Categories: ಲೇಖನ

ಜೀವನಮಟ್ಟ ಸುಧಾರಣೆಯ ಆಯ್ಕೆಗಳು……..

ನಾವು ನಮ್ಮ ಜೀವನದ ಸಾಕಷ್ಟು ಸಮಯವನ್ನು ಯಾವ ಸ್ಥಳದಲ್ಲಿ, ಯಾವ ಪ್ರದೇಶದಲ್ಲಿ, ಯಾವ ವ್ಯಕ್ತಿಗಳೊಂದಿಗೆ, ಯಾವ ಭಾವದೊಂದಿಗೆ ಹೆಚ್ಚು ಹೆಚ್ಚು ಕಳೆಯುತ್ತೇವೆಯೋ ಅದರ ಪ್ರಭಾವ ನಮ್ಮ ಬದುಕಿನ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಇದು ಬಹುತೇಕ ಅನಿವಾರ್ಯವಾಗಿ ಸಹಜವಾಗಿಯೇ, ಅನುಕೂಲಕ್ಕೆ ತಕ್ಕಂತೆ ನಡೆಯುತ್ತದೆ. ಇವುಗಳ ಮೇಲೆ ನಿಯಂತ್ರಣ ಸಾಧಿಸಬೇಕಿರುವುದು ನಮ್ಮ ಆಯ್ಕೆ ಮತ್ತು ವಿವೇಚನೆಗೆ ಬಿಟ್ಟಿದ್ದು. ಕೆಲವು ಉದಾಹರಣೆಗಳೆಂದರೆ………

ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ,
ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ‌.

ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳಿಸುತ್ತದೆ.
ಗ್ರಂಥಾಲಯದಲ್ಲಿ ಸವೆಸುವ ಸಮಯ ಯಾವಾಗಲೂ ಜ್ಞಾನವನ್ನು ವೃದ್ಧಿಸುತ್ತದೆ.

ಸಾವು, ಸ್ಮಶಾನ, ತಿಥಿಗಳಲ್ಲಿ ಭಾಗವಹಿಸಿದಾಗ ಹೃದಯ ಭಾರವಾಗುತ್ತದೆ. ಮದುವೆ, ನಾಮಕರಣ, ಗೃಹ ಪ್ರವೇಶ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.

ಸಿನಿಮಾ, ನಾಟಕ, ಸರ್ಕಸ್ ಮುಂತಾದ ಸ್ಥಳಗಳು ಭಾವನೆಗಳನ್ನು ಕೆರಳಿಸುತ್ತವೆ,
ದೇವ ಮಂದಿರ, ಚರ್ಚು, ಮಸೀದಿ, ಮಠ ಮಾನ್ಯಗಳು ಮುಂತಾದ ಪ್ರಾರ್ಥನಾ ಸ್ಥಳಗಳು ಭಾವನೆಗಳನ್ನು ನಿಯಂತ್ರಿಸುತ್ತವೆ.

ಐತಿಹಾಸಿಕ ಮತ್ತು ಪೌರಾಣಿಕ ಘಟನೆಗಳು ಕುತೂಹಲ ಮೂಡಿಸುತ್ತದೆ, ಪ್ರಸ್ತುತ ರಾಜಕೀಯ ಮತ್ತು ಹಿಂಸಾತ್ಮಕ ಘಟನೆಗಳು ಅಸಹ್ಯ ಮತ್ತು ಬೇಸರ ಮೂಡಿಸುತ್ತದೆ.

ಪ್ರಕೃತಿಯೊಂದಿಗಿನ ಒಡನಾಟ ಜೀವನೋತ್ಸಾಹ ಹೆಚ್ಚಿಸುತ್ತದೆ. ಆಧುನಿಕ ತಂತ್ರಜ್ಞಾನದ ಒಡನಾಟ ಜೀವನದ ಬಗ್ಗೆ ಜಿಗುಪ್ಸೆ ಹೆಚ್ಚಿಸುತ್ತದೆ.

ಪ್ರಶ್ನಿಸುವ ಮನೋಭಾವ ಮನಸ್ಸನ್ನು ವಿಶಾಲಗೊಳಿಸಿ ಸದಾ ಜಾಗೃತವಾಗಿಟ್ಟಿರುತ್ತದೆ. ಪ್ರಶ್ನಿಸದೆ ಒಪ್ಪಿಕೊಳ್ಳುವ ಮನೋಭಾವ ಮನಸ್ಸನ್ನು ಸಂಕುಚಿತಗೊಳಿಸಿ ಅರಿವಿನ ಮಟ್ಟವನ್ನು ಕುಗ್ಗಿಸುತ್ತದೆ.

ದ್ವೇಷ, ಅಸೂಯೆ, ಅಹಂಕಾರ, ಪ್ರತಿಕಾರಗಳು, ಸಂಬಂಧಗಳನ್ನು ನಾಶಪಡಿಸುತ್ತದೆ.
ಪ್ರೀತಿ, ಸಹಕಾರ, ತ್ಯಾಗ, ತಾಳ್ಮೆ , ಕರುಣೆ, ಕ್ಷಮೆ ಸಂಬಂಧಗಳನ್ನು ಬೆಳೆಯುತ್ತವೆ.

ಈ ಎಲ್ಲಾ ಆಯ್ಕೆಗಳು ಬಹುತೇಕ ನಮ್ಮ ನಿಯಂತ್ರಣಕ್ಕೆ ಒಳಪಟ್ಟಿರುತ್ತದೆ. ಅನಿವಾರ್ಯತೆ ಹೊರತುಪಡಿಸಿ
ನಾವು ಯಾವುದನ್ನು ಎಷ್ಟು ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳುತ್ತೇವೆ ಎಂಬುದರ ಮೇಲೆ ಬದುಕಿನ ಘನತೆ ನಿರ್ಧರಿಸಲ್ಪಡುತ್ತದೆ. ಆದಷ್ಟು ಉತ್ತಮ ವಾತಾವರಣದಲ್ಲಿ ಜೀವಿಸಲು ಪ್ರಯತ್ನಿಸಿ……….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

4 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

4 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

6 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

6 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

13 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago