ಜೀವನಹಳ್ಳಿಯಲ್ಲಿ ಸಚಿವ ಕೆ.ಜೆ.ಜಾರ್ಜ್ ಪಾದಯಾತ್ರೆ – ಕುಡಿಯುವ ನೀರು, ವಸತಿ ಯೋಜನೆಗಳ ಪರಿಶೀಲನೆ – ರಂಜಾನ್ ಶುಭಾಶಯದ ಜತೆಗೆ ಆಹಾರ ಕಿಟ್ ವಿತರಣೆ

“ಜನತೆಗೆ ಗೌರವಯುತವಾಗಿ ಜೀವನ ನಡೆಸಲು ಮೂಲಸೌಕರ್ಯ ಕಲ್ಪಿಸುವುದೇ ಜನಪ್ರತಿನಿಧಿಗಳ ಕರ್ತವ್ಯ” ಎಂದು ಸಚಿವ ಕೆ.ಜೆ.ಜಾರ್ಜ್ ಅನಿಸಿಕೆ ವ್ಯಕ್ತಪಡಿಸಿದರು.

ಇಂಧನ ಸಚಿವರು ಹಾಗೂ ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದ ಶಾಸಕರೂ ಆಗಿರುವ ಕೆ.ಜೆ.ಜಾರ್ಜ್ ಮಂಗಳವಾರ ಜೀವನಹಳ್ಳಿ ವ್ಯಾಫ್ತಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿದರು. ಕೈಗೊಂಡಿರುವ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ ವೇಗವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ ನೀರು, ವಿದ್ಯುತ್, ರಸ್ತೆ, ವಸತಿ ಯೋಜನೆಗಳು ಮತ್ತು ಸಂಚಾರ ದಟ್ಟಣೆ ನಿರ್ವಹಣೆ ಸಂಬಂಧ ಚರ್ಚೆ ನಡೆಸುತ್ತ ಸ್ಥಳೀಯ ಜನರನ್ನು ಮಾತನಾಡಿಸುತ್ತಾ ಸಚಿವ ಜಾರ್ಜ್ ಅಧಿಕಾರಿಗಳಿಗೆ ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸಗಳನ್ನು ಪಾದಯಾತ್ರೆ ಮೂಲಕ ಮನವರಿಕೆ ಮಾಡಿಕೊಟ್ಟರು.

*ವಸತಿ ಯೋಜನೆಗಳ ಪರಿಶೀಲನೆ*

ಜೀವನಹಳ್ಳಿ ವ್ಯಾಪ್ತಿಯಲ್ಲಿ ಅಗಸ ವೃತ್ತಯಲ್ಲಿ ತೊಡಗಿರುವ ಜನರಿಗೆ ಸುಸಜ್ಜಿತವಾದ ವಸತಿ ಸಂಕೀರ್ಣ ನಿರ್ಮಿಸಿದ್ದು, ಅಗತ್ಯ ಸೌಲಭ್ಯಗಳನ್ನು ತುರ್ತಾಗಿ ಸಿದ್ದಪಡಿಸುವಂತೆ ಸೂಚಿಸಿದರು. ಇದೇ ವೇಳೆ ಮುದ್ದಪ್ಪ ಗಾರ್ಡನ್ , ಚೆಟ್ಟಪ್ಪ ಗಾರ್ಡನ್ ಮತ್ತು ಗ್ಯಾಂಗ್‌ಮನ್ ಕ್ವಾಟ್ರರ್ಸ್ನಲ್ಲಿ ನಿರ್ಮಿಸಿರುವ ಮನೆಗಳನ್ನು ಪರಿಶೀಲನೆ ನಡೆಸಿದರು. ಕೊಳಗೇರಿ ಅಭಿವೃದ್ದಿ ಮಂಡಳಿ ವತಿಯಿಂದ ಕೈಗೊಂಡಿರುವ ಬಹುಮಹಡಿ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಫೋನ್ ಮೂಲಕ ತಿಳಿಸಿದರು. ಇನ್ನಷ್ಟು ಮನೆಗಳನ್ನು ನಿರ್ಮಿಸಿಕೊಡುವಂತೆ ಕೇಳಿಕೊಂಡ ಮಹಿಳೆಯರಿಗೆ ಸಚಿವರು ಹೊಸದಾಗಿ ಮನೆಗಳನ್ನು ಕಟ್ಟಲಿದ್ದು ಆದ್ಯತೆಯ ಮೇರೆಗೆ ನೀಡಲಾಗುವುದು ಎಂದು ಭರವಸೆ ನೀಡಿದರು.

