ಜೀವನಹಳ್ಳಿಯಲ್ಲಿ ಫುಟ್ಬಾಲ್ ಟರ್ಫ್‌ಗಾಗಿ ಸ್ಥಳೀಯರು, ಮಕ್ಕಳ ಆಗ್ರಹ

ಸರ್ವಜ್ಞ ನಗರದ ಜೀವನಹಳ್ಳಿಯಲ್ಲಿ ಫುಟ್ಬಾಲ್ ಟರ್ಫ್‌ ನಿರ್ಮಾಣಕ್ಕೆ ಕೇಳಿ ಬಂದಿರುವ ವಿರೋಧಕ್ಕೆ ಬಗ್ಗದೇ, ಕ್ರೀಡಾಂಗಣ ನಿರ್ಮಾಣ ಆಗಬೇಕೆಂದು ಆಗ್ರಹಿಸಿ ಸ್ಥಳೀಯರು ಕ್ರೀಡಾಂಗಣದ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.

ಇಂಧನ ಸಚಿವರು ಹಾಗೂ ಸರ್ವಜ್ಞ ನಗರದ ಶಾಸಕರಾದ ಕೆ.ಜೆ.ಜಾರ್ಜ್ ಅವರ ದೂರದೃಷ್ಟಿಯ ಫಲವಾಗಿ ಜೀವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ಮಾನದಂಡದಲ್ಲಿ ಫುಟ್ಬಾಲ್ ಟರ್ಫ್ ನಿರ್ಮಾಣವಾಗುತ್ತಿದೆ. ಆದರೆ, ಈ ಟರ್ಫ್ ಅನುಕೂಲಸ್ಥರಿಗೆ ಮಾತ್ರವೇ ಹೊರತು ಸಾಮಾನ್ಯರಿಗೆ ಈ ಕ್ರೀಡೆಯ ಸೌಲಭ್ಯವಿರುವುದಿಲ್ಲ. ಕ್ರೀಡಾಂಗಣ ಬಳಕೆಗೆ ಹಣ ಪೀಕಿಸುತ್ತಾರೆ ಎಂದು ಸ್ಥಳೀಯರೆಂದು ಬಿಂಬಿಸಿಕೊಂಡಿದ್ದವರು ಕೆಲ ದಿನಗಳ ಹಿಂದೆ ಅಪಪ್ರಚಾರ ಮಾಡಿದ್ದರು. ಇದನ್ನು ವಿರೋಧಿಸಿ, ಸರ್ವಜ್ಞನ ನಗರದ ಶಾಲಾ ಮಕ್ಕಳು ಸೇರಿದಂತೆ ಸ್ಥಳೀಯರು ಕ್ರೀಡಾಂಗಣದ ಬಳಿ ಪ್ರತಿಭಟನೆ ನಡೆಸಿದರು.

ಸಚಿವ ಕೆ.ಜೆ.ಜಾರ್ಜ್ ಅವರನ್ನು ಆದಷ್ಟು ಬೇಗ ಕ್ರೀಡಾಂಗಣವನ್ನು ಕಟ್ಟಿಕೊಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ‘ಜೀವನಹಳ್ಳಿಯಲ್ಲಿ ಇಂಥ ಗುಣಮಟ್ಟದ ಕ್ರೀಡಾಂಗಣ ಬರುತ್ತಿರುವುದನ್ನು ಸಹಿಸದ ವಿರೋಧಿಗಳು ಇಂಥ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇಂಥ ಟೊಳ್ಳು ಬೆದರಿಕೆಗೆ ಬಗ್ಗದೇ ನಮ್ಮ ಶಾಸಕರು ಕ್ರೀಡಾ ಸೌಕರ್ಯವನ್ನು ಒದಗಿಸಬೇಕು,’ ಎಂದು ಆಗ್ರಹಿಸಿದ್ದಾರೆ.

ಸರ್ವಜ್ಞ ನಗರ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ವೆಲ್ಫೇರ್ ಅಸೋಸಿಯೇಷನ್ ಹಾಗೂ ಸಚಿವ ಕೆ.ಜೆ.ಜಾರ್ಜ್ ಅವರ ವಿಶೇಷ ಮುತುವರ್ಜಿಯಿಂದ, ಸಿಎಸ್‌ಆರ್ ಅನುದಾನದಲ್ಲಿ ಜೀವನಹಳ್ಳಿಯಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಹಾಗೂ ಫುಟ್ಬಾಲ್ ಟರ್ಫ್ ನಿರ್ಮಿಸಲಾಗುತ್ತಿದೆ. ಕಾಂಪ್ಲೆಕ್ಸ್ ನೆಲ ಅಂತಸ್ಥಿನಲ್ಲಿ ಯೋಗ, ಜಿಮ್ನಾಷಿಯಮ್ ಹಾಗೂ ಮೊದಲ ಅಂತಸ್ಥಿನಲ್ಲಿ ಎರಡು ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ಫುಟ್ಬಾಲ್ ಟರ್ಫ್ ಸುತ್ತಲೂ ವೀಕ್ಷಕರ ಗ್ಯಾಲರಿ ಸಿದ್ದವಾಗುತ್ತಿದೆ. ಆಧುನಿಕ ಶೈಲಿಯಲ್ಲಿ ಎದ್ದುನಿಂತಿರುವ ಕ್ರೀಡಾ ಸಂಕೀರ್ಣ ಮಕ್ಕಳಿಗೆ ಕ್ರೀಡಾ ಸ್ಪೂರ್ತಿಯ ತಾಣವಾಗಲಿದೆ ಎಂದು ಸ್ಥಳೀಯರು ಹೇಳಿದರು.

*ಅಮಲಿನ ಅಡ್ಡವಾಗಿದ್ದ ಸ್ಥಳ*

ಕ್ರೀಡಾಂಗಣ ತಲೆ ಎತ್ತುವ ಮೊದಲು ಸಂಜೆ ನಂತರ ಸ್ಥಳೀಯರು ವಿಶೇಷವಾಗಿ ಮಹಿಳೆಯರು, ಮಕ್ಕಳು ಈ ಕಡೆ ಬರಲು ಭಯ ಪಡುತ್ತಿದ್ದರು. ಕುಡುಕರು, ಪುಂಡರ ಹಾವಳಿಗೆ ಹೆಣ್ಣು ಮಕ್ಕಳು, ಸಣ್ಣ ಮಕ್ಕಳು ತತ್ತರಿಸಿದ್ದರು. ಈ ಸಮಸ್ಯೆಗೆ ಸಚಿವ ಕೆ.ಜೆ.ಜಾರ್ಜ್ ನೀಡಿದ ಪರಿಹಾರವೇ ‘ಕ್ರೀಡಾ ಹಬ್’ ನಿರ್ಮಾಣ. ಸಚಿವರ ನಿರ್ಧಾರದಿಂದ ನಿಟ್ಟುಸಿರು ಬಿಟ್ಟಿದ್ದ ಸ್ಥಳೀಯರಿಗೆ ಕೆಲವರ ಅಪಪ್ರಚಾರ ಆತಂಕ ಸೃಷ್ಟಿಸಿದೆ. ಕನಸಿನ ಕ್ರೀಡಾಂಗಣದ ಯೋಜನೆ ಕೈಬಿಡಬಾರದು ಎಂದು ಆಗ್ರಹಿಸಿ ಜೀವನಹಳ್ಳಿ ಜನ ಇಂದು ಪ್ರತಿಭಟನೆ ನಡೆಸುವಂತಾಯಿತು.

“ಜೀವನಹಳ್ಳಿಯ ಈ ಕ್ರೀಡಾಂಗಣ ನಮ್ಮ ಮಕ್ಕಳಿಗೆ ಭವಿಷ್ಯದ ಕ್ರೀಡಾ ಸ್ಪೂರ್ತಿಯ ತಾಣವಾಗಬೇಕು. ಇಲ್ಲಿ ಕುಡುಕರು ಅಡ್ಡ ಮಾಡಿಕೊಂಡಿದ್ದರು. ಮಕ್ಕಳು- ಮಹಿಳೆಯರು ಈ ರಸ್ತೆಯಲ್ಲಿ ಓಡಾಡುವಂತಿರಲಿಲ್ಲ. ಸಚಿವರು ಕ್ರೀಡಾಂಗಣದ ಯೋಜನೆ ಘೋಷಿಸಿದಾಗ ನಮಗೆಲ್ಲ ಸಂತೋಷವಾಗಿತ್ತು. ಇಂಥ ಯೋಜನೆಯನ್ನು ವಿರೋಧಿಸುತ್ತಿರುವುದು ಸರಿಯಲ್ಲ. ಈ ಕ್ರೀಡಾಂಗಣದಿಂದ ಜೀವನಹಳ್ಳಿಯ ಮಕ್ಕಳಿಗೆ ಅನುಕೂಲವಾಗಲಿದೆ” ಎಂದು ಸ್ಥಳೀಯ ನಿವಾಸಿ ರಾಜಶೇಖರ್ ತಿಳಿಸಿದರು.

“ ಜೀವನಹಳ್ಳಿಯ ಮಹಿಳೆಯರಿಗೆ ಈ ಮೈದಾನ ಬಳಿ ಸುಳಿಯಲು ಭಯವಾಗುತ್ತಿತ್ತು. ನಮ್ಮ ನಾಯಕರಾದ ಕೆ.ಜೆ.ಜಾರ್ಜ್ ಅವರ ಸಮಯೋಚಿತ ನಿರ್ಧಾರದಿಂದ ಈ ಸ್ಥಳ ಈಗ ಕ್ರೀಡಾಂಗಣವಾಗುತ್ತಿದೆ. ಬೆಳಗ್ಗೆ, ಸಂಜೆ ವಾಕಿಂಗ್ ಮಾಡಲು ಅನುಕೂಲವಾಗಲಿದೆ. ಅಪಪ್ರಚಾರಕ್ಕೆ ಕಿವಿಗೊಡದೇ, ಆದಷ್ಟು ಬೇಗ ಕ್ರೀಡಾಂಗಣಣ ಸಿದ್ದಪಡಿಸಬೇಕು ಎಂದು ಮನವಿ ಮಾಡುತ್ತೇವೆ” ಎಂದು ಜೀವನಹಳ್ಳಿ ನಿವಾಸಿ ಅಶ್ವಿನಿ ದೇವಿ ಹೇಳಿದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

6 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

7 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago