Categories: ಲೇಖನ

ಜೀವನಮಟ್ಟ ಸುಧಾರಣೆಯ ಆಯ್ಕೆಗಳು……..

ನಾವು ನಮ್ಮ ಜೀವನದ ಸಾಕಷ್ಟು ಸಮಯವನ್ನು ಯಾವ ಸ್ಥಳದಲ್ಲಿ, ಯಾವ ಪ್ರದೇಶದಲ್ಲಿ, ಯಾವ ವ್ಯಕ್ತಿಗಳೊಂದಿಗೆ, ಯಾವ ಭಾವದೊಂದಿಗೆ ಹೆಚ್ಚು ಹೆಚ್ಚು ಕಳೆಯುತ್ತೇವೆಯೋ ಅದರ ಪ್ರಭಾವ ನಮ್ಮ ಬದುಕಿನ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಇದು ಬಹುತೇಕ ಅನಿವಾರ್ಯವಾಗಿ ಸಹಜವಾಗಿಯೇ, ಅನುಕೂಲಕ್ಕೆ ತಕ್ಕಂತೆ ನಡೆಯುತ್ತದೆ. ಇವುಗಳ ಮೇಲೆ ನಿಯಂತ್ರಣ ಸಾಧಿಸಬೇಕಿರುವುದು ನಮ್ಮ ಆಯ್ಕೆ ಮತ್ತು ವಿವೇಚನೆಗೆ ಬಿಟ್ಟಿದ್ದು. ಕೆಲವು ಉದಾಹರಣೆಗಳೆಂದರೆ………

ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ,
ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ‌.

ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳಿಸುತ್ತದೆ.
ಗ್ರಂಥಾಲಯದಲ್ಲಿ ಸವೆಸುವ ಸಮಯ ಯಾವಾಗಲೂ ಜ್ಞಾನವನ್ನು ವೃದ್ಧಿಸುತ್ತದೆ.

ಸಾವು, ಸ್ಮಶಾನ, ತಿಥಿಗಳಲ್ಲಿ ಭಾಗವಹಿಸಿದಾಗ ಹೃದಯ ಭಾರವಾಗುತ್ತದೆ. ಮದುವೆ, ನಾಮಕರಣ, ಗೃಹ ಪ್ರವೇಶ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.

ಸಿನಿಮಾ, ನಾಟಕ, ಸರ್ಕಸ್ ಮುಂತಾದ ಸ್ಥಳಗಳು ಭಾವನೆಗಳನ್ನು ಕೆರಳಿಸುತ್ತವೆ,
ದೇವ ಮಂದಿರ, ಚರ್ಚು, ಮಸೀದಿ, ಮಠ ಮಾನ್ಯಗಳು ಮುಂತಾದ ಪ್ರಾರ್ಥನಾ ಸ್ಥಳಗಳು ಭಾವನೆಗಳನ್ನು ನಿಯಂತ್ರಿಸುತ್ತವೆ.

ಐತಿಹಾಸಿಕ ಮತ್ತು ಪೌರಾಣಿಕ ಘಟನೆಗಳು ಕುತೂಹಲ ಮೂಡಿಸುತ್ತದೆ, ಪ್ರಸ್ತುತ ರಾಜಕೀಯ ಮತ್ತು ಹಿಂಸಾತ್ಮಕ ಘಟನೆಗಳು ಅಸಹ್ಯ ಮತ್ತು ಬೇಸರ ಮೂಡಿಸುತ್ತದೆ.

ಪ್ರಕೃತಿಯೊಂದಿಗಿನ ಒಡನಾಟ ಜೀವನೋತ್ಸಾಹ ಹೆಚ್ಚಿಸುತ್ತದೆ. ಆಧುನಿಕ ತಂತ್ರಜ್ಞಾನದ ಒಡನಾಟ ಜೀವನದ ಬಗ್ಗೆ ಜಿಗುಪ್ಸೆ ಹೆಚ್ಚಿಸುತ್ತದೆ.

ಪ್ರಶ್ನಿಸುವ ಮನೋಭಾವ ಮನಸ್ಸನ್ನು ವಿಶಾಲಗೊಳಿಸಿ ಸದಾ ಜಾಗೃತವಾಗಿಟ್ಟಿರುತ್ತದೆ. ಪ್ರಶ್ನಿಸದೆ ಒಪ್ಪಿಕೊಳ್ಳುವ ಮನೋಭಾವ ಮನಸ್ಸನ್ನು ಸಂಕುಚಿತಗೊಳಿಸಿ ಅರಿವಿನ ಮಟ್ಟವನ್ನು ಕುಗ್ಗಿಸುತ್ತದೆ.

ದ್ವೇಷ, ಅಸೂಯೆ, ಅಹಂಕಾರ, ಪ್ರತಿಕಾರಗಳು, ಸಂಬಂಧಗಳನ್ನು ನಾಶಪಡಿಸುತ್ತದೆ.
ಪ್ರೀತಿ, ಸಹಕಾರ, ತ್ಯಾಗ, ತಾಳ್ಮೆ , ಕರುಣೆ, ಕ್ಷಮೆ ಸಂಬಂಧಗಳನ್ನು ಬೆಳೆಯುತ್ತವೆ.

ಈ ಎಲ್ಲಾ ಆಯ್ಕೆಗಳು ಬಹುತೇಕ ನಮ್ಮ ನಿಯಂತ್ರಣಕ್ಕೆ ಒಳಪಟ್ಟಿರುತ್ತದೆ. ಅನಿವಾರ್ಯತೆ ಹೊರತುಪಡಿಸಿ
ನಾವು ಯಾವುದನ್ನು ಎಷ್ಟು ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳುತ್ತೇವೆ ಎಂಬುದರ ಮೇಲೆ ಬದುಕಿನ ಘನತೆ ನಿರ್ಧರಿಸಲ್ಪಡುತ್ತದೆ. ಆದಷ್ಟು ಉತ್ತಮ ವಾತಾವರಣದಲ್ಲಿ ಜೀವಿಸಲು ಪ್ರಯತ್ನಿಸಿ……….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

7 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

17 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

19 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

24 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago