Categories: Home

ಜೀವನದ ಪಯಣ ಅತ್ಯಂತ ದೀರ್ಘವೇ ….? ಅಥವಾ ಕಡಿಮೆ ಸಮಯದ್ದೇ..?

ಬದುಕೊಂದು ದೂರದ ಪಯಣ. ತುಂಬಾ ತುಂಬಾ ದೂರ ನಿರಂತರವಾಗಿ ನಡೆಯಬೇಕು ಮರೆಯಾಗುವ ಮುನ್ನ………………

Life is Short ,
Make it Sweet…………..

ಈ ಎರಡು ವಿಭಿನ್ನ ಹೇಳಿಕೆಗಳನ್ನು ಗಮನಿಸಿ.

ಒಂದು ಬದುಕನ್ನು ದೀರ್ಘ ಅವಧಿಯ ಹೋರಾಟ ಎಂದು ಹೇಳಿದರೆ ಮತ್ತೊಂದು ಬದುಕು ತುಂಬಾ ಚಿಕ್ಕ ಸಮಯದ್ದು ಎಂಬ ಅರ್ಥ ಕೊಡುತ್ತದೆ.

ಹಾಗಾದರೆ ಬದುಕು ದೀರ್ಘವೇ ಅಥವಾ ಕಡಿಮೆ ಸಮಯವೇ ?………

ಭಾರತದ ಈಗಿನ ಸರಾಸರಿ ಆಯಸ್ಸು ಅಧಿಕೃತವಾಗಿ ಸುಮಾರು 63/65 ರ ಆಸುಪಾಸಿನಲ್ಲಿ ಇದೆ. ಅದನ್ನು ಸುಮಾರು 75 ಎಂದು ಭಾವಿಸಿಕೊಳ್ಳೋಣ.

75 ವಯಸ್ಸು ಕೆಲವರಿಗೆ ದೀರ್ಘ ಮತ್ತೆ ಕೆಲವರಿಗೆ ಕಡಿಮೆ ಅದು ಅವರವರ ಜೀವನ ಶೈಲಿ ಮತ್ತು ಮನೋಭಾವ ಅವಲಂಬಿಸಿರುತ್ತದೆ ಎಂದು ಲೋಕಾಭಿರಾಮವಾಗಿ ಹೇಳಬಹುದು.

ಆದರೆ ವಾಸ್ತವ ಏನು. ನಾವು ಬದುಕನ್ನು ದೀರ್ಘವೆಂದು ಪರಿಗಣಿಸಬೇಕೆ ಅಥವಾ ಸಣ್ಣ ಅವಧಿ ಎಂದು ಭಾವಿಸಬೇಕೆ?

ನನ್ನ ದೃಷ್ಟಿಯಲ್ಲಿ ಬದುಕೊಂದು ದೀರ್ಘ ಪಯಣ. ಜೀವನದಲ್ಲಿ ನಮ್ಮ ಬಳಿ ತುಂಬಾ ತುಂಬಾ ಸಮಯವಿದೆ. ಹುಟ್ಟಿನಿಂದ ಸಾಯುವವರೆಗೆ ಸುಮಾರು ಮುಕ್ಕಾಲು ಶತಮಾನದಷ್ಟು ದೂರದ ಹಾದಿ ಇದೆ.

ನಮ್ಮ ಆಸೆ ಆಕಾಂಕ್ಷೆಗಳು, ಕನಸುಗಳು, ಸವಾಲುಗಳು, ಪ್ರಯೋಗಗಳು, ಸೋಲಿನ ಕುಸಿತ, ಗೆಲುವಿನ ಮೆಟ್ಟಿಲು…….. ಎಲ್ಲವನ್ನೂ ನಿಭಾಯಿಸಲು ಸಾಕಷ್ಟು ಸಮಯವಿರುತ್ತದೆ. ಹಣದ ಕೊರತೆ, ಪ್ರೇಮ ವೈಫಲ್ಯ, ಕೌಟುಂಬಿಕ ವಿಭಜನೆ, ನೈಸರ್ಗಿಕ ವಿಕೋಪ, ವ್ಯವಸ್ಥೆಯ ಶೋಷಣೆ, ನಿರಂತರ ಸೋಲು ಎಲ್ಲವನ್ನು ಎದುರಿಸಲು, ಅನುಭವಿಸಲು ಮತ್ತೆ ಕಟ್ಟಲು ನಮ್ಮ ಬಳಿ ಕಾಲವಿದೆ.

ಇದಕ್ಕೆ ಪ್ರತಿಯಾಗಿ,
ಜೀವನದ ಕಾಲ ತುಂಬಾ ಕಡಿಮೆ ಇದೆ ಎಂದು ಭಾವಿಸಿದಲ್ಲಿ ನಮ್ಮ ಮೇಲೆ ಒತ್ತಡ ಹೆಚ್ಚಾಗುತ್ತದೆ. ಇರುವ ಸ್ವಲ್ಪ ಸಮಯದಲ್ಲಿ ಎಲ್ಲವನ್ನೂ ಮಾಡಲು ಹೋಗಿ ಬದುಕಿನ ಸ್ವಾರಸ್ಯವನ್ನೇ ಕಳೆದುಕೊಳ್ಳುತ್ತೇವೆ.

ಬೆಳಗಿನಿಂದ ರಾತ್ರಿಯವರೆಗೆ ವರ್ಷದ 365 ದಿನವೂ ಕೆಲಸದ ಒತ್ತಡಕ್ಕೆ ಸಿಲುಕಿ ನೆಮ್ಮದಿಗಾಗಿ ಹುಡುಕಾಡುವ ಸಾಧ್ಯತೆಯೇ ಹೆಚ್ಚು. ಮಧ್ಯಮ ವರ್ಗದವರಂತೂ ಸ್ವಂತ ಮನೆ, ಮಕ್ಕಳ ಶಿಕ್ಷಣ ಮತ್ತು ಮದುವೆ, ಕಾರು ಅದು ಇದು ಎಂದು ಇಡೀ ಜೀವನ ಅದಕ್ಕಾಗಿಯೇ ಮುಡುಪಿಡುತ್ತಾರೆ. ಭೌತಿಕ ವಸ್ತುಗಳ ಹುಡುಕಾಟವೇ ಜೀವನ ಎಂಬಂತಾಗಿದೆ.

ಅದರಲ್ಲೂ ಈ ಆಧುನಿಕ ವೇಗದ ಯುಗದಲ್ಲಿ ಸಮಯ ಸರಿಯುವುದೇ ತಿಳಿಯುವುದಿಲ್ಲ. ದಿನನಿತ್ಯದ ಒತ್ತಡದಲ್ಲಿ ತಿಂಗಳು – ವರ್ಷಗಳು ಬೇಗ ಬೇಗ ಸಾಗಿದಂತೆನಿಸುತ್ತದೆ.

ಅವಶ್ಯಕತೆಗಳು ಹೆಚ್ಚಾದಂತೆ,
ಆ ಅವಶ್ಯಕತೆಗಳೇ ಅನಿವಾರ್ಯಗಳಾಗಿ,
ಆ ಅನಿವಾರ್ಯಗಳೇ ಬದುಕಿನ ಭಾಗಗಳಾಗಿ,
ಆ ಭಾಗಗಳನ್ನು ಪೂರೈಸಿಕೊಳ್ಳುವುದೇ ಜೀವನದ ಉದ್ದೇಶಗಳಾಗಿ, ಆ ಉದ್ದೇಶಗಳಿಗಾಗಿಯೇ ಸಮಯವನ್ನು ಮೀಸಲಿಡಬೇಕಾಗಿರುವುದರಿಂದ ಜೀವನದ ಸಮಯ ತುಂಬಾ ಕಡಿಮೆಯಾಗಿದೆ ಎಂದು ಭಾಸವಾಗುತ್ತದೆ.
ನಾವುಗಳು ಅದರಲ್ಲಿಯೇ ಕಳೆದು ಹೋಗುತ್ತಿದ್ದೇವೆ.

ಬದುಕನ್ನು ಒಂದು ನದಿಗೆ ಹೋಲಿಸಬಹುದು. ನದಿ ಹುಟ್ಟಿ ಸಮುದ್ರ ಸೇರುವವರೆಗೆ ದೀರ್ಘವಾಗಿ ಮತ್ತು ನಿರಂತರವಾಗಿ ಚಲಿಸುತ್ತಿರುತ್ತದೆ. ಆ ಹಾದಿಯಲ್ಲಿ ಕೆಲವೊಮ್ಮೆ ವಿಶಾಲವಾಗಿ, ಮತ್ತೆ ಕೆಲವು ಸಲ ಇಕ್ಕಟ್ಟಾದ ಜಾಗದಲ್ಲಿ, ಹಲವೊಮ್ಮೆ ರಭಸದಿಂದ, ಮತ್ತೆ ಪ್ರಶಾಂತತೆಯಿಂದ ಅನೇಕ ಎಡರು ತೊಡರುಗಳನ್ನು ಎದುರಿಸಿ ಸಾಗುತ್ತದೆ.

ಕೆಲವೊಮ್ಮೆ ಮನುಷ್ಯ ಪ್ರಾಣಿ ತನ್ನ ಸ್ವಾರ್ಥಕ್ಕಾಗಿ ಅಣೆಕಟ್ಟು ಕಟ್ಟಿ ಅದನ್ನು ಬಂಧಿಸುತ್ತಾನೆ. ಆಗಲೂ ನದಿ ಸಮುದ್ರ ಸೇರುವ ತವಕದಿಂದ ತನ್ನ ಸಮಯಕ್ಕೆ ಕಾಯುತ್ತದೆ ಅದು ಎಷ್ಟೇ ದೀರ್ಘ ಸಮಯವಾದರೂ…….

ಆದರೂ,
ಬದುಕನ್ನು ಹೀಗೆ ಎಂದು ನಿರ್ಧರಿಸುವುದು ಕಷ್ಟ. ಆದರೆ, ಜೀವನವನ್ನು ಆಗಾಗ ಪುನರ್ ವಿಮರ್ಶೆಗೆ ಒಳಪಡಿಸಿ ನೆಮ್ಮದಿಯ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಸದಾ ಪ್ರಯತ್ನಿಸುತ್ತಿರಬೇಕು.

ಏಕೆಂದರೆ ಬದುಕೊಂದು ಸುದೀರ್ಘ ಪಯಣ ಅನಂತದೆಡೆಗೆ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

5 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

7 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

7 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

14 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

14 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

17 hours ago