*ನಿವಾಸಿಗಳ ಸಂಘಟನೆ ಜೊತೆ ಚರ್ಚೆ*

ಕೊಕ್ ಟೌನ್ ನಿವಾಸಿಗಳ ಸಂಘದವರ ಜತೆಗೆ ಸಚಿವ ಜಾರ್ಜ್ ಹೈಸ್ಟ್ರೀಟ್ ಉದ್ಯಾನದಲ್ಲಿ ಸಭೆ ನಡೆಸಿದ ಸಚಿವರು, ನಿವಾಸಿಗಳ ಬೇಡಿಕೆಗಳನ್ನು ಪಡೆದು ಹಳೆಯ ಮತ್ತು ಕೆಟ್ಟಿರುವ ಟ್ರಾನ್ಸ್‌ಫಾರ್ಮರ್‌ಗಳನ್ನುಮಾರ್ಚ್‌ ಅಂತ್ಯದೊಳಗೆ ಬದಲಾಯಿಸಲು ಸೂಚನೆ ನೀಡಿದರು. ಎಂಎಲ್‌ಎ ಅನುದಾನದಲ್ಲಿ ಸಿಸಿಟಿವಿಗಳನ್ನು ಅಳವಡಿಸಿ ಹತ್ತಿರದ ಪೊಲೀಸ್‌ ಠಾಣೆಯಿಂದ ನಿಗಾವಹಿಸುವಂತೆ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜೀವನಹಳ್ಳಿಯಲ್ಲಿ ಕೇಳಚಂದ್ರ ಫೌಂಡೇಷನ್ ವತಿಯಿಂದ ನಡೆಸಲಾಗುತ್ತಿರುವ ಕೌಶಲ್ಯ ಕೇಂದ್ರಕ್ಕೆ ತೆರಳಿದ ಸಚಿವ ಜಾರ್ಜ್, ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಮಾತನಾಡಿಸಿದರು. ಕೌಶಲ್ಯ ಕೇಂದ್ರಕ್ಕೆ ಅಗತ್ಯವಿರುವ ನೆರವನ್ನು ಒದಗಿಸುವುದಾಗಿ ಕೇಂದ್ರದ ಮುಖ್ಯಸ್ಥರಿಗೆ ಭರವಸೆ ನೀಡಿದರು.

ಸತ್ಯನಗರದಲ್ಲಿ ಎಂಬೆಸ್ಸಿ ಗಾಲ್ಫ್ ಲಿಂಕ್ಸ್ ಬ್ಯುಸಿನೆಸ್ ಪಾರ್ಕ್‌ನ ಆರ್ಥಿಕ ಬೆಂಬಲದೊಂದಿಗೆ ನಡೆಸಲಾಗುತ್ತಿರುವ ಅಂಗನವಾಡಿ ಹಾಗೂ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಸಚಿವ ಕೆ.ಜೆ ಜಾರ್ಜ್ ಮಕ್ಕಳೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.

*ರಂಜಾನ್ ಹಬ್ಬಕ್ಕೆ ಶುಭಕೋರಿ, ಆಹಾರ ಕಿಟ್ ವಿತರಣೆ*

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕಮ್ಮನಹಳ್ಳಿಯಲ್ಲಿ ರಂಜಾನ್ ಆಚರಣೆಯಲ್ಲಿರುವ ಮುಸ್ಲೀಮರ ಜತೆಗೆ ಮಧ್ಯಾಹ್ನದ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಮುಖಂಡರಾದ ಬಾಬಾ ಅಲಿಖಾನ್ ನೇತೃತ್ವದಲ್ಲಿ ಆಯೋಜಿಸಿದ್ದ ಆಹಾರ ಕಿಟ್ ವಿತರಣೆಯಲ್ಲಿ ಭಾಗವಹಿಸಿ, ನೆರೆದಿದ್ದ ನೂರಾರು ಮಹಿಳೆಯರಿಗೆ ಕಿಟ್‌ಗಳನ್ನು ವಿತರಿಸಿದರು.

ಸಚಿವರೊಂದಿಗೆ ಕ್ಷೇತ್ರದ ಮುಖಂಡರಾದ ರಘು ದೇವರಾಜ್, ಚಕ್ರವರ್ತಿ, ಆಶಾ, ರೂಪ ಮತ್ತು ಸಚಿವರ ವಿಶೇಷಾಧಿಕಾರಿಗಳು, ಜಿಬಿಎ, ಬೆಂಗಳೂರು ಜಲ ಮಂಡಳಿ, ಬೆಸ್ಕಾಂ ಹಾಗೂ ಪೊಲೀಸ್ ಅಧಿಕಾರಿಗಳು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

6 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

7 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

7 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

9 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

12 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

13 hours ago