ಜೀ ಕನ್ನಡ ನ್ಯೂಸ್ ವತಿಯಿಂದ ಬೆಂಗಳೂರಿನ, ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ಯುವ ಸಾಧಕರನ್ನು ಗುರ್ತಿಸಿ ಗೌರವಿಸುವ “ಯುವರತ್ನ” ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.
ಸಾಮಾಜಿಕ, ರಾಜಕೀಯ, ಶಿಕ್ಷಣ, ವೈದ್ಯಕೀಯ, ಕ್ರೀಡಾ, ಕೈಗಾರಿಕಾ, ಖಾಸಗಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು, ತಳಮಟ್ಟದಿಂದ ಬೆಳೆದು ಎಲೆಮರೆ ಕಾಯಿಯಂತೆ ಇರುವ ಉದ್ಯಮಿಗಳನ್ನು ಗುರ್ತಿಸುವ ಕಾರ್ಯಕ್ರಮವೇ ಯುವರತ್ನ.
ಯುವಜನಕ್ಕೆ ಸ್ಫೂರ್ತಿಯಾಗುವ ನಿಟ್ಟಿನಲ್ಲಿ ಸಾಧಕರನ್ನು ಗುರ್ತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಜೀ ಕನ್ನಡ ನ್ಯೂಸ್ ಮಾಡುತ್ತಿದೆ. ಅದರಂತೆ 2023-24ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಒಟ್ಟು 35 ಜನ ಯುವ ಸಾಧಕರು ಆಯ್ಕೆಯಾಗಿದ್ದರು. ಅವರೆಲ್ಲರನ್ನೂ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಿ ಗೌರವಿಸಿ ಯುವರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಶಿವರಾಜ್ತಂಗಡಗಿ, ಹೈದರಬಾದ್ ಕರ್ನಾಟಕದಲ್ಲಿಯೂ ಇಂಥಹ ಕಾರ್ಯಕ್ರಮಗಳು ಆಗಬೇಕು ಎಂದರು. ಸಂತೋಷ್ಲಾಡ್ ಅವರು, ಇಂತಹ ಕಾರ್ಯಕ್ರಮಗಳು ಯುವಜನತೆಗೆ ಸ್ಫೂರ್ತಿ ಎಂದರು. ಸಚಿವ ಚಲುವರಾಯಸ್ವಾಮೀ ಅವರು ಮಾತನಾಡಿ, ಸಾಧಕರ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿದರು. ರಾಮಲಿಂಗರೆಡ್ಡಿ ಅವರು ಯುವ ಸಾಧಕರ ಸಾಧನೆಯನ್ನು ಕೊಂಡಾಡಿದರು.
ಜೀ ಕನ್ನಡ ಗುರ್ತಿಸಿದ್ದ ಯುವರತ್ನ ಪ್ರಶಸ್ತಿಗೆ ಭಾಜನರಾದ ಸಾಧಕರಿಗೆ, ರಾಜಕೀಯ ಗಣ್ಯರು ಮತ್ತು ಚಿತ್ರ ತಾರೆಯರು ಸನ್ಮಾನ ಮಾಡಿ ಯುವರತ್ನ ಪ್ರಶಸ್ತಿ ಪ್ರಧಾನ ಮಾಡಿದರು.
ಜೀ ಕನ್ನಡ ನ್ಯೂಸ್ ಪ್ರಧಾನ ಸಂಪಾಕ ರವಿ.ಎಸ್ ಗೌಡ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರು ಹಾಗೂ ಯುವರತ್ನ ಪ್ರಶಸ್ತಿಗೆ ಭಾಜನರಾದ ಎಲ್ಲರಿಗೂ ಶುಭಕೋರಿದರು.
ಜೀ ಕನ್ನಡ ನ್ಯೂಸ್ನ ಯುವರತ್ನ ಪ್ರಶಸ್ತಿಗೆ ಆಯ್ಕೆಯಾದವರ ವಿವರ ಕೆಳಕಂಡತಿದೆ.
1 ಡಾ. ಮನೋಜ್ ಕುಮಾರ್ ಕೃಷ್ಣಪ್ಪ – ಇಟಾಚಿ ಸಂಸ್ಥೆಯ ಹೋಲ್ ಟೈಮ್ ಡೈರೆಕ್ಟರ್ ಮತ್ತು ಕಂಟ್ರಿ ಹೆಡ್
2 ಬಸವರಾಜಪ್ಪ ಮಲ್ಲಪ್ಪ ಜರಾಲಿ – ಹಿರಿಯ ವಕೀಲರು ಹಾಗೂ ಬಾರ್ ಅಸೋಷಿಯೇಷನ್ ಅಧ್ಯಕ್ಷರು
3 ಸಿಎ ದಯಾನಂದ್ ಬೊಂಗಾಳೆ – ಹೂಡಿಕೆದಾರರು, ವರ್ತಕರು, ತರಬೇತುದಾರರು
4 ನವೀನ್ ಅಲ್ಮಾಜೆ – ಉದ್ಯಮಿ
5 ಡಾ. ಸತ್ಯಪ್ರಸಾದ್ ಶೆಟ್ಟಿ- ವೈದ್ಯರು
6 ಭರತ್ ಗೌಡ S V – ರಾಜಕೀಯ ಸಂಘಟಕರು
7 Dr. M.G.ರಂಗಧಾಮಯ್ಯ-ರಾಜಕೀಯ ಮುಖಂಡರು ಹಾಗೂ ಸಮಾಜ ಸೇವಕರು
8 ಶಿವರಾಜ್ ದೇಶ್ಮುಖ್ – ಸಮಾಜ ಸೇವಕರು
9 ಗಿರಿಮಲ್ಲಪ್ಪ ಕಲ್ಲಪ್ಪ ಜೋಗೂರ್-ಉದ್ಯ್ಯಮಿ
10 ಡಾ.S .ಛಾಯಾಕುಮಾರಿ-ಶಿಕ್ಷಣ ತಜ್ಞರು
11 ವಿಶ್ವನಾಥ್ G P. – ಕನ್ನಡಪರ ಹೋರಾಟಗಾರರು
12 T V. ಬಾಬು – ಸಮಾಜ ಸೇವಕರು ಹಾಗೂ ಯುವ ಮುಖಂಡರು
13 ಶ್ರೀ ಮಹದೇಶ್ವರ ಸ್ವಾಮೀಜಿ – ಉಪಾಧ್ಯಕ್ಷರು, ಬಸವಧರ್ಮ ಪೀಠ – ಮಹಾಮನೆ ಮಹಾಮಠ ಕೂಡಲಸಂಗಮ
14 ಬಸಲಿಂಗಪ್ಪ ನಿಂಗನೂರ್ – ಶಿಕ್ಷಣ ಪ್ರೇಮಿ
15 ಮಹಾಂತೇಶ್ ಟಿ. ಪೂಜಾರ್ – ಉದ್ಯಮಿ
16 ಅದಿತಿ – ಹೆಲ್ಪಿಂಗ್ ಹಾರ್ಟ್ಸ್ ಸಂಸ್ಥೆಯ ಅಧ್ಯಕ್ಷರು
17 G D.ಹರೀಶ್ ಗೌಡ – ಜನಪ್ರಿಯ ಶಾಸಕರು, ಹುಣಸೂರು ಕ್ಷೇತ್ರ
18 ಅರುಣ್ ಯೋಗಿರಾಜ್ – ಶಿಲ್ಪಿ
19 ಉದಯ್ ಶಿವಕುಮಾರ್ – ಉದ್ಯಮಿ
20 M.ಬಸವರಾಜ್ ಪಡುಕೋಟೆ – ಕನ್ನಡಪರ ಹೋರಾಟಗಾರ
21 ಸುರೇಶ್ ಸಿದ್ದಗೌಡ ನಾರಪ್ಪಗೋಳ – ಉದ್ಯಮಿ
22 ಡಾ.R S.ಶೆಟ್ಟಿಯನ್ – ಅಥೇನಾ ಹಾಸ್ಪಿಟಲ್ ಸಂಸ್ಥಾಪಕರು
23 ವೀಣಾ ಕಾಶಪ್ಪನವರ್ – ರಾಜಕೀಯ ಮುಖಂಡರು ಹಾಗೂ ಸಮಾಜ ಸೇವಕರು
24 ರಾಮೋಜಿಗೌಡ – ಶಿಕ್ಷಣ ಪ್ರೇಮಿ , ಯುವ ನಾಯಕರು
25 ಗಿರಿಧರ್ ರಾಜು K K – ಜ್ಯೋತಿಷಿ ಹಾಗೂ ವಾಸ್ತು ತಜ್ಞರು
26 ಡಾ. ಶ್ರೀಹರಿ ಕುಲಕರ್ಣಿ – ವೈದ್ಯ್ಯರು
27 ಚಿರಂತ್ ಗೌಡ – ಯುವ ಉದ್ಯಮಿ
28 ಡಾ. ಗೀತಾ ಗುಡ್ಡೆಮನೆ – ಕ್ರೀಡೆ ಮತ್ತು ಶಿಕ್ಷಣ
29 M. ವೆಂಕಟೇಶ್ – ರಾಜಕೀಯ ಮುಖಂಡರು ಹಾಗೂ ಸಮಾಜ ಸೇವಕರು
30 ಅನಿಲ್ ನಾಚಪ್ಪ – ರಾಜಕೀಯ ಮುಖಂಡರು, ಉದ್ಯಮಿ
31 ಸಂದೀಪ್ ಕುಮಾರ್ K K – ನುಕೋಟ್ ಸಂಸ್ಥೆಯ ನಿರ್ದೇಶಕರು
32 ಮುನಿರಾಜಪ್ಪ N . – ಅಣ್ಣೇಶ್ವರ ಗ್ರಾ.ಪಂ ಉಪಾಧ್ಯಕ್ಷರು
33 N K ಮಹೇಶ್ ಕುಮಾರ್ – ಯುವ ನಾಯಕರು ಹಾಗೂ ಸಮಾಜ ಸೇವಕರು
34 ಡಾ. ಶೇಖರ್ R ಮಾನೆ – ವೈದ್ಯರು ಹಾಗೂ ಸಮಾಜ ಸೇವಕರು
35 spl case ACF ಕೃಷ್ಣಮೂರ್ತಿ-ಸಮಾಜ ಸೇವಕರು
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…