ಜುಲೈ 14ರಂದು ಕನ್ನಡ ಪಕ್ಷದ ಸದಸ್ಯತ್ವ ನೋಂದಣೆ ಅಭಿಯಾನ

ನಗರದ ಸಂಜಯ್ ನಗರದಲ್ಲಿ ಜು.14 (ಭಾನುವಾರ) ಕನ್ನಡಪಕ್ಷದ ಸದಸ್ಯತ್ವ ನೋಂದಣೆ ಅಭಿಯಾನ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಪಕ್ಷದ ಮುಖಂಡರಾದ ಸಂಜೀವ್ ನಾಯಕ ಹೇಳಿದರು.

ನಗರದ ಕನ್ನಡ ಪಕ್ಷದ ಕಚೇರಿಯಲ್ಲಿ ಶುಕ್ರವಾರ ನಡೆದ ಸದಸ್ಯತ್ವ ನೋಂದಣೆ ಕುರಿತು ಪತ್ರಿಕಾ ಗೋಷ್ಠಿ ನಡೆಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ 30 ವರ್ಷಗಳಿಂದ ಕನ್ನಡ ಪಕ್ಷ ಸದೃಢವಾಗಿದ್ದು, ತನ್ನದೇ ಆದ ಕೊಡುಗೆಯನ್ನು ತಾಲೂಕಿಗೆ ನೀಡುತ್ತಾ ಬಂದಿದೆ. ತಾಲೂಕಿನಲ್ಲಿ ರಾಷ್ಟೀಯ ಪಕ್ಷಗಳ ನಡುವೆಯೂ ಗ್ರಾಮ ಪಂಚಾಯ್ತಿಯಿಂದ ಹಿಡಿದು ನಗರ ಸಭೆ ಸದಸ್ಯರ ಚುನಾವಣೆ ವರೆಗೂ ಸ್ಪರ್ಧಿಸಿ ಗೆಲುವುಕಂಡಿದೆ. ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಿನಿಂದಲೇ ಕನ್ನಡ ಪಕ್ಷವನ್ನು ಗಟ್ಟಿಯಾಗಿ ಬೆಳೆಸುವ ನಿಟ್ಟಿನಲ್ಲಿ ಸದಸ್ಯತ್ವ ನೋಂದಣೆ ಅಭಿಯಾನ ನಡೆಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಕನ್ನಡ ಪಕ್ಷದ ರಾಜ್ಯ ಮುಖಂಡರಾದ ಪುರುಷೋತ್ತಮ್ ಆಗಮಿಸಲಿದ್ದು, ರೈತ ಸಂಘದ ಪ್ರಮುಖರಾದ ಸುಲೋಚನಾ ವೆಂಕಟರೆಡ್ಡಿ ಅವರು ಭಾಗವಹಿಸಲಿದ್ದಾರೆ ಎಂದರು.

ಈ ವೇಳೆ ಕನ್ನಡ ಪಕ್ಷದ ಮುಖಂಡರಾದ ಡಿ.ಪಿ ಆಂಜನೇಯ ಮಾತನಾಡಿ, ತಾಲೂಕಿನಲ್ಲಿ ಕನ್ನಡ ಪಕ್ಷ ಮೂರ ದಶಕಗಳಿಂದ ಎಲ್ಲ ಚಳುವಳಿಯಲ್ಲಿ ಮುಕ್ತವಾಗಿ ಭಾಗವಹಿಸಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಬೇಧಬಾವವಿಲ್ಲದೇ ದಲಿತ ಸಮುದಾಯದ ಮುಖಂಡರು, ರೈತ ಸಂಘದ ಮುಖಂಡರು ಹಾಗೂ ಕನ್ನಡ ಭಾಷೆಯನ್ನು ಅಭಿಮಾನಿಸುವ ಪ್ರತಿಯೊಬ್ಬರು ಕೂಡ ಆಗಮಿಸಿ ಕನ್ನಡ ಪಕ್ಷದ ಸದಸ್ಯತ್ವವನ್ನು ಪಡೆಯಬಹುದೆಂದು ನಮ್ಮದು ಕೇವಲ ಭಾಷೆ. ಪ್ರಾದೇಶಿಕತೆ ಹೋರಾಟಕ್ಕೆ ಸೀಮಿತವಾಗದೆ, ಎಲ್ಲಾ ಚಳುವಳಿ ಯಲ್ಲಿ ಭಾಗವಹಿಸಿ ಜನ ಸಾಮನ್ಯನ ಧ್ವನಿಯಾಗಬೇಕೆಂದು ಪಕ್ಷ ಸಿದ್ದಾಂತವಾಗಿದೆ ಎಂದರು

ಈ ವೇಳೆ ಕಾರ್ಯಕ್ರಮದಲ್ಲಿ ತಾಲೂಕು ಕನ್ನಡ ಪಕ್ಷದ ಅಧ್ಯಕ್ಷರಾದ ವೆಂಕಟೇಶ್, ಉಪಾಧ್ಯಕ್ಷ ಗುರುಮೂರ್ತಿ, ಮುಖಂಡರಾದ ಬೋರೇಗೌಡ, ಪರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

6 minutes ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

1 hour ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪ ಕೇಸ್: ಅತ್ಯಾಚಾರ ಆರೋಪ ಸಾಬೀತು: ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು: ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…

4 hours ago

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು: ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣಗಳ ಕಳವು

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…

9 hours ago

ಸಿಂಗ್ರಹಳ್ಳಿ ಗ್ರಾಮದ ಗೋಮಾಳ ಜಮೀನು ಉಳ್ಳವರಿಂದಲೇ ಒತ್ತುವರಿ- ಮುನಿಆಂಜಿನಪ್ಪ ಆರೋಪ

ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಿಂಗರಹಳ್ಳಿ ಗ್ರಾಮದ ಸರ್ವೆ ನಂಬರ್ -6 ರಲ್ಲಿ ಸುಮಾರು 60…

10 hours ago

ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ನಟ ಪ್ರಥಮ್ ವ್ಯಂಗ್ಯ ಆರೋಪ: ದಲಿತ ಸಂಘಟನೆ ಆಕ್ರೋಶ: ಠಾಣೆ ಮುಂದೆ ಪ್ರಥಮ್ ಗೆ ಮಸಿ ಬಳಿಯುವ ಯತ್ನ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರಥಮ್ ಗೆ ಅಂಬೇಡ್ಕರ್ ಸೇನೆ ಹೋರಾಟಗಾರರು ದೊಡ್ಡಬಳ್ಳಾಪುರ…

21 hours ago