ಜೀವನದಲ್ಲಿ ಶಿಸ್ತು, ಸಂಯಮ ಇದ್ದರೆ ಯಶಸ್ಸು‌ ಸಾಧ್ಯ- ಗಿರಿಧರ್ ಕಲ್ಲಾಪೂರ್

ಜೀವನದಲ್ಲಿ ಶಿಸ್ತು, ಸಂಯಮ ಅಳವಡಿಸಿಕೊಂಡ ಪ್ರತಿಯೊಬ್ಬರು ಯಶಸ್ಸನ್ನು ಕಾಣಲು ಸಾಧ್ಯ ಹಾಗೂ ಕೌಶಲ್ಯದ ಕಲಿಕೆಯೊಂದಿಗೆ ಉದ್ಯಮಿಗಳಾಗಲು ಸ್ವಪ್ರೇರಣೆಯು ಅತ್ಯಗತ್ಯ‌ ಎಂದು ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಗಿರಿಧರ್ ಕಲ್ಲಾಪೂರ್ ಅವರು ಶಿಬಿರಾರ್ಥಿಗಳಿಗೆ ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಕಂಪ್ಯೂಟರ್ ಡಿಟಿಪಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಅವರು ಮಾತನಾಡಿದರು.

ಶಿಸ್ತುಬದ್ಧ ಜೀವನವನ್ನು ರೂಪಿಸಿಕೊಂಡು, ಸಮಾಜಕ್ಕೆ ಹೊರೆಯಾಗದಂತೆ ನಮ್ಮ ಹೊಣೆಗಾರಿಕೆಯನ್ನು ಅರಿತು ಜವಾಬ್ಧಾರಿಯುತ ನಾಗರಿಕರಾಗುವುದರೊಂದಿಗೆ ಸಮಾಜದ ಆಸ್ತಿಯಾಗಬೇಕೆಂದು ಹೇಳಿದರು.

ಜಿಲ್ಲಾ ಮಾರ್ಗದರ್ಶಿ ಹಾಗೂ ಬ್ಯಾಂಕ್‌ನ ಮುಖ್ಯ ಪ್ರಬಂಧಕರಾದ ಮಧುಕರ್ ಅವರು ಮಾತನಾಡಿ, ಬ್ಯಾಂಕಿನ ವ್ಯವಹಾರದ ಕುರಿತು, ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ಸ್ವ ಉದ್ಯೋಗಿಗಳಾಗಲು ಲಭ್ಯವಿರುವ ಸಾಲ ಸೌಲಭ್ಯಗಳ ಮಾಹಿತಿಯನ್ನು ಶಿಬಿರಾರ್ಥಿಗಳಿಗೆ ನೀಡಿದರು.

ರುಡ್‌ಸೆಟ್ ಸಂಸ್ಥೆಯ ಉಜಿರೆ ಶಾಖೆಯ ನಿರ್ದೇಶಕರಾದ ಸುರೇಶ್ ಅವರು ಮಾತನಾಡಿ, ತರಬೇತಿ ಪಡೆದ ತಾವು ಕೆಲಸ ಆರಂಭಿಸುವ ಮೂಲಕ ಕಲಿತ ಕೌಶಲ್ಯದ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯ ಕುರಿತು ಹಾಗೂ ಸಂಸ್ಥೆಯಲ್ಲಿ ನಡೆಯುವ ವಿವಿಧ ಚಟುವಟಿಕೆಗಳ ಮಾಹಿತಿಯನ್ನು ಸಂಸ್ಥೆಯ ಶಿಬಿರಾರ್ಥಿಗಳಾದ ತಾವು ಸಾರ್ವಜನಿಕರಿಗೆ ತಿಳಿಸಬೇಕೆಂದರಲ್ಲದೆ, ಶಿಬಿರಾರ್ಥಿಗಳಿಗೆ ಶುಭಕೋರಿದರು.

ಸಮಾರೋಪ ಸಮಾರಂಭದಲ್ಲಿ ಕಂಪ್ಯೂಟರ್ ಡಿಟಿಪಿ ತರಬೇತಿಯ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ ಸೇರಿದಂತೆ ಕಂಪ್ಯೂಟರ್ ಡಿಟಿಪಿ ಹಾಗೂ ಟೈಲರಿಂಗ್ ತರಬೇತಿಯ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

2 hours ago

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ.!

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…

2 hours ago

ಎ.ಬಿ.ಬಸವರಾಜುಗೆ ಸಿಕ್ತು ಪೋಸ್ಟಿಂಗ್: ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ನೇಮಕ

ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…

7 hours ago

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

19 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

20 hours ago