ಜೀವನದಲ್ಲಿ ಶಿಸ್ತು, ಸಂಯಮ ಇದ್ದರೆ ಯಶಸ್ಸು‌ ಸಾಧ್ಯ- ಗಿರಿಧರ್ ಕಲ್ಲಾಪೂರ್

ಜೀವನದಲ್ಲಿ ಶಿಸ್ತು, ಸಂಯಮ ಅಳವಡಿಸಿಕೊಂಡ ಪ್ರತಿಯೊಬ್ಬರು ಯಶಸ್ಸನ್ನು ಕಾಣಲು ಸಾಧ್ಯ ಹಾಗೂ ಕೌಶಲ್ಯದ ಕಲಿಕೆಯೊಂದಿಗೆ ಉದ್ಯಮಿಗಳಾಗಲು ಸ್ವಪ್ರೇರಣೆಯು ಅತ್ಯಗತ್ಯ‌ ಎಂದು ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಗಿರಿಧರ್ ಕಲ್ಲಾಪೂರ್ ಅವರು ಶಿಬಿರಾರ್ಥಿಗಳಿಗೆ ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಕಂಪ್ಯೂಟರ್ ಡಿಟಿಪಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಅವರು ಮಾತನಾಡಿದರು.

ಶಿಸ್ತುಬದ್ಧ ಜೀವನವನ್ನು ರೂಪಿಸಿಕೊಂಡು, ಸಮಾಜಕ್ಕೆ ಹೊರೆಯಾಗದಂತೆ ನಮ್ಮ ಹೊಣೆಗಾರಿಕೆಯನ್ನು ಅರಿತು ಜವಾಬ್ಧಾರಿಯುತ ನಾಗರಿಕರಾಗುವುದರೊಂದಿಗೆ ಸಮಾಜದ ಆಸ್ತಿಯಾಗಬೇಕೆಂದು ಹೇಳಿದರು.

ಜಿಲ್ಲಾ ಮಾರ್ಗದರ್ಶಿ ಹಾಗೂ ಬ್ಯಾಂಕ್‌ನ ಮುಖ್ಯ ಪ್ರಬಂಧಕರಾದ ಮಧುಕರ್ ಅವರು ಮಾತನಾಡಿ, ಬ್ಯಾಂಕಿನ ವ್ಯವಹಾರದ ಕುರಿತು, ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ಸ್ವ ಉದ್ಯೋಗಿಗಳಾಗಲು ಲಭ್ಯವಿರುವ ಸಾಲ ಸೌಲಭ್ಯಗಳ ಮಾಹಿತಿಯನ್ನು ಶಿಬಿರಾರ್ಥಿಗಳಿಗೆ ನೀಡಿದರು.

ರುಡ್‌ಸೆಟ್ ಸಂಸ್ಥೆಯ ಉಜಿರೆ ಶಾಖೆಯ ನಿರ್ದೇಶಕರಾದ ಸುರೇಶ್ ಅವರು ಮಾತನಾಡಿ, ತರಬೇತಿ ಪಡೆದ ತಾವು ಕೆಲಸ ಆರಂಭಿಸುವ ಮೂಲಕ ಕಲಿತ ಕೌಶಲ್ಯದ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯ ಕುರಿತು ಹಾಗೂ ಸಂಸ್ಥೆಯಲ್ಲಿ ನಡೆಯುವ ವಿವಿಧ ಚಟುವಟಿಕೆಗಳ ಮಾಹಿತಿಯನ್ನು ಸಂಸ್ಥೆಯ ಶಿಬಿರಾರ್ಥಿಗಳಾದ ತಾವು ಸಾರ್ವಜನಿಕರಿಗೆ ತಿಳಿಸಬೇಕೆಂದರಲ್ಲದೆ, ಶಿಬಿರಾರ್ಥಿಗಳಿಗೆ ಶುಭಕೋರಿದರು.

ಸಮಾರೋಪ ಸಮಾರಂಭದಲ್ಲಿ ಕಂಪ್ಯೂಟರ್ ಡಿಟಿಪಿ ತರಬೇತಿಯ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ ಸೇರಿದಂತೆ ಕಂಪ್ಯೂಟರ್ ಡಿಟಿಪಿ ಹಾಗೂ ಟೈಲರಿಂಗ್ ತರಬೇತಿಯ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

8 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago