“ಜನತೆಗೆ ಗೌರವಯುತವಾಗಿ ಜೀವನ ನಡೆಸಲು ಮೂಲಸೌಕರ್ಯ ಕಲ್ಪಿಸುವುದೇ ಜನಪ್ರತಿನಿಧಿಗಳ ಕರ್ತವ್ಯ” ಎಂದು ಸಚಿವ ಕೆ.ಜೆ.ಜಾರ್ಜ್ ಅನಿಸಿಕೆ ವ್ಯಕ್ತಪಡಿಸಿದರು.
ಇಂಧನ ಸಚಿವರು ಹಾಗೂ ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದ ಶಾಸಕರೂ ಆಗಿರುವ ಕೆ.ಜೆ.ಜಾರ್ಜ್ ಮಂಗಳವಾರ ಜೀವನಹಳ್ಳಿ ವ್ಯಾಫ್ತಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿದರು. ಕೈಗೊಂಡಿರುವ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ ವೇಗವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ ನೀರು, ವಿದ್ಯುತ್, ರಸ್ತೆ, ವಸತಿ ಯೋಜನೆಗಳು ಮತ್ತು ಸಂಚಾರ ದಟ್ಟಣೆ ನಿರ್ವಹಣೆ ಸಂಬಂಧ ಚರ್ಚೆ ನಡೆಸುತ್ತ ಸ್ಥಳೀಯ ಜನರನ್ನು ಮಾತನಾಡಿಸುತ್ತಾ ಸಚಿವ ಜಾರ್ಜ್ ಅಧಿಕಾರಿಗಳಿಗೆ ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸಗಳನ್ನು ಪಾದಯಾತ್ರೆ ಮೂಲಕ ಮನವರಿಕೆ ಮಾಡಿಕೊಟ್ಟರು.
*ವಸತಿ ಯೋಜನೆಗಳ ಪರಿಶೀಲನೆ*
ಜೀವನಹಳ್ಳಿ ವ್ಯಾಪ್ತಿಯಲ್ಲಿ ಅಗಸ ವೃತ್ತಯಲ್ಲಿ ತೊಡಗಿರುವ ಜನರಿಗೆ ಸುಸಜ್ಜಿತವಾದ ವಸತಿ ಸಂಕೀರ್ಣ ನಿರ್ಮಿಸಿದ್ದು, ಅಗತ್ಯ ಸೌಲಭ್ಯಗಳನ್ನು ತುರ್ತಾಗಿ ಸಿದ್ದಪಡಿಸುವಂತೆ ಸೂಚಿಸಿದರು. ಇದೇ ವೇಳೆ ಮುದ್ದಪ್ಪ ಗಾರ್ಡನ್ , ಚೆಟ್ಟಪ್ಪ ಗಾರ್ಡನ್ ಮತ್ತು ಗ್ಯಾಂಗ್ಮನ್ ಕ್ವಾಟ್ರರ್ಸ್ನಲ್ಲಿ ನಿರ್ಮಿಸಿರುವ ಮನೆಗಳನ್ನು ಪರಿಶೀಲನೆ ನಡೆಸಿದರು. ಕೊಳಗೇರಿ ಅಭಿವೃದ್ದಿ ಮಂಡಳಿ ವತಿಯಿಂದ ಕೈಗೊಂಡಿರುವ ಬಹುಮಹಡಿ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಫೋನ್ ಮೂಲಕ ತಿಳಿಸಿದರು. ಇನ್ನಷ್ಟು ಮನೆಗಳನ್ನು ನಿರ್ಮಿಸಿಕೊಡುವಂತೆ ಕೇಳಿಕೊಂಡ ಮಹಿಳೆಯರಿಗೆ ಸಚಿವರು ಹೊಸದಾಗಿ ಮನೆಗಳನ್ನು ಕಟ್ಟಲಿದ್ದು ಆದ್ಯತೆಯ ಮೇರೆಗೆ ನೀಡಲಾಗುವುದು ಎಂದು ಭರವಸೆ ನೀಡಿದರು.
*ನಿವಾಸಿಗಳ ಸಂಘಟನೆ ಜೊತೆ ಚರ್ಚೆ*
ಕೊಕ್ ಟೌನ್ ನಿವಾಸಿಗಳ ಸಂಘದವರ ಜತೆಗೆ ಸಚಿವ ಜಾರ್ಜ್ ಹೈಸ್ಟ್ರೀಟ್ ಉದ್ಯಾನದಲ್ಲಿ ಸಭೆ ನಡೆಸಿದ ಸಚಿವರು, ನಿವಾಸಿಗಳ ಬೇಡಿಕೆಗಳನ್ನು ಪಡೆದು ಹಳೆಯ ಮತ್ತು ಕೆಟ್ಟಿರುವ ಟ್ರಾನ್ಸ್ಫಾರ್ಮರ್ಗಳನ್ನುಮಾರ್ಚ್ ಅಂತ್ಯದೊಳಗೆ ಬದಲಾಯಿಸಲು ಸೂಚನೆ ನೀಡಿದರು. ಎಂಎಲ್ಎ ಅನುದಾನದಲ್ಲಿ ಸಿಸಿಟಿವಿಗಳನ್ನು ಅಳವಡಿಸಿ ಹತ್ತಿರದ ಪೊಲೀಸ್ ಠಾಣೆಯಿಂದ ನಿಗಾವಹಿಸುವಂತೆ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೀವನಹಳ್ಳಿಯಲ್ಲಿ ಕೇಳಚಂದ್ರ ಫೌಂಡೇಷನ್ ವತಿಯಿಂದ ನಡೆಸಲಾಗುತ್ತಿರುವ ಕೌಶಲ್ಯ ಕೇಂದ್ರಕ್ಕೆ ತೆರಳಿದ ಸಚಿವ ಜಾರ್ಜ್, ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಮಾತನಾಡಿಸಿದರು. ಕೌಶಲ್ಯ ಕೇಂದ್ರಕ್ಕೆ ಅಗತ್ಯವಿರುವ ನೆರವನ್ನು ಒದಗಿಸುವುದಾಗಿ ಕೇಂದ್ರದ ಮುಖ್ಯಸ್ಥರಿಗೆ ಭರವಸೆ ನೀಡಿದರು.
ಸತ್ಯನಗರದಲ್ಲಿ ಎಂಬೆಸ್ಸಿ ಗಾಲ್ಫ್ ಲಿಂಕ್ಸ್ ಬ್ಯುಸಿನೆಸ್ ಪಾರ್ಕ್ನ ಆರ್ಥಿಕ ಬೆಂಬಲದೊಂದಿಗೆ ನಡೆಸಲಾಗುತ್ತಿರುವ ಅಂಗನವಾಡಿ ಹಾಗೂ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಸಚಿವ ಕೆ.ಜೆ ಜಾರ್ಜ್ ಮಕ್ಕಳೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.
*ರಂಜಾನ್ ಹಬ್ಬಕ್ಕೆ ಶುಭಕೋರಿ, ಆಹಾರ ಕಿಟ್ ವಿತರಣೆ*
ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕಮ್ಮನಹಳ್ಳಿಯಲ್ಲಿ ರಂಜಾನ್ ಆಚರಣೆಯಲ್ಲಿರುವ ಮುಸ್ಲೀಮರ ಜತೆಗೆ ಮಧ್ಯಾಹ್ನದ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಮುಖಂಡರಾದ ಬಾಬಾ ಅಲಿಖಾನ್ ನೇತೃತ್ವದಲ್ಲಿ ಆಯೋಜಿಸಿದ್ದ ಆಹಾರ ಕಿಟ್ ವಿತರಣೆಯಲ್ಲಿ ಭಾಗವಹಿಸಿ, ನೆರೆದಿದ್ದ ನೂರಾರು ಮಹಿಳೆಯರಿಗೆ ಕಿಟ್ಗಳನ್ನು ವಿತರಿಸಿದರು.
ಸಚಿವರೊಂದಿಗೆ ಕ್ಷೇತ್ರದ ಮುಖಂಡರಾದ ರಘು ದೇವರಾಜ್, ಚಕ್ರವರ್ತಿ, ಆಶಾ, ರೂಪ ಮತ್ತು ಸಚಿವರ ವಿಶೇಷಾಧಿಕಾರಿಗಳು, ಜಿಬಿಎ, ಬೆಂಗಳೂರು ಜಲ ಮಂಡಳಿ, ಬೆಸ್ಕಾಂ ಹಾಗೂ ಪೊಲೀಸ್ ಅಧಿಕಾರಿಗಳು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.
ಪಾದಚಾರಿಗೆ ಬೈಕ್ ಡಿಕ್ಕಿಯಾಗಿರುವ ಘಟನೆ ಇಂದು ದೊಡ್ಡಬಳ್ಳಾಪುರದ ಶ್ಯಾಕಲದೇವನಪುರ ಬಳಿ ನಡೆದಿದೆ. ಪಾದಚಾರಿಗೆ ಬೈಕ್ ಡಿಕ್ಕಿ ರಭಸಕ್ಕೆ ಪಾದಚಾರಿಗೆ ಸಣ್ಣಪುಟ್ಟ…
ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಾದರಿ ಕ್ಷೇತ್ರವಾಗಿ ಹೊರಹೊಮ್ಮಲಿದೆ ಎಂದು…
ಪ್ರಸ್ತುತ ರಾಜ್ಯದಲ್ಲಿ 2 ಲಕ್ಷ 6 ಸಾವಿರ ಪೋಡಿ ಪ್ರಕರಣಗಳ ದುರಸ್ತಿ ಮಾಡಲಾಗಿದ್ದು ಮುಂದಿನ ಎರಡು ವರ್ಷಗಳಲ್ಲಿ 5 ಲಕ್ಷ…
ದೇಶದ ಶ್ರೀಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳು, ಔಷಧ, ಶಸ್ತ್ರಚಿಕಿತ್ಸಾ ಉಪಕರಣಗಳು ಲಭ್ಯವಾಗಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ಭಾರತೀಯ…
ಬೆಂಗಳೂರು: ರಾಜಧಾನಿಯ ಅಬ್ಬಿಗೆರೆಯಲ್ಲಿ ಸಣ್ಣಪುಟ್ಟ ಕೌಟುಂಬಿಕ ಕಲಹವೊಂದು ದೊಡ್ಡ ದುರಂತಕ್ಕೆ ಕಾರಣವಾಗಿದೆ. ಅಡುಗೆ ಮಾಡುವ ವಿಚಾರಕ್ಕೆ ಅತ್ತೆಯೊಂದಿಗೆ ಉಂಟಾದ ಮನಸ್ತಾಪದಿಂದ…
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ 2025-26ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ…