ಜೀವನದಲ್ಲಿ ಶಿಸ್ತು, ಸಂಯಮ ಇದ್ದರೆ ಯಶಸ್ಸು‌ ಸಾಧ್ಯ- ಗಿರಿಧರ್ ಕಲ್ಲಾಪೂರ್

ಜೀವನದಲ್ಲಿ ಶಿಸ್ತು, ಸಂಯಮ ಅಳವಡಿಸಿಕೊಂಡ ಪ್ರತಿಯೊಬ್ಬರು ಯಶಸ್ಸನ್ನು ಕಾಣಲು ಸಾಧ್ಯ ಹಾಗೂ ಕೌಶಲ್ಯದ ಕಲಿಕೆಯೊಂದಿಗೆ ಉದ್ಯಮಿಗಳಾಗಲು ಸ್ವಪ್ರೇರಣೆಯು ಅತ್ಯಗತ್ಯ‌ ಎಂದು ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಗಿರಿಧರ್ ಕಲ್ಲಾಪೂರ್ ಅವರು ಶಿಬಿರಾರ್ಥಿಗಳಿಗೆ ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಕಂಪ್ಯೂಟರ್ ಡಿಟಿಪಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಅವರು ಮಾತನಾಡಿದರು.

ಶಿಸ್ತುಬದ್ಧ ಜೀವನವನ್ನು ರೂಪಿಸಿಕೊಂಡು, ಸಮಾಜಕ್ಕೆ ಹೊರೆಯಾಗದಂತೆ ನಮ್ಮ ಹೊಣೆಗಾರಿಕೆಯನ್ನು ಅರಿತು ಜವಾಬ್ಧಾರಿಯುತ ನಾಗರಿಕರಾಗುವುದರೊಂದಿಗೆ ಸಮಾಜದ ಆಸ್ತಿಯಾಗಬೇಕೆಂದು ಹೇಳಿದರು.

ಜಿಲ್ಲಾ ಮಾರ್ಗದರ್ಶಿ ಹಾಗೂ ಬ್ಯಾಂಕ್‌ನ ಮುಖ್ಯ ಪ್ರಬಂಧಕರಾದ ಮಧುಕರ್ ಅವರು ಮಾತನಾಡಿ, ಬ್ಯಾಂಕಿನ ವ್ಯವಹಾರದ ಕುರಿತು, ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ಸ್ವ ಉದ್ಯೋಗಿಗಳಾಗಲು ಲಭ್ಯವಿರುವ ಸಾಲ ಸೌಲಭ್ಯಗಳ ಮಾಹಿತಿಯನ್ನು ಶಿಬಿರಾರ್ಥಿಗಳಿಗೆ ನೀಡಿದರು.

ರುಡ್‌ಸೆಟ್ ಸಂಸ್ಥೆಯ ಉಜಿರೆ ಶಾಖೆಯ ನಿರ್ದೇಶಕರಾದ ಸುರೇಶ್ ಅವರು ಮಾತನಾಡಿ, ತರಬೇತಿ ಪಡೆದ ತಾವು ಕೆಲಸ ಆರಂಭಿಸುವ ಮೂಲಕ ಕಲಿತ ಕೌಶಲ್ಯದ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯ ಕುರಿತು ಹಾಗೂ ಸಂಸ್ಥೆಯಲ್ಲಿ ನಡೆಯುವ ವಿವಿಧ ಚಟುವಟಿಕೆಗಳ ಮಾಹಿತಿಯನ್ನು ಸಂಸ್ಥೆಯ ಶಿಬಿರಾರ್ಥಿಗಳಾದ ತಾವು ಸಾರ್ವಜನಿಕರಿಗೆ ತಿಳಿಸಬೇಕೆಂದರಲ್ಲದೆ, ಶಿಬಿರಾರ್ಥಿಗಳಿಗೆ ಶುಭಕೋರಿದರು.

ಸಮಾರೋಪ ಸಮಾರಂಭದಲ್ಲಿ ಕಂಪ್ಯೂಟರ್ ಡಿಟಿಪಿ ತರಬೇತಿಯ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ ಸೇರಿದಂತೆ ಕಂಪ್ಯೂಟರ್ ಡಿಟಿಪಿ ಹಾಗೂ ಟೈಲರಿಂಗ್ ತರಬೇತಿಯ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

36 minutes ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

16 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

21 hours ago