Categories: Home

ಜೀವನದ ಪಯಣ ಅತ್ಯಂತ ದೀರ್ಘವೇ ….? ಅಥವಾ ಕಡಿಮೆ ಸಮಯದ್ದೇ..?

ಬದುಕೊಂದು ದೂರದ ಪಯಣ. ತುಂಬಾ ತುಂಬಾ ದೂರ ನಿರಂತರವಾಗಿ ನಡೆಯಬೇಕು ಮರೆಯಾಗುವ ಮುನ್ನ………………

Life is Short ,
Make it Sweet…………..

ಈ ಎರಡು ವಿಭಿನ್ನ ಹೇಳಿಕೆಗಳನ್ನು ಗಮನಿಸಿ.

ಒಂದು ಬದುಕನ್ನು ದೀರ್ಘ ಅವಧಿಯ ಹೋರಾಟ ಎಂದು ಹೇಳಿದರೆ ಮತ್ತೊಂದು ಬದುಕು ತುಂಬಾ ಚಿಕ್ಕ ಸಮಯದ್ದು ಎಂಬ ಅರ್ಥ ಕೊಡುತ್ತದೆ.

ಹಾಗಾದರೆ ಬದುಕು ದೀರ್ಘವೇ ಅಥವಾ ಕಡಿಮೆ ಸಮಯವೇ ?………

ಭಾರತದ ಈಗಿನ ಸರಾಸರಿ ಆಯಸ್ಸು ಅಧಿಕೃತವಾಗಿ ಸುಮಾರು 63/65 ರ ಆಸುಪಾಸಿನಲ್ಲಿ ಇದೆ. ಅದನ್ನು ಸುಮಾರು 75 ಎಂದು ಭಾವಿಸಿಕೊಳ್ಳೋಣ.

75 ವಯಸ್ಸು ಕೆಲವರಿಗೆ ದೀರ್ಘ ಮತ್ತೆ ಕೆಲವರಿಗೆ ಕಡಿಮೆ ಅದು ಅವರವರ ಜೀವನ ಶೈಲಿ ಮತ್ತು ಮನೋಭಾವ ಅವಲಂಬಿಸಿರುತ್ತದೆ ಎಂದು ಲೋಕಾಭಿರಾಮವಾಗಿ ಹೇಳಬಹುದು.

ಆದರೆ ವಾಸ್ತವ ಏನು. ನಾವು ಬದುಕನ್ನು ದೀರ್ಘವೆಂದು ಪರಿಗಣಿಸಬೇಕೆ ಅಥವಾ ಸಣ್ಣ ಅವಧಿ ಎಂದು ಭಾವಿಸಬೇಕೆ?

ನನ್ನ ದೃಷ್ಟಿಯಲ್ಲಿ ಬದುಕೊಂದು ದೀರ್ಘ ಪಯಣ. ಜೀವನದಲ್ಲಿ ನಮ್ಮ ಬಳಿ ತುಂಬಾ ತುಂಬಾ ಸಮಯವಿದೆ. ಹುಟ್ಟಿನಿಂದ ಸಾಯುವವರೆಗೆ ಸುಮಾರು ಮುಕ್ಕಾಲು ಶತಮಾನದಷ್ಟು ದೂರದ ಹಾದಿ ಇದೆ.

ನಮ್ಮ ಆಸೆ ಆಕಾಂಕ್ಷೆಗಳು, ಕನಸುಗಳು, ಸವಾಲುಗಳು, ಪ್ರಯೋಗಗಳು, ಸೋಲಿನ ಕುಸಿತ, ಗೆಲುವಿನ ಮೆಟ್ಟಿಲು…….. ಎಲ್ಲವನ್ನೂ ನಿಭಾಯಿಸಲು ಸಾಕಷ್ಟು ಸಮಯವಿರುತ್ತದೆ. ಹಣದ ಕೊರತೆ, ಪ್ರೇಮ ವೈಫಲ್ಯ, ಕೌಟುಂಬಿಕ ವಿಭಜನೆ, ನೈಸರ್ಗಿಕ ವಿಕೋಪ, ವ್ಯವಸ್ಥೆಯ ಶೋಷಣೆ, ನಿರಂತರ ಸೋಲು ಎಲ್ಲವನ್ನು ಎದುರಿಸಲು, ಅನುಭವಿಸಲು ಮತ್ತೆ ಕಟ್ಟಲು ನಮ್ಮ ಬಳಿ ಕಾಲವಿದೆ.

ಇದಕ್ಕೆ ಪ್ರತಿಯಾಗಿ,
ಜೀವನದ ಕಾಲ ತುಂಬಾ ಕಡಿಮೆ ಇದೆ ಎಂದು ಭಾವಿಸಿದಲ್ಲಿ ನಮ್ಮ ಮೇಲೆ ಒತ್ತಡ ಹೆಚ್ಚಾಗುತ್ತದೆ. ಇರುವ ಸ್ವಲ್ಪ ಸಮಯದಲ್ಲಿ ಎಲ್ಲವನ್ನೂ ಮಾಡಲು ಹೋಗಿ ಬದುಕಿನ ಸ್ವಾರಸ್ಯವನ್ನೇ ಕಳೆದುಕೊಳ್ಳುತ್ತೇವೆ.

