Categories: ಲೇಖನ

ಜೀವನದ ಪಯಣ ಅತ್ಯಂತ ದೀರ್ಘವೇ ….?

ಬದುಕೊಂದು ದೂರದ ಪಯಣ.
ತುಂಬಾ ತುಂಬಾ ದೂರ ನಿರಂತರವಾಗಿ ನಡೆಯಬೇಕು ಮರೆಯಾಗುವ ಮುನ್ನ………………

Life is Short ,
Make it Sweet…………..

ಈ ಎರಡು ವಿಭಿನ್ನ ಹೇಳಿಕೆಗಳನ್ನು ಗಮನಿಸಿ.

ಒಂದು ಬದುಕನ್ನು ದೀರ್ಘ ಅವಧಿಯ ಹೋರಾಟ ಎಂದು ಹೇಳಿದರೆ ಮತ್ತೊಂದು ಬದುಕು ತುಂಬಾ ಚಿಕ್ಕ ಸಮಯದ್ದು ಎಂಬ ಅರ್ಥ ಕೊಡುತ್ತದೆ.

ಹಾಗಾದರೆ ಬದುಕು ದೀರ್ಘವೇ ಅಥವಾ ಕಡಿಮೆ ಸಮಯವೇ ?………

ಭಾರತದ ಈಗಿನ ಸರಾಸರಿ ಆಯಸ್ಸು ಅಧಿಕೃತವಾಗಿ ಸುಮಾರು 63/65 ರ ಆಸುಪಾಸಿನಲ್ಲಿ ಇದೆ. ಅದನ್ನು ಸುಮಾರು 75 ಎಂದು ಭಾವಿಸಿಕೊಳ್ಳೋಣ.

75 ವಯಸ್ಸು ಕೆಲವರಿಗೆ ದೀರ್ಘ ಮತ್ತೆ ಕೆಲವರಿಗೆ ಕಡಿಮೆ ಅದು ಅವರವರ ಜೀವನ ಶೈಲಿ ಮತ್ತು ಮನೋಭಾವ ಅವಲಂಬಿಸಿರುತ್ತದೆ ಎಂದು ಲೋಕಾಭಿರಾಮವಾಗಿ ಹೇಳಬಹುದು.

ಆದರೆ ವಾಸ್ತವ ಏನು. ನಾವು ಬದುಕನ್ನು ದೀರ್ಘವೆಂದು ಪರಿಗಣಿಸಬೇಕೆ ಅಥವಾ ಸಣ್ಣ ಅವಧಿ ಎಂದು ಭಾವಿಸಬೇಕೆ ?

ನನ್ನ ದೃಷ್ಟಿಯಲ್ಲಿ ಬದುಕೊಂದು ದೀರ್ಘ ಪಯಣ. ಜೀವನದಲ್ಲಿ ನಮ್ಮ ಬಳಿ ತುಂಬಾ ತುಂಬಾ ಸಮಯವಿದೆ. ಹುಟ್ಟಿನಿಂದ ಸಾಯುವವರೆಗೆ ಸುಮಾರು ಮುಕ್ಕಾಲು ಶತಮಾನದಷ್ಟು ದೂರದ ಹಾದಿ ಇದೆ.

ನಮ್ಮ ಆಸೆ ಆಕಾಂಕ್ಷೆಗಳು, ಕನಸುಗಳು, ಸವಾಲುಗಳು, ಪ್ರಯೋಗಗಳು, ಸೋಲಿನ ಕುಸಿತ, ಗೆಲುವಿನ ಮೆಟ್ಟಿಲು…….. ಎಲ್ಲವನ್ನೂ ನಿಭಾಯಿಸಲು ಸಾಕಷ್ಟು ಸಮಯವಿರುತ್ತದೆ. ಹಣದ ಕೊರತೆ, ಪ್ರೇಮ ವೈಫಲ್ಯ, ಕೌಟುಂಬಿಕ ವಿಭಜನೆ, ನೈಸರ್ಗಿಕ ವಿಕೋಪ, ವ್ಯವಸ್ಥೆಯ ಶೋಷಣೆ, ನಿರಂತರ ಸೋಲು ಎಲ್ಲವನ್ನು ಎದುರಿಸಲು, ಅನುಭವಿಸಲು ಮತ್ತೆ ಕಟ್ಟಲು ನಮ್ಮ ಬಳಿ ಕಾಲವಿದೆ.

ಇದಕ್ಕೆ ಪ್ರತಿಯಾಗಿ,
ಜೀವನದ ಕಾಲ ತುಂಬಾ ಕಡಿಮೆ ಇದೆ ಎಂದು ಭಾವಿಸಿದಲ್ಲಿ ನಮ್ಮ ಮೇಲೆ ಒತ್ತಡ ಹೆಚ್ಚಾಗುತ್ತದೆ. ಇರುವ ಸ್ವಲ್ಪ ಸಮಯದಲ್ಲಿ ಎಲ್ಲವನ್ನೂ ಮಾಡಲು ಹೋಗಿ ಬದುಕಿನ ಸ್ವಾರಸ್ಯವನ್ನೇ ಕಳೆದುಕೊಳ್ಳುತ್ತೇವೆ.

ಬೆಳಗಿನಿಂದ ರಾತ್ರಿಯವರೆಗೆ ವರ್ಷದ 365 ದಿನವೂ ಕೆಲಸದ ಒತ್ತಡಕ್ಕೆ ಸಿಲುಕಿ ನೆಮ್ಮದಿಗಾಗಿ ಹುಡುಕಾಡುವ ಸಾಧ್ಯತೆಯೇ ಹೆಚ್ಚು. ಮಧ್ಯಮ ವರ್ಗದವರಂತೂ ಸ್ವಂತ ಮನೆ, ಮಕ್ಕಳ ಶಿಕ್ಷಣ ಮತ್ತು ಮದುವೆ, ಕಾರು ಅದು ಇದು ಎಂದು ಇಡೀ ಜೀವನ ಅದಕ್ಕಾಗಿಯೇ ಮುಡುಪಿಡುತ್ತಾರೆ. ಭೌತಿಕ ವಸ್ತುಗಳ ಹುಡುಕಾಟವೇ ಜೀವನ ಎಂಬಂತಾಗಿದೆ.

ಅದರಲ್ಲೂ ಈ ಆಧುನಿಕ ವೇಗದ ಯುಗದಲ್ಲಿ ಸಮಯ ಸರಿಯುವುದೇ ತಿಳಿಯುವುದಿಲ್ಲ. ದಿನನಿತ್ಯದ ಒತ್ತಡದಲ್ಲಿ ತಿಂಗಳು – ವರ್ಷಗಳು ಬೇಗ ಬೇಗ ಸಾಗಿದಂತೆನಿಸುತ್ತದೆ.

ಅವಶ್ಯಕತೆಗಳು ಹೆಚ್ಚಾದಂತೆ,
ಆ ಅವಶ್ಯಕತೆಗಳೇ ಅನಿವಾರ್ಯಗಳಾಗಿ,
ಆ ಅನಿವಾರ್ಯಗಳೇ ಬದುಕಿನ ಭಾಗಗಳಾಗಿ,
ಆ ಭಾಗಗಳನ್ನು ಪೂರೈಸಿಕೊಳ್ಳುವುದೇ ಜೀವನದ ಉದ್ದೇಶಗಳಾಗಿ,
ಆ ಉದ್ದೇಶಗಳಿಗಾಗಿಯೇ ಸಮಯವನ್ನು ಮೀಸಲಿಡಬೇಕಾಗಿರುವುದರಿಂದ ಜೀವನದ ಸಮಯ ತುಂಬಾ ಕಡಿಮೆಯಾಗಿದೆ ಎಂದು ಭಾಸವಾಗುತ್ತದೆ.
ನಾವುಗಳ ಅದರಲ್ಲಿಯೇ ಕಳೆದು ಹೋಗುತ್ತಿದ್ದೇವೆ.

ಬದುಕನ್ನು ಒಂದು ನದಿಗೆ ಹೋಲಿಸಬಹುದು. ನದಿ ಹುಟ್ಟಿ ಸಮುದ್ರ ಸೇರುವವರೆಗೆ ದೀರ್ಘವಾಗಿ ಮತ್ತು ನಿರಂತರವಾಗಿ ಚಲಿಸುತ್ತಿರುತ್ತದೆ. ಆ ಹಾದಿಯಲ್ಲಿ ಕೆಲವೊಮ್ಮೆ ವಿಶಾಲವಾಗಿ, ಮತ್ತೆ ಕೆಲವು ಸಲ ಇಕ್ಕಟ್ಟಾದ ಜಾಗದಲ್ಲಿ, ಹಲವೊಮ್ಮೆ ರಭಸದಿಂದ, ಮತ್ತೆ ಪ್ರಶಾಂತತೆಯಿಂದ ಅನೇಕ ಎಡರು ತೊಡರುಗಳನ್ನು ಎದುರಿಸಿ ಸಾಗುತ್ತದೆ.
ಕೆಲವೊಮ್ಮೆ ಮನುಷ್ಯ ಪ್ರಾಣಿ ತನ್ನ ಸ್ವಾರ್ಥಕ್ಕಾಗಿ ಅಣೆಕಟ್ಟು ಕಟ್ಟಿ ಅದನ್ನು ಬಂಧಿಸುತ್ತಾನೆ. ಆಗಲೂ ನದಿ ಸಮುದ್ರ ಸೇರುವ ತವಕದಿಂದ ತನ್ನ ಸಮಯಕ್ಕೆ ಕಾಯುತ್ತದೆ ಅದು ಎಷ್ಟೇ ದೀರ್ಘ ಸಮಯವಾದರೂ…….

ಆದರೂ,
ಬದುಕನ್ನು ಹೀಗೆ ಎಂದು ನಿರ್ಧರಿಸುವುದು ಕಷ್ಟ. ಆದರೆ ಜೀವನವನ್ನು ಆಗಾಗ ಪುನರ್ ವಿಮರ್ಶೆಗೆ ಒಳಪಡಿಸಿ ನೆಮ್ಮದಿಯ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಸದಾ ಪ್ರಯತ್ನಿಸುತ್ತಿರಬೇಕು.

ಏಕೆಂದರೆ ಬದುಕೊಂದು ಸುದೀರ್ಘ ಪಯಣ ಅನಂತದೆಡೆಗೆ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕರಾಯಪ್ಪನಹಳ್ಳಿ ಮಾರ್ಗದ…

2 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

3 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

6 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

7 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago