ನಗರದ ಸಂಜಯ್ ನಗರದಲ್ಲಿ ಜು.14 (ಭಾನುವಾರ) ಕನ್ನಡಪಕ್ಷದ ಸದಸ್ಯತ್ವ ನೋಂದಣೆ ಅಭಿಯಾನ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಪಕ್ಷದ ಮುಖಂಡರಾದ ಸಂಜೀವ್ ನಾಯಕ ಹೇಳಿದರು.
ನಗರದ ಕನ್ನಡ ಪಕ್ಷದ ಕಚೇರಿಯಲ್ಲಿ ಶುಕ್ರವಾರ ನಡೆದ ಸದಸ್ಯತ್ವ ನೋಂದಣೆ ಕುರಿತು ಪತ್ರಿಕಾ ಗೋಷ್ಠಿ ನಡೆಸಿ ಅವರು ಮಾತನಾಡಿದರು.
ತಾಲೂಕಿನಲ್ಲಿ 30 ವರ್ಷಗಳಿಂದ ಕನ್ನಡ ಪಕ್ಷ ಸದೃಢವಾಗಿದ್ದು, ತನ್ನದೇ ಆದ ಕೊಡುಗೆಯನ್ನು ತಾಲೂಕಿಗೆ ನೀಡುತ್ತಾ ಬಂದಿದೆ. ತಾಲೂಕಿನಲ್ಲಿ ರಾಷ್ಟೀಯ ಪಕ್ಷಗಳ ನಡುವೆಯೂ ಗ್ರಾಮ ಪಂಚಾಯ್ತಿಯಿಂದ ಹಿಡಿದು ನಗರ ಸಭೆ ಸದಸ್ಯರ ಚುನಾವಣೆ ವರೆಗೂ ಸ್ಪರ್ಧಿಸಿ ಗೆಲುವುಕಂಡಿದೆ. ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಿನಿಂದಲೇ ಕನ್ನಡ ಪಕ್ಷವನ್ನು ಗಟ್ಟಿಯಾಗಿ ಬೆಳೆಸುವ ನಿಟ್ಟಿನಲ್ಲಿ ಸದಸ್ಯತ್ವ ನೋಂದಣೆ ಅಭಿಯಾನ ನಡೆಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಕನ್ನಡ ಪಕ್ಷದ ರಾಜ್ಯ ಮುಖಂಡರಾದ ಪುರುಷೋತ್ತಮ್ ಆಗಮಿಸಲಿದ್ದು, ರೈತ ಸಂಘದ ಪ್ರಮುಖರಾದ ಸುಲೋಚನಾ ವೆಂಕಟರೆಡ್ಡಿ ಅವರು ಭಾಗವಹಿಸಲಿದ್ದಾರೆ ಎಂದರು.
ಈ ವೇಳೆ ಕನ್ನಡ ಪಕ್ಷದ ಮುಖಂಡರಾದ ಡಿ.ಪಿ ಆಂಜನೇಯ ಮಾತನಾಡಿ, ತಾಲೂಕಿನಲ್ಲಿ ಕನ್ನಡ ಪಕ್ಷ ಮೂರ ದಶಕಗಳಿಂದ ಎಲ್ಲ ಚಳುವಳಿಯಲ್ಲಿ ಮುಕ್ತವಾಗಿ ಭಾಗವಹಿಸಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಬೇಧಬಾವವಿಲ್ಲದೇ ದಲಿತ ಸಮುದಾಯದ ಮುಖಂಡರು, ರೈತ ಸಂಘದ ಮುಖಂಡರು ಹಾಗೂ ಕನ್ನಡ ಭಾಷೆಯನ್ನು ಅಭಿಮಾನಿಸುವ ಪ್ರತಿಯೊಬ್ಬರು ಕೂಡ ಆಗಮಿಸಿ ಕನ್ನಡ ಪಕ್ಷದ ಸದಸ್ಯತ್ವವನ್ನು ಪಡೆಯಬಹುದೆಂದು ನಮ್ಮದು ಕೇವಲ ಭಾಷೆ. ಪ್ರಾದೇಶಿಕತೆ ಹೋರಾಟಕ್ಕೆ ಸೀಮಿತವಾಗದೆ, ಎಲ್ಲಾ ಚಳುವಳಿ ಯಲ್ಲಿ ಭಾಗವಹಿಸಿ ಜನ ಸಾಮನ್ಯನ ಧ್ವನಿಯಾಗಬೇಕೆಂದು ಪಕ್ಷ ಸಿದ್ದಾಂತವಾಗಿದೆ ಎಂದರು
ಈ ವೇಳೆ ಕಾರ್ಯಕ್ರಮದಲ್ಲಿ ತಾಲೂಕು ಕನ್ನಡ ಪಕ್ಷದ ಅಧ್ಯಕ್ಷರಾದ ವೆಂಕಟೇಶ್, ಉಪಾಧ್ಯಕ್ಷ ಗುರುಮೂರ್ತಿ, ಮುಖಂಡರಾದ ಬೋರೇಗೌಡ, ಪರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…