ಬೆಳಗಿನಿಂದ ರಾತ್ರಿಯವರೆಗೆ ವರ್ಷದ 365 ದಿನವೂ ಕೆಲಸದ ಒತ್ತಡಕ್ಕೆ ಸಿಲುಕಿ ನೆಮ್ಮದಿಗಾಗಿ ಹುಡುಕಾಡುವ ಸಾಧ್ಯತೆಯೇ ಹೆಚ್ಚು. ಮಧ್ಯಮ ವರ್ಗದವರಂತೂ ಸ್ವಂತ ಮನೆ, ಮಕ್ಕಳ ಶಿಕ್ಷಣ ಮತ್ತು ಮದುವೆ, ಕಾರು ಅದು ಇದು ಎಂದು ಇಡೀ ಜೀವನ ಅದಕ್ಕಾಗಿಯೇ ಮುಡುಪಿಡುತ್ತಾರೆ. ಭೌತಿಕ ವಸ್ತುಗಳ ಹುಡುಕಾಟವೇ ಜೀವನ ಎಂಬಂತಾಗಿದೆ.

ಅದರಲ್ಲೂ ಈ ಆಧುನಿಕ ವೇಗದ ಯುಗದಲ್ಲಿ ಸಮಯ ಸರಿಯುವುದೇ ತಿಳಿಯುವುದಿಲ್ಲ. ದಿನನಿತ್ಯದ ಒತ್ತಡದಲ್ಲಿ ತಿಂಗಳು – ವರ್ಷಗಳು ಬೇಗ ಬೇಗ ಸಾಗಿದಂತೆನಿಸುತ್ತದೆ.

ಅವಶ್ಯಕತೆಗಳು ಹೆಚ್ಚಾದಂತೆ,
ಆ ಅವಶ್ಯಕತೆಗಳೇ ಅನಿವಾರ್ಯಗಳಾಗಿ,
ಆ ಅನಿವಾರ್ಯಗಳೇ ಬದುಕಿನ ಭಾಗಗಳಾಗಿ,
ಆ ಭಾಗಗಳನ್ನು ಪೂರೈಸಿಕೊಳ್ಳುವುದೇ ಜೀವನದ ಉದ್ದೇಶಗಳಾಗಿ, ಆ ಉದ್ದೇಶಗಳಿಗಾಗಿಯೇ ಸಮಯವನ್ನು ಮೀಸಲಿಡಬೇಕಾಗಿರುವುದರಿಂದ ಜೀವನದ ಸಮಯ ತುಂಬಾ ಕಡಿಮೆಯಾಗಿದೆ ಎಂದು ಭಾಸವಾಗುತ್ತದೆ.
ನಾವುಗಳು ಅದರಲ್ಲಿಯೇ ಕಳೆದು ಹೋಗುತ್ತಿದ್ದೇವೆ.

ಬದುಕನ್ನು ಒಂದು ನದಿಗೆ ಹೋಲಿಸಬಹುದು. ನದಿ ಹುಟ್ಟಿ ಸಮುದ್ರ ಸೇರುವವರೆಗೆ ದೀರ್ಘವಾಗಿ ಮತ್ತು ನಿರಂತರವಾಗಿ ಚಲಿಸುತ್ತಿರುತ್ತದೆ. ಆ ಹಾದಿಯಲ್ಲಿ ಕೆಲವೊಮ್ಮೆ ವಿಶಾಲವಾಗಿ, ಮತ್ತೆ ಕೆಲವು ಸಲ ಇಕ್ಕಟ್ಟಾದ ಜಾಗದಲ್ಲಿ, ಹಲವೊಮ್ಮೆ ರಭಸದಿಂದ, ಮತ್ತೆ ಪ್ರಶಾಂತತೆಯಿಂದ ಅನೇಕ ಎಡರು ತೊಡರುಗಳನ್ನು ಎದುರಿಸಿ ಸಾಗುತ್ತದೆ.

ಕೆಲವೊಮ್ಮೆ ಮನುಷ್ಯ ಪ್ರಾಣಿ ತನ್ನ ಸ್ವಾರ್ಥಕ್ಕಾಗಿ ಅಣೆಕಟ್ಟು ಕಟ್ಟಿ ಅದನ್ನು ಬಂಧಿಸುತ್ತಾನೆ. ಆಗಲೂ ನದಿ ಸಮುದ್ರ ಸೇರುವ ತವಕದಿಂದ ತನ್ನ ಸಮಯಕ್ಕೆ ಕಾಯುತ್ತದೆ ಅದು ಎಷ್ಟೇ ದೀರ್ಘ ಸಮಯವಾದರೂ…….

ಆದರೂ,
ಬದುಕನ್ನು ಹೀಗೆ ಎಂದು ನಿರ್ಧರಿಸುವುದು ಕಷ್ಟ. ಆದರೆ, ಜೀವನವನ್ನು ಆಗಾಗ ಪುನರ್ ವಿಮರ್ಶೆಗೆ ಒಳಪಡಿಸಿ ನೆಮ್ಮದಿಯ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಸದಾ ಪ್ರಯತ್ನಿಸುತ್ತಿರಬೇಕು.

ಏಕೆಂದರೆ ಬದುಕೊಂದು ಸುದೀರ್ಘ ಪಯಣ ಅನಂತದೆಡೆಗೆ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

2 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

4 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

7 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

12 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

23 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

1 day ago