದ್ದರು. ನಂತರ ಐ ನ್ಯಾಚುರಲಿಸ್ಟ್ ಮತ್ತು ಇಂಡಿಯಾ ಬಯೋಡೈವರ್ಸಿಟಿ ಪೋರ್ಟಲ್ನಲ್ಲಿ ಒಪ್ಪಿಕೊಂಡ ನಂತರ ಈ ಅನುಮಾನಗಳು ನಿವಾರಣೆಯಾದ ನಂತರ ಅಂತಾರಾಷ್ಟ್ರೀಯ ಜರ್ನಲ್ ರೇಪ್ಟೈಲ್ಸ್ ಅಂಡ್ ಅಂಫಿಬಿಯನ್ಸ್ನಲ್ಲಿ ಪ್ರಕಟಿಸಲಾಗಿದೆ ಎಂದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…