Categories: Home

ಜೀವನದ ಪಯಣ ಅತ್ಯಂತ ದೀರ್ಘವೇ ….? ಅಥವಾ ಕಡಿಮೆ ಸಮಯದ್ದೇ..?

ಬದುಕೊಂದು ದೂರದ ಪಯಣ. ತುಂಬಾ ತುಂಬಾ ದೂರ ನಿರಂತರವಾಗಿ ನಡೆಯಬೇಕು ಮರೆಯಾಗುವ ಮುನ್ನ………………

Life is Short ,
Make it Sweet…………..

ಈ ಎರಡು ವಿಭಿನ್ನ ಹೇಳಿಕೆಗಳನ್ನು ಗಮನಿಸಿ.

ಒಂದು ಬದುಕನ್ನು ದೀರ್ಘ ಅವಧಿಯ ಹೋರಾಟ ಎಂದು ಹೇಳಿದರೆ ಮತ್ತೊಂದು ಬದುಕು ತುಂಬಾ ಚಿಕ್ಕ ಸಮಯದ್ದು ಎಂಬ ಅರ್ಥ ಕೊಡುತ್ತದೆ.

ಹಾಗಾದರೆ ಬದುಕು ದೀರ್ಘವೇ ಅಥವಾ ಕಡಿಮೆ ಸಮಯವೇ ?………

ಭಾರತದ ಈಗಿನ ಸರಾಸರಿ ಆಯಸ್ಸು ಅಧಿಕೃತವಾಗಿ ಸುಮಾರು 63/65 ರ ಆಸುಪಾಸಿನಲ್ಲಿ ಇದೆ. ಅದನ್ನು ಸುಮಾರು 75 ಎಂದು ಭಾವಿಸಿಕೊಳ್ಳೋಣ.

75 ವಯಸ್ಸು ಕೆಲವರಿಗೆ ದೀರ್ಘ ಮತ್ತೆ ಕೆಲವರಿಗೆ ಕಡಿಮೆ ಅದು ಅವರವರ ಜೀವನ ಶೈಲಿ ಮತ್ತು ಮನೋಭಾವ ಅವಲಂಬಿಸಿರುತ್ತದೆ ಎಂದು ಲೋಕಾಭಿರಾಮವಾಗಿ ಹೇಳಬಹುದು.

ಆದರೆ ವಾಸ್ತವ ಏನು. ನಾವು ಬದುಕನ್ನು ದೀರ್ಘವೆಂದು ಪರಿಗಣಿಸಬೇಕೆ ಅಥವಾ ಸಣ್ಣ ಅವಧಿ ಎಂದು ಭಾವಿಸಬೇಕೆ?

ನನ್ನ ದೃಷ್ಟಿಯಲ್ಲಿ ಬದುಕೊಂದು ದೀರ್ಘ ಪಯಣ. ಜೀವನದಲ್ಲಿ ನಮ್ಮ ಬಳಿ ತುಂಬಾ ತುಂಬಾ ಸಮಯವಿದೆ. ಹುಟ್ಟಿನಿಂದ ಸಾಯುವವರೆಗೆ ಸುಮಾರು ಮುಕ್ಕಾಲು ಶತಮಾನದಷ್ಟು ದೂರದ ಹಾದಿ ಇದೆ.

ನಮ್ಮ ಆಸೆ ಆಕಾಂಕ್ಷೆಗಳು, ಕನಸುಗಳು, ಸವಾಲುಗಳು, ಪ್ರಯೋಗಗಳು, ಸೋಲಿನ ಕುಸಿತ, ಗೆಲುವಿನ ಮೆಟ್ಟಿಲು…….. ಎಲ್ಲವನ್ನೂ ನಿಭಾಯಿಸಲು ಸಾಕಷ್ಟು ಸಮಯವಿರುತ್ತದೆ. ಹಣದ ಕೊರತೆ, ಪ್ರೇಮ ವೈಫಲ್ಯ, ಕೌಟುಂಬಿಕ ವಿಭಜನೆ, ನೈಸರ್ಗಿಕ ವಿಕೋಪ, ವ್ಯವಸ್ಥೆಯ ಶೋಷಣೆ, ನಿರಂತರ ಸೋಲು ಎಲ್ಲವನ್ನು ಎದುರಿಸಲು, ಅನುಭವಿಸಲು ಮತ್ತೆ ಕಟ್ಟಲು ನಮ್ಮ ಬಳಿ ಕಾಲವಿದೆ.

ಇದಕ್ಕೆ ಪ್ರತಿಯಾಗಿ,
ಜೀವನದ ಕಾಲ ತುಂಬಾ ಕಡಿಮೆ ಇದೆ ಎಂದು ಭಾವಿಸಿದಲ್ಲಿ ನಮ್ಮ ಮೇಲೆ ಒತ್ತಡ ಹೆಚ್ಚಾಗುತ್ತದೆ. ಇರುವ ಸ್ವಲ್ಪ ಸಮಯದಲ್ಲಿ ಎಲ್ಲವನ್ನೂ ಮಾಡಲು ಹೋಗಿ ಬದುಕಿನ ಸ್ವಾರಸ್ಯವನ್ನೇ ಕಳೆದುಕೊಳ್ಳುತ್ತೇವೆ.

ಬೆಳಗಿನಿಂದ ರಾತ್ರಿಯವರೆಗೆ ವರ್ಷದ 365 ದಿನವೂ ಕೆಲಸದ ಒತ್ತಡಕ್ಕೆ ಸಿಲುಕಿ ನೆಮ್ಮದಿಗಾಗಿ ಹುಡುಕಾಡುವ ಸಾಧ್ಯತೆಯೇ ಹೆಚ್ಚು. ಮಧ್ಯಮ ವರ್ಗದವರಂತೂ ಸ್ವಂತ ಮನೆ, ಮಕ್ಕಳ ಶಿಕ್ಷಣ ಮತ್ತು ಮದುವೆ, ಕಾರು ಅದು ಇದು ಎಂದು ಇಡೀ ಜೀವನ ಅದಕ್ಕಾಗಿಯೇ ಮುಡುಪಿಡುತ್ತಾರೆ. ಭೌತಿಕ ವಸ್ತುಗಳ ಹುಡುಕಾಟವೇ ಜೀವನ ಎಂಬಂತಾಗಿದೆ.

ಅದರಲ್ಲೂ ಈ ಆಧುನಿಕ ವೇಗದ ಯುಗದಲ್ಲಿ ಸಮಯ ಸರಿಯುವುದೇ ತಿಳಿಯುವುದಿಲ್ಲ. ದಿನನಿತ್ಯದ ಒತ್ತಡದಲ್ಲಿ ತಿಂಗಳು – ವರ್ಷಗಳು ಬೇಗ ಬೇಗ ಸಾಗಿದಂತೆನಿಸುತ್ತದೆ.

ಅವಶ್ಯಕತೆಗಳು ಹೆಚ್ಚಾದಂತೆ,
ಆ ಅವಶ್ಯಕತೆಗಳೇ ಅನಿವಾರ್ಯಗಳಾಗಿ,
ಆ ಅನಿವಾರ್ಯಗಳೇ ಬದುಕಿನ ಭಾಗಗಳಾಗಿ,
ಆ ಭಾಗಗಳನ್ನು ಪೂರೈಸಿಕೊಳ್ಳುವುದೇ ಜೀವನದ ಉದ್ದೇಶಗಳಾಗಿ, ಆ ಉದ್ದೇಶಗಳಿಗಾಗಿಯೇ ಸಮಯವನ್ನು ಮೀಸಲಿಡಬೇಕಾಗಿರುವುದರಿಂದ ಜೀವನದ ಸಮಯ ತುಂಬಾ ಕಡಿಮೆಯಾಗಿದೆ ಎಂದು ಭಾಸವಾಗುತ್ತದೆ.
ನಾವುಗಳು ಅದರಲ್ಲಿಯೇ ಕಳೆದು ಹೋಗುತ್ತಿದ್ದೇವೆ.

ಬದುಕನ್ನು ಒಂದು ನದಿಗೆ ಹೋಲಿಸಬಹುದು. ನದಿ ಹುಟ್ಟಿ ಸಮುದ್ರ ಸೇರುವವರೆಗೆ ದೀರ್ಘವಾಗಿ ಮತ್ತು ನಿರಂತರವಾಗಿ ಚಲಿಸುತ್ತಿರುತ್ತದೆ. ಆ ಹಾದಿಯಲ್ಲಿ ಕೆಲವೊಮ್ಮೆ ವಿಶಾಲವಾಗಿ, ಮತ್ತೆ ಕೆಲವು ಸಲ ಇಕ್ಕಟ್ಟಾದ ಜಾಗದಲ್ಲಿ, ಹಲವೊಮ್ಮೆ ರಭಸದಿಂದ, ಮತ್ತೆ ಪ್ರಶಾಂತತೆಯಿಂದ ಅನೇಕ ಎಡರು ತೊಡರುಗಳನ್ನು ಎದುರಿಸಿ ಸಾಗುತ್ತದೆ.

ಕೆಲವೊಮ್ಮೆ ಮನುಷ್ಯ ಪ್ರಾಣಿ ತನ್ನ ಸ್ವಾರ್ಥಕ್ಕಾಗಿ ಅಣೆಕಟ್ಟು ಕಟ್ಟಿ ಅದನ್ನು ಬಂಧಿಸುತ್ತಾನೆ. ಆಗಲೂ ನದಿ ಸಮುದ್ರ ಸೇರುವ ತವಕದಿಂದ ತನ್ನ ಸಮಯಕ್ಕೆ ಕಾಯುತ್ತದೆ ಅದು ಎಷ್ಟೇ ದೀರ್ಘ ಸಮಯವಾದರೂ…….

ಆದರೂ,
ಬದುಕನ್ನು ಹೀಗೆ ಎಂದು ನಿರ್ಧರಿಸುವುದು ಕಷ್ಟ. ಆದರೆ, ಜೀವನವನ್ನು ಆಗಾಗ ಪುನರ್ ವಿಮರ್ಶೆಗೆ ಒಳಪಡಿಸಿ ನೆಮ್ಮದಿಯ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಸದಾ ಪ್ರಯತ್ನಿಸುತ್ತಿರಬೇಕು.

ಏಕೆಂದರೆ ಬದುಕೊಂದು ಸುದೀರ್ಘ ಪಯಣ ಅನಂತದೆಡೆಗೆ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

30 minutes ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

1 hour ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

5 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

6 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

12 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

13 hours ago