ಜೀ ಕನ್ನಡ ನ್ಯೂಸ್ ವತಿಯಿಂದ ಬೆಂಗಳೂರಿನ, ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ಯುವ ಸಾಧಕರನ್ನು ಗುರ್ತಿಸಿ ಗೌರವಿಸುವ “ಯುವರತ್ನ” ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.
ಸಾಮಾಜಿಕ, ರಾಜಕೀಯ, ಶಿಕ್ಷಣ, ವೈದ್ಯಕೀಯ, ಕ್ರೀಡಾ, ಕೈಗಾರಿಕಾ, ಖಾಸಗಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು, ತಳಮಟ್ಟದಿಂದ ಬೆಳೆದು ಎಲೆಮರೆ ಕಾಯಿಯಂತೆ ಇರುವ ಉದ್ಯಮಿಗಳನ್ನು ಗುರ್ತಿಸುವ ಕಾರ್ಯಕ್ರಮವೇ ಯುವರತ್ನ.
ಯುವಜನಕ್ಕೆ ಸ್ಫೂರ್ತಿಯಾಗುವ ನಿಟ್ಟಿನಲ್ಲಿ ಸಾಧಕರನ್ನು ಗುರ್ತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಜೀ ಕನ್ನಡ ನ್ಯೂಸ್ ಮಾಡುತ್ತಿದೆ. ಅದರಂತೆ 2023-24ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಒಟ್ಟು 35 ಜನ ಯುವ ಸಾಧಕರು ಆಯ್ಕೆಯಾಗಿದ್ದರು. ಅವರೆಲ್ಲರನ್ನೂ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಿ ಗೌರವಿಸಿ ಯುವರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಶಿವರಾಜ್ತಂಗಡಗಿ, ಹೈದರಬಾದ್ ಕರ್ನಾಟಕದಲ್ಲಿಯೂ ಇಂಥಹ ಕಾರ್ಯಕ್ರಮಗಳು ಆಗಬೇಕು ಎಂದರು. ಸಂತೋಷ್ಲಾಡ್ ಅವರು, ಇಂತಹ ಕಾರ್ಯಕ್ರಮಗಳು ಯುವಜನತೆಗೆ ಸ್ಫೂರ್ತಿ ಎಂದರು. ಸಚಿವ ಚಲುವರಾಯಸ್ವಾಮೀ ಅವರು ಮಾತನಾಡಿ, ಸಾಧಕರ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿದರು. ರಾಮಲಿಂಗರೆಡ್ಡಿ ಅವರು ಯುವ ಸಾಧಕರ ಸಾಧನೆಯನ್ನು ಕೊಂಡಾಡಿದರು.
ಜೀ ಕನ್ನಡ ಗುರ್ತಿಸಿದ್ದ ಯುವರತ್ನ ಪ್ರಶಸ್ತಿಗೆ ಭಾಜನರಾದ ಸಾಧಕರಿಗೆ, ರಾಜಕೀಯ ಗಣ್ಯರು ಮತ್ತು ಚಿತ್ರ ತಾರೆಯರು ಸನ್ಮಾನ ಮಾಡಿ ಯುವರತ್ನ ಪ್ರಶಸ್ತಿ ಪ್ರಧಾನ ಮಾಡಿದರು.
ಜೀ ಕನ್ನಡ ನ್ಯೂಸ್ ಪ್ರಧಾನ ಸಂಪಾಕ ರವಿ.ಎಸ್ ಗೌಡ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರು ಹಾಗೂ ಯುವರತ್ನ ಪ್ರಶಸ್ತಿಗೆ ಭಾಜನರಾದ ಎಲ್ಲರಿಗೂ ಶುಭಕೋರಿದರು.
ಜೀ ಕನ್ನಡ ನ್ಯೂಸ್ನ ಯುವರತ್ನ ಪ್ರಶಸ್ತಿಗೆ ಆಯ್ಕೆಯಾದವರ ವಿವರ ಕೆಳಕಂಡತಿದೆ.
1 ಡಾ. ಮನೋಜ್ ಕುಮಾರ್ ಕೃಷ್ಣಪ್ಪ – ಇಟಾಚಿ ಸಂಸ್ಥೆಯ ಹೋಲ್ ಟೈಮ್ ಡೈರೆಕ್ಟರ್ ಮತ್ತು ಕಂಟ್ರಿ ಹೆಡ್
2 ಬಸವರಾಜಪ್ಪ ಮಲ್ಲಪ್ಪ ಜರಾಲಿ – ಹಿರಿಯ ವಕೀಲರು ಹಾಗೂ ಬಾರ್ ಅಸೋಷಿಯೇಷನ್ ಅಧ್ಯಕ್ಷರು
3 ಸಿಎ ದಯಾನಂದ್ ಬೊಂಗಾಳೆ – ಹೂಡಿಕೆದಾರರು, ವರ್ತಕರು, ತರಬೇತುದಾರರು
4 ನವೀನ್ ಅಲ್ಮಾಜೆ – ಉದ್ಯಮಿ
5 ಡಾ. ಸತ್ಯಪ್ರಸಾದ್ ಶೆಟ್ಟಿ- ವೈದ್ಯರು
6 ಭರತ್ ಗೌಡ S V – ರಾಜಕೀಯ ಸಂಘಟಕರು
7 Dr. M.G.ರಂಗಧಾಮಯ್ಯ-ರಾಜಕೀಯ ಮುಖಂಡರು ಹಾಗೂ ಸಮಾಜ ಸೇವಕರು
8 ಶಿವರಾಜ್ ದೇಶ್ಮುಖ್ – ಸಮಾಜ ಸೇವಕರು
9 ಗಿರಿಮಲ್ಲಪ್ಪ ಕಲ್ಲಪ್ಪ ಜೋಗೂರ್-ಉದ್ಯ್ಯಮಿ
10 ಡಾ.S .ಛಾಯಾಕುಮಾರಿ-ಶಿಕ್ಷಣ ತಜ್ಞರು
11 ವಿಶ್ವನಾಥ್ G P. – ಕನ್ನಡಪರ ಹೋರಾಟಗಾರರು
12 T V. ಬಾಬು – ಸಮಾಜ ಸೇವಕರು ಹಾಗೂ ಯುವ ಮುಖಂಡರು
13 ಶ್ರೀ ಮಹದೇಶ್ವರ ಸ್ವಾಮೀಜಿ – ಉಪಾಧ್ಯಕ್ಷರು, ಬಸವಧರ್ಮ ಪೀಠ – ಮಹಾಮನೆ ಮಹಾಮಠ ಕೂಡಲಸಂಗಮ
14 ಬಸಲಿಂಗಪ್ಪ ನಿಂಗನೂರ್ – ಶಿಕ್ಷಣ ಪ್ರೇಮಿ
15 ಮಹಾಂತೇಶ್ ಟಿ. ಪೂಜಾರ್ – ಉದ್ಯಮಿ
16 ಅದಿತಿ – ಹೆಲ್ಪಿಂಗ್ ಹಾರ್ಟ್ಸ್ ಸಂಸ್ಥೆಯ ಅಧ್ಯಕ್ಷರು
17 G D.ಹರೀಶ್ ಗೌಡ – ಜನಪ್ರಿಯ ಶಾಸಕರು, ಹುಣಸೂರು ಕ್ಷೇತ್ರ
18 ಅರುಣ್ ಯೋಗಿರಾಜ್ – ಶಿಲ್ಪಿ
19 ಉದಯ್ ಶಿವಕುಮಾರ್ – ಉದ್ಯಮಿ
20 M.ಬಸವರಾಜ್ ಪಡುಕೋಟೆ – ಕನ್ನಡಪರ ಹೋರಾಟಗಾರ
21 ಸುರೇಶ್ ಸಿದ್ದಗೌಡ ನಾರಪ್ಪಗೋಳ – ಉದ್ಯಮಿ
22 ಡಾ.R S.ಶೆಟ್ಟಿಯನ್ – ಅಥೇನಾ ಹಾಸ್ಪಿಟಲ್ ಸಂಸ್ಥಾಪಕರು
23 ವೀಣಾ ಕಾಶಪ್ಪನವರ್ – ರಾಜಕೀಯ ಮುಖಂಡರು ಹಾಗೂ ಸಮಾಜ ಸೇವಕರು
24 ರಾಮೋಜಿಗೌಡ – ಶಿಕ್ಷಣ ಪ್ರೇಮಿ , ಯುವ ನಾಯಕರು
25 ಗಿರಿಧರ್ ರಾಜು K K – ಜ್ಯೋತಿಷಿ ಹಾಗೂ ವಾಸ್ತು ತಜ್ಞರು
26 ಡಾ. ಶ್ರೀಹರಿ ಕುಲಕರ್ಣಿ – ವೈದ್ಯ್ಯರು
27 ಚಿರಂತ್ ಗೌಡ – ಯುವ ಉದ್ಯಮಿ
28 ಡಾ. ಗೀತಾ ಗುಡ್ಡೆಮನೆ – ಕ್ರೀಡೆ ಮತ್ತು ಶಿಕ್ಷಣ
29 M. ವೆಂಕಟೇಶ್ – ರಾಜಕೀಯ ಮುಖಂಡರು ಹಾಗೂ ಸಮಾಜ ಸೇವಕರು
30 ಅನಿಲ್ ನಾಚಪ್ಪ – ರಾಜಕೀಯ ಮುಖಂಡರು, ಉದ್ಯಮಿ
31 ಸಂದೀಪ್ ಕುಮಾರ್ K K – ನುಕೋಟ್ ಸಂಸ್ಥೆಯ ನಿರ್ದೇಶಕರು
32 ಮುನಿರಾಜಪ್ಪ N . – ಅಣ್ಣೇಶ್ವರ ಗ್ರಾ.ಪಂ ಉಪಾಧ್ಯಕ್ಷರು
33 N K ಮಹೇಶ್ ಕುಮಾರ್ – ಯುವ ನಾಯಕರು ಹಾಗೂ ಸಮಾಜ ಸೇವಕರು
34 ಡಾ. ಶೇಖರ್ R ಮಾನೆ – ವೈದ್ಯರು ಹಾಗೂ ಸಮಾಜ ಸೇವಕರು
35 spl case ACF ಕೃಷ್ಣಮೂರ್ತಿ-ಸಮಾಜ ಸೇವಕರು
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…