ಜುಲೈ 1ರಂದು ನಾಗರಿಕ ಬಂದೂಕು ತರಬೇತಿ ಶಿಬಿರ

ಜುಲೈ 1ರಂದು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ.

ಎಲ್ಲ ರೀತಿಯ ಶಸ್ತ್ರಾಸ್ತ್ರಗಳ ಬಳಕೆಯ ಬಗ್ಗೆ ತರಬೇತಿಯನ್ನು ನೀಡಲಾಗುತ್ತದೆ. ಬಂದೂಕು ತರಬೇತಿ ಪಡೆಯಲು ಇಚ್ಚಿಸುವವರಿಗೆ ಅರ್ಜಿಗಳನ್ನು ಠಾಣೆಯಲ್ಲಿಯೇ ವಿತರಿಸಲಾಗುತ್ತದೆ.

ಸಾರ್ವಜನಿಕರು ಸ್ವತಹ ಬಂದೂಕು ಲೈಸೆನ್ಸ್ ಪಡೆಯಲು ಹಾಗೂ ಬಂದೂಕು ಪರವಾನಗಿ ನವೀಕರಣ ಮಾಡಿಸಿಕೊಳ್ಳಲು ಇಚ್ಛಿಸುವವರು ಈ ತರಬೇತಿಯನ್ನು ಪಡೆದು ಸದುಪಯೋಗಪಡಿಸಿಕೊಳ್ಳಲು ಪೊಲೀಸ್ ಇಲಾಖೆ ಕೋರಿದೆ.

ನಿಬಂಧನೆಗಳು:-

 1. ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.

 2. ಅಭ್ಯರ್ಥಿಯು 21 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು ಮತ್ತು ಆರೋಗ್ಯವಂತರಾಗಿರಬೇಕು.

 3. ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಬಾರದು.

 4. ನಿಷೇಧಿತ ಶಸ್ತ್ರಾಸ್ತ್ರದೊಂದಿಗೆ ತರಬೇತಿ ನೀಡಲಾಗುವುದು.

 -: ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:-

 1. ಅರ್ಜಿಯೊಂದಿಗೆ ಅಭ್ಯರ್ಥಿಗಳ 03 ಭಾವಚಿತ್ರಗಳನ್ನು ಕಡ್ಡಾಯವಾಗಿ ಒದಗಿಸಬೇಕು ಅದರಲ್ಲಿ ಒಂದು ಭಾವಚಿತ್ರವನ್ನು ಅರ್ಜಿಗೆ ಅಂಟಿಸಬೇಕು.

 2. ಪ್ರಾಥಮಿಕ ವಿಚಾರಣೆ ನಡೆಸಿದ ನಂತರ ಅಂಚೆ ಕಚೇರಿಯಿಂದ ಅರ್ಜಿಯ ದೃಢೀಕರಣ.

 3. ವೈದ್ಯಕೀಯ ಪ್ರಮಾಣಪತ್ರ ಕಡ್ಡಾಯವಾಗಿದೆ.

 4. ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ನೀಡುವುದು.

 ಮೇಲಿನ ನಿಗದಿತ ಷರತ್ತುಗಳು/ನಿಯಮಗಳನ್ನು ಪಾಲಿಸದಿದ್ದಲ್ಲಿ, ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ಠಾಣೆಗಳಿಂದ ಸ್ವೀಕರಿಸಲು ಮತ್ತು ದಿನಾಂಕ:29/06/2024 ರೊಳಗೆ ಮಾಹಿತಿಯನ್ನು ಕಡ್ಡಾಯವಾಗಿ ಈ ಕಚೇರಿಗೆ ಸಲ್ಲಿಸಲು ಕೋರಲಾಗಿದೆ.  ತರಬೇತಿಯನ್ನು ದಿನಾಂಕ:01/07/2024 ರಿಂದ 07/07/2024 ರವರೆಗೆ ಆಯೋಜಿಸಲಾಗುವುದು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

1 hour ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

5 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

12 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

13 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago