Categories: ಲೇಖನ

ಜೀವನಮಟ್ಟ ಸುಧಾರಣೆಯ ಆಯ್ಕೆಗಳು……..

ನಾವು ನಮ್ಮ ಜೀವನದ ಸಾಕಷ್ಟು ಸಮಯವನ್ನು ಯಾವ ಸ್ಥಳದಲ್ಲಿ, ಯಾವ ಪ್ರದೇಶದಲ್ಲಿ, ಯಾವ ವ್ಯಕ್ತಿಗಳೊಂದಿಗೆ, ಯಾವ ಭಾವದೊಂದಿಗೆ ಹೆಚ್ಚು ಹೆಚ್ಚು ಕಳೆಯುತ್ತೇವೆಯೋ ಅದರ ಪ್ರಭಾವ ನಮ್ಮ ಬದುಕಿನ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಇದು ಬಹುತೇಕ ಅನಿವಾರ್ಯವಾಗಿ ಸಹಜವಾಗಿಯೇ, ಅನುಕೂಲಕ್ಕೆ ತಕ್ಕಂತೆ ನಡೆಯುತ್ತದೆ. ಇವುಗಳ ಮೇಲೆ ನಿಯಂತ್ರಣ ಸಾಧಿಸಬೇಕಿರುವುದು ನಮ್ಮ ಆಯ್ಕೆ ಮತ್ತು ವಿವೇಚನೆಗೆ ಬಿಟ್ಟಿದ್ದು. ಕೆಲವು ಉದಾಹರಣೆಗಳೆಂದರೆ………

ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ,
ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ‌.

ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳಿಸುತ್ತದೆ.
ಗ್ರಂಥಾಲಯದಲ್ಲಿ ಸವೆಸುವ ಸಮಯ ಯಾವಾಗಲೂ ಜ್ಞಾನವನ್ನು ವೃದ್ಧಿಸುತ್ತದೆ.

ಸಾವು, ಸ್ಮಶಾನ, ತಿಥಿಗಳಲ್ಲಿ ಭಾಗವಹಿಸಿದಾಗ ಹೃದಯ ಭಾರವಾಗುತ್ತದೆ. ಮದುವೆ, ನಾಮಕರಣ, ಗೃಹ ಪ್ರವೇಶ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.

ಸಿನಿಮಾ, ನಾಟಕ, ಸರ್ಕಸ್ ಮುಂತಾದ ಸ್ಥಳಗಳು ಭಾವನೆಗಳನ್ನು ಕೆರಳಿಸುತ್ತವೆ,
ದೇವ ಮಂದಿರ, ಚರ್ಚು, ಮಸೀದಿ, ಮಠ ಮಾನ್ಯಗಳು ಮುಂತಾದ ಪ್ರಾರ್ಥನಾ ಸ್ಥಳಗಳು ಭಾವನೆಗಳನ್ನು ನಿಯಂತ್ರಿಸುತ್ತವೆ.

ಐತಿಹಾಸಿಕ ಮತ್ತು ಪೌರಾಣಿಕ ಘಟನೆಗಳು ಕುತೂಹಲ ಮೂಡಿಸುತ್ತದೆ, ಪ್ರಸ್ತುತ ರಾಜಕೀಯ ಮತ್ತು ಹಿಂಸಾತ್ಮಕ ಘಟನೆಗಳು ಅಸಹ್ಯ ಮತ್ತು ಬೇಸರ ಮೂಡಿಸುತ್ತದೆ.

ಪ್ರಕೃತಿಯೊಂದಿಗಿನ ಒಡನಾಟ ಜೀವನೋತ್ಸಾಹ ಹೆಚ್ಚಿಸುತ್ತದೆ. ಆಧುನಿಕ ತಂತ್ರಜ್ಞಾನದ ಒಡನಾಟ ಜೀವನದ ಬಗ್ಗೆ ಜಿಗುಪ್ಸೆ ಹೆಚ್ಚಿಸುತ್ತದೆ.

ಪ್ರಶ್ನಿಸುವ ಮನೋಭಾವ ಮನಸ್ಸನ್ನು ವಿಶಾಲಗೊಳಿಸಿ ಸದಾ ಜಾಗೃತವಾಗಿಟ್ಟಿರುತ್ತದೆ. ಪ್ರಶ್ನಿಸದೆ ಒಪ್ಪಿಕೊಳ್ಳುವ ಮನೋಭಾವ ಮನಸ್ಸನ್ನು ಸಂಕುಚಿತಗೊಳಿಸಿ ಅರಿವಿನ ಮಟ್ಟವನ್ನು ಕುಗ್ಗಿಸುತ್ತದೆ.

ದ್ವೇಷ, ಅಸೂಯೆ, ಅಹಂಕಾರ, ಪ್ರತಿಕಾರಗಳು, ಸಂಬಂಧಗಳನ್ನು ನಾಶಪಡಿಸುತ್ತದೆ.
ಪ್ರೀತಿ, ಸಹಕಾರ, ತ್ಯಾಗ, ತಾಳ್ಮೆ , ಕರುಣೆ, ಕ್ಷಮೆ ಸಂಬಂಧಗಳನ್ನು ಬೆಳೆಯುತ್ತವೆ.

ಈ ಎಲ್ಲಾ ಆಯ್ಕೆಗಳು ಬಹುತೇಕ ನಮ್ಮ ನಿಯಂತ್ರಣಕ್ಕೆ ಒಳಪಟ್ಟಿರುತ್ತದೆ. ಅನಿವಾರ್ಯತೆ ಹೊರತುಪಡಿಸಿ
ನಾವು ಯಾವುದನ್ನು ಎಷ್ಟು ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳುತ್ತೇವೆ ಎಂಬುದರ ಮೇಲೆ ಬದುಕಿನ ಘನತೆ ನಿರ್ಧರಿಸಲ್ಪಡುತ್ತದೆ. ಆದಷ್ಟು ಉತ್ತಮ ವಾತಾವರಣದಲ್ಲಿ ಜೀವಿಸಲು ಪ್ರಯತ್ನಿಸಿ……….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 hour ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

2 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

10 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

12 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

12 hours ago