ಜುಲೈ 1ರಂದು ನಾಗರಿಕ ಬಂದೂಕು ತರಬೇತಿ ಶಿಬಿರ

ಜುಲೈ 1ರಂದು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ.

ಎಲ್ಲ ರೀತಿಯ ಶಸ್ತ್ರಾಸ್ತ್ರಗಳ ಬಳಕೆಯ ಬಗ್ಗೆ ತರಬೇತಿಯನ್ನು ನೀಡಲಾಗುತ್ತದೆ. ಬಂದೂಕು ತರಬೇತಿ ಪಡೆಯಲು ಇಚ್ಚಿಸುವವರಿಗೆ ಅರ್ಜಿಗಳನ್ನು ಠಾಣೆಯಲ್ಲಿಯೇ ವಿತರಿಸಲಾಗುತ್ತದೆ.

ಸಾರ್ವಜನಿಕರು ಸ್ವತಹ ಬಂದೂಕು ಲೈಸೆನ್ಸ್ ಪಡೆಯಲು ಹಾಗೂ ಬಂದೂಕು ಪರವಾನಗಿ ನವೀಕರಣ ಮಾಡಿಸಿಕೊಳ್ಳಲು ಇಚ್ಛಿಸುವವರು ಈ ತರಬೇತಿಯನ್ನು ಪಡೆದು ಸದುಪಯೋಗಪಡಿಸಿಕೊಳ್ಳಲು ಪೊಲೀಸ್ ಇಲಾಖೆ ಕೋರಿದೆ.

ನಿಬಂಧನೆಗಳು:-

 1. ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.

 2. ಅಭ್ಯರ್ಥಿಯು 21 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು ಮತ್ತು ಆರೋಗ್ಯವಂತರಾಗಿರಬೇಕು.

 3. ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಬಾರದು.

 4. ನಿಷೇಧಿತ ಶಸ್ತ್ರಾಸ್ತ್ರದೊಂದಿಗೆ ತರಬೇತಿ ನೀಡಲಾಗುವುದು.

 -: ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:-

 1. ಅರ್ಜಿಯೊಂದಿಗೆ ಅಭ್ಯರ್ಥಿಗಳ 03 ಭಾವಚಿತ್ರಗಳನ್ನು ಕಡ್ಡಾಯವಾಗಿ ಒದಗಿಸಬೇಕು ಅದರಲ್ಲಿ ಒಂದು ಭಾವಚಿತ್ರವನ್ನು ಅರ್ಜಿಗೆ ಅಂಟಿಸಬೇಕು.

 2. ಪ್ರಾಥಮಿಕ ವಿಚಾರಣೆ ನಡೆಸಿದ ನಂತರ ಅಂಚೆ ಕಚೇರಿಯಿಂದ ಅರ್ಜಿಯ ದೃಢೀಕರಣ.

 3. ವೈದ್ಯಕೀಯ ಪ್ರಮಾಣಪತ್ರ ಕಡ್ಡಾಯವಾಗಿದೆ.

 4. ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ನೀಡುವುದು.

 ಮೇಲಿನ ನಿಗದಿತ ಷರತ್ತುಗಳು/ನಿಯಮಗಳನ್ನು ಪಾಲಿಸದಿದ್ದಲ್ಲಿ, ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ಠಾಣೆಗಳಿಂದ ಸ್ವೀಕರಿಸಲು ಮತ್ತು ದಿನಾಂಕ:29/06/2024 ರೊಳಗೆ ಮಾಹಿತಿಯನ್ನು ಕಡ್ಡಾಯವಾಗಿ ಈ ಕಚೇರಿಗೆ ಸಲ್ಲಿಸಲು ಕೋರಲಾಗಿದೆ.  ತರಬೇತಿಯನ್ನು ದಿನಾಂಕ:01/07/2024 ರಿಂದ 07/07/2024 ರವರೆಗೆ ಆಯೋಜಿಸಲಾಗುವುದು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

2 minutes ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

2 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

2 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

3 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

7 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

8 hours ago