ಜೀವನದಲ್ಲಿ ಶಿಸ್ತು, ಸಂಯಮ ಇದ್ದರೆ ಯಶಸ್ಸು‌ ಸಾಧ್ಯ- ಗಿರಿಧರ್ ಕಲ್ಲಾಪೂರ್

ಜೀವನದಲ್ಲಿ ಶಿಸ್ತು, ಸಂಯಮ ಅಳವಡಿಸಿಕೊಂಡ ಪ್ರತಿಯೊಬ್ಬರು ಯಶಸ್ಸನ್ನು ಕಾಣಲು ಸಾಧ್ಯ ಹಾಗೂ ಕೌಶಲ್ಯದ ಕಲಿಕೆಯೊಂದಿಗೆ ಉದ್ಯಮಿಗಳಾಗಲು ಸ್ವಪ್ರೇರಣೆಯು ಅತ್ಯಗತ್ಯ‌ ಎಂದು ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಗಿರಿಧರ್ ಕಲ್ಲಾಪೂರ್ ಅವರು ಶಿಬಿರಾರ್ಥಿಗಳಿಗೆ ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಕಂಪ್ಯೂಟರ್ ಡಿಟಿಪಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಅವರು ಮಾತನಾಡಿದರು.

ಶಿಸ್ತುಬದ್ಧ ಜೀವನವನ್ನು ರೂಪಿಸಿಕೊಂಡು, ಸಮಾಜಕ್ಕೆ ಹೊರೆಯಾಗದಂತೆ ನಮ್ಮ ಹೊಣೆಗಾರಿಕೆಯನ್ನು ಅರಿತು ಜವಾಬ್ಧಾರಿಯುತ ನಾಗರಿಕರಾಗುವುದರೊಂದಿಗೆ ಸಮಾಜದ ಆಸ್ತಿಯಾಗಬೇಕೆಂದು ಹೇಳಿದರು.

ಜಿಲ್ಲಾ ಮಾರ್ಗದರ್ಶಿ ಹಾಗೂ ಬ್ಯಾಂಕ್‌ನ ಮುಖ್ಯ ಪ್ರಬಂಧಕರಾದ ಮಧುಕರ್ ಅವರು ಮಾತನಾಡಿ, ಬ್ಯಾಂಕಿನ ವ್ಯವಹಾರದ ಕುರಿತು, ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ಸ್ವ ಉದ್ಯೋಗಿಗಳಾಗಲು ಲಭ್ಯವಿರುವ ಸಾಲ ಸೌಲಭ್ಯಗಳ ಮಾಹಿತಿಯನ್ನು ಶಿಬಿರಾರ್ಥಿಗಳಿಗೆ ನೀಡಿದರು.

ರುಡ್‌ಸೆಟ್ ಸಂಸ್ಥೆಯ ಉಜಿರೆ ಶಾಖೆಯ ನಿರ್ದೇಶಕರಾದ ಸುರೇಶ್ ಅವರು ಮಾತನಾಡಿ, ತರಬೇತಿ ಪಡೆದ ತಾವು ಕೆಲಸ ಆರಂಭಿಸುವ ಮೂಲಕ ಕಲಿತ ಕೌಶಲ್ಯದ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯ ಕುರಿತು ಹಾಗೂ ಸಂಸ್ಥೆಯಲ್ಲಿ ನಡೆಯುವ ವಿವಿಧ ಚಟುವಟಿಕೆಗಳ ಮಾಹಿತಿಯನ್ನು ಸಂಸ್ಥೆಯ ಶಿಬಿರಾರ್ಥಿಗಳಾದ ತಾವು ಸಾರ್ವಜನಿಕರಿಗೆ ತಿಳಿಸಬೇಕೆಂದರಲ್ಲದೆ, ಶಿಬಿರಾರ್ಥಿಗಳಿಗೆ ಶುಭಕೋರಿದರು.

ಸಮಾರೋಪ ಸಮಾರಂಭದಲ್ಲಿ ಕಂಪ್ಯೂಟರ್ ಡಿಟಿಪಿ ತರಬೇತಿಯ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ ಸೇರಿದಂತೆ ಕಂಪ್ಯೂಟರ್ ಡಿಟಿಪಿ ಹಾಗೂ ಟೈಲರಿಂಗ್ ತರಬೇತಿಯ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

4 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

5 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

19 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

21 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

1 day ago