ಜುಲೈ 1ರಂದು ನಾಗರಿಕ ಬಂದೂಕು ತರಬೇತಿ ಶಿಬಿರ

ಜುಲೈ 1ರಂದು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ.

ಎಲ್ಲ ರೀತಿಯ ಶಸ್ತ್ರಾಸ್ತ್ರಗಳ ಬಳಕೆಯ ಬಗ್ಗೆ ತರಬೇತಿಯನ್ನು ನೀಡಲಾಗುತ್ತದೆ. ಬಂದೂಕು ತರಬೇತಿ ಪಡೆಯಲು ಇಚ್ಚಿಸುವವರಿಗೆ ಅರ್ಜಿಗಳನ್ನು ಠಾಣೆಯಲ್ಲಿಯೇ ವಿತರಿಸಲಾಗುತ್ತದೆ.

ಸಾರ್ವಜನಿಕರು ಸ್ವತಹ ಬಂದೂಕು ಲೈಸೆನ್ಸ್ ಪಡೆಯಲು ಹಾಗೂ ಬಂದೂಕು ಪರವಾನಗಿ ನವೀಕರಣ ಮಾಡಿಸಿಕೊಳ್ಳಲು ಇಚ್ಛಿಸುವವರು ಈ ತರಬೇತಿಯನ್ನು ಪಡೆದು ಸದುಪಯೋಗಪಡಿಸಿಕೊಳ್ಳಲು ಪೊಲೀಸ್ ಇಲಾಖೆ ಕೋರಿದೆ.

ನಿಬಂಧನೆಗಳು:-

 1. ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.

 2. ಅಭ್ಯರ್ಥಿಯು 21 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು ಮತ್ತು ಆರೋಗ್ಯವಂತರಾಗಿರಬೇಕು.

 3. ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಬಾರದು.

 4. ನಿಷೇಧಿತ ಶಸ್ತ್ರಾಸ್ತ್ರದೊಂದಿಗೆ ತರಬೇತಿ ನೀಡಲಾಗುವುದು.

 -: ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:-

 1. ಅರ್ಜಿಯೊಂದಿಗೆ ಅಭ್ಯರ್ಥಿಗಳ 03 ಭಾವಚಿತ್ರಗಳನ್ನು ಕಡ್ಡಾಯವಾಗಿ ಒದಗಿಸಬೇಕು ಅದರಲ್ಲಿ ಒಂದು ಭಾವಚಿತ್ರವನ್ನು ಅರ್ಜಿಗೆ ಅಂಟಿಸಬೇಕು.

 2. ಪ್ರಾಥಮಿಕ ವಿಚಾರಣೆ ನಡೆಸಿದ ನಂತರ ಅಂಚೆ ಕಚೇರಿಯಿಂದ ಅರ್ಜಿಯ ದೃಢೀಕರಣ.

 3. ವೈದ್ಯಕೀಯ ಪ್ರಮಾಣಪತ್ರ ಕಡ್ಡಾಯವಾಗಿದೆ.

 4. ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ನೀಡುವುದು.

 ಮೇಲಿನ ನಿಗದಿತ ಷರತ್ತುಗಳು/ನಿಯಮಗಳನ್ನು ಪಾಲಿಸದಿದ್ದಲ್ಲಿ, ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ಠಾಣೆಗಳಿಂದ ಸ್ವೀಕರಿಸಲು ಮತ್ತು ದಿನಾಂಕ:29/06/2024 ರೊಳಗೆ ಮಾಹಿತಿಯನ್ನು ಕಡ್ಡಾಯವಾಗಿ ಈ ಕಚೇರಿಗೆ ಸಲ್ಲಿಸಲು ಕೋರಲಾಗಿದೆ.  ತರಬೇತಿಯನ್ನು ದಿನಾಂಕ:01/07/2024 ರಿಂದ 07/07/2024 ರವರೆಗೆ ಆಯೋಜಿಸಲಾಗುವುದು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

8 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

9 